Home ಅಂಚೆ ಇಲಾಖೆಯಿಂದ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆ ಬಿಡುಗಡೆ
HomechikamagalurLatest Newsnamma chikmagalur

ಅಂಚೆ ಇಲಾಖೆಯಿಂದ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆ ಬಿಡುಗಡೆ

Share
Share

ಚಿಕ್ಕಮಗಳೂರು: ಅಂಚೆ ಇಲಾಖೆ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆಯನ್ನು ಹೊರತಂದಿದ್ದು, ಇನ್ನು ಮುಂದೆ ಮಲೆನಾಡಿನ ಕಾಫಿ ತೋಟಗಳ ಸೊಬಗು ಅಂಚೆ ಇಲಾಖೆಯ ಮೊಹರಿನಲ್ಲಿ ವಿಜೃಂಭಿಸಲಿದೆ.

ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಇಲಾಖೆಯ ವಿಭಾಗೀಯ ಅಂಚೆ ಅದೀಕ್ಷಕ ಎನ್.ಬಿ. ಶ್ರೀನಾಥ್ ಜಿಲ್ಲೆಯ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮುದ್ರೆಯನ್ನು ಬಿಡುಗಡೆಗೊಳಿಸಿದರು.

ಈ ವೇಳೆ ಮಾತನಾಡಿದ ಅವರು ಸಾರ್ವಜನಿಕರು ನಗರದ ಪ್ರಧಾನ ಅಂಚೆ ಕಚೇರಿಯಲ್ಲಿ ಇಂದಿನಿಂದ ತಮ್ಮ ಪತ್ರಗಳಿಗೆ ಕಾಫಿ ತೋಟದ ಚಿತ್ರಣವಿರುವ ವಿಶೇಷ ಮೊಹರನ್ನು ಹಾಕಿಸಿಕೊಳ್ಳಬಹುದು ಎಂದು ಹೇಳಿದರು.

ಕಳೆದ ೪೦ ವರ್ಷಗಳ ಹಿಂದೆ ಶೃಂಗೇರಿಯ ಶ್ರೀ ವಿದ್ಯಾಶಂಕರ ದೇವಾಲಯದ ಚಿತ್ರಣ ವಿರುವ ವಿಶೇಷ ಮುದ್ರೆಯನ್ನು ಅಂಚೆ ಇಲಾಖೆ ಹೊರತಂದಿದ್ದು, ಇದೀಗ ಕಾಫಿ ತೋಟಗಳ ಚಿತ್ರಣವಿರುವ ವಿಶೇಷ ಮೊಹರನ್ನು ಹೊರ ತರುವ ಮೂಲಕ ಅಂಚೆ ಇಲಾಖೆ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದೆ ಎಂದು ತಿಳಿಸಿದರು.

ಕಾಫಿ ಮಂಡಳಿ ಉಪನಿರ್ದೇಶಕ ವೆಂಕಟರೆಡ್ಡಿ ಮಾತನಾಡಿ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆ ತನ್ನದೇ ಆದ ವಿಶೇಷ ಅಂಚೆ ಮೊಹರನ್ನು ಹೊಂದಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದರು.

ಸಹಾಯಕ ಅಂಚೆಪಾಲಕ ಎ.ಎಸ್. ಮುರಳಿಧರ್ ಮಾತನಾಡಿ ಚಿಕ್ಕಮಗಳೂರು ಜಿಲ್ಲೆಯ ಎರಡನೇ ವಿಶೇಷ ಅಂಚೆ ಮೊಹರು ಬಿಡುಗಡೆಗೊಂಡಿರುವುದು ಎಲ್ಲರಿಗೂ ಹೆಮ್ಮೆಯ ವಿಷಯವಾಗಿದೆ ಎಂದು ಹೇಳಿದರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪ್ರಧಾನ ಅಂಚೆಪಾಲಕ ಸುನಿಲ್ ವಾಸ್ ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಕ್ಕಮಗಳೂರು ಉಪ ವಿಭಾಗದ ಅಂಚೆ ನಿರೀಕ್ಷಕ ಡಿ.ಎನ್. ಗಂಗಾಧರಪ್ಪ, ಮೂಡಿಗೆರೆ ಅಂಚೆ ನಿರೀಕ್ಷಕ ಷಣ್ಮುಖ ಹೆಚ್. ಚವಾಣ್, ಕೊಪ್ಪ ಅಂಚೆ ನಿರೀಕ್ಷಕ ಹರಿಪ್ರಸಾದ್ ರಾವ್, ಅಂಚೆ ಜೀವ ವಿಮಾ ಅಭಿವೃದ್ಧಿ ಅಧಿಕಾರಿ ಗಣೇಶ್ ನಾಯಕ್, ಅಂಚೆ ಮಾರುಕಟ್ಟೆ ಅಧಿಕಾರಿ ದೊಡ್ದೇಶ್, ಶಶಿರೇಖ, ಬಿ.ಎನ್. ಪ್ರದೀಪ್, ಕಾವ್ಯಶ್ರೀ ಉಪಸ್ಥಿತರಿದ್ದರು.

Postal Department releases special stamp depicting coffee plantations

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...