Home namma chikmagalur ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ
namma chikmagalurchikamagalurHomeLatest News

ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ

Share
Share

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕರು ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮುಂದಿನ ಪೀಳಿಗೆಗೆ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಕಂದಾಯ ಭೂಮಿಯನ್ನು ಅರಣ್ಯಕ್ಕೆ ಸೇರಿಸಬಾರದು. ಪ್ರಸ್ತುತ ೪/೧ ಆಗಿರುವ ಅನೇಕ ಗ್ರಾಮಗಳಲ್ಲಿ ೪/೧ ನೋಟಿಫಿಕೇಷನ್‌ನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಇದೀಗ ಕಳಸ ತಾಲ್ಲೂಕಿನ ಎಸ್.ಕೆ.ಮೇಗಲ್, ಮಾವಿನಕೆರೆ, ಕಗ್ಗನಹಳ್ಳ, ಹೊರನಾಡು, ಬಾಳೂರು ಹೋಬಳಿಯ ಕಲ್ಮನೆ, ಹಾದಿಓಣಿ, ಕುವೆ, ತೆಲಗೂರು, ಆಲ್ದೂರು ಹೋಬಳಿಯ ಹಳಿಯೂರು, ಬನ್ನೂರು, ಆವ್ವಳ್ಳಿ, ಇಳೇಖಾನ್, ಬೆಳಗೋಡು, ವಸ್ತಾರೆ, ಬಾಚಿನಗಹಳ್ಳಿ, ಹಲಸುಮನೆ, ಕದ್ರಿಮಿದ್ರಿ ಗ್ರಾಮಗಳಲ್ಲಿ ೪/೧ ನೋಟಿಫಿಕೇಷನ್ ಪರಿವರ್ತನೆ ಮಾಡಲು ಅರಣ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದೆ ಎಂದರು.

ಈ ಹಿಂದೆ ಅನೇಕ ಕಂದಾಯ ಭೂಮಿಯನ್ನು ಅರಣ್ಯ ಭೂಮಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂತ ಕಡೆಗಳಲ್ಲಿ ಕೂಡ ರೈತರು ಬೀದಿಪಾಲಾಗಿದ್ದಾರೆ. ಬಹುತೇಕ ಗ್ರಾಮದ ಭೂಮಿಗಳಲ್ಲಿ ಕೃಷಿಕರು, ನಿವೇ ಶನ ರಹಿತರು ವಾಸವಾಗಿದ್ದು ಜೊತೆಗೆ ಸಾವಿರಾರು ಮಂದಿ ನಿವೇಶನಕ್ಕಾಗಿ ಕಾದು ಕುಳಿತುಕೊಂಡಿದ್ದಾರೆ ಎಂದು ಹೇಳಿದರು.

ಇನ್ನೂ ಕೆಲವೆಡೆ ಸಾವಿರಾರು ಕುಟುಂಬಗಳು, ಬೆಳೆಗಾರರ ಕೂಲಿಲೈನ್‌ಗಳಲ್ಲಿ ನಿವೇಶನಕ್ಕಾಗಿ, ಸ್ವಂತ ಮನೆ ನಿರ್ಮಿಸಿಕೊಳ್ಳಲು ಕನಸು ಕಾಣಲಾಗುತ್ತಿದೆ. ಅಂಗನವಾಡಿ ಶಾಲೆ, ಆಟದ ಮೈದಾನ, ಸಮುದಾಯ ಭವನ, ಸ್ಮಶಾನಕ್ಕೆ ಜಾಗವಿಲ್ಲದೇ ಆಹಾಕಾರಪಡುವಂತಾಗಿದೆ ಎಂದರು.

ಆದ್ದರಿಂದ ಜಿಲ್ಲೆಯ ಯಾವುದೇ ಗ್ರಾಮದ ಕಂದಾಯ ಭೂಮಿಯನ್ನು ಅರಣ್ಯ ಎಂದು ಪರಿವರ್ತನೆ ಮಾಡಬೇಕಾದರೆ ಎಲ್ಲಾ ಮೂಲಭೂತ ಸೌಲಭ್ಯದ ಕೊರತೆಗಳನ್ನು ನೀಗಿಸಬೇಕಾಗಿದೆ ಮತ್ತು ಅರಣ್ಯಕ್ಕೆ ವರ್ಗಾಯಿಸಬೇಕಾದ ವೇಳೆಯಲ್ಲಿ ಮುಂದಿನ ಪೀಳಿಗೆಗೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರವನ್ನು ಕೈ ಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್, ಮು ಖಂಡರುಗಳಾದ ಹರೀಶ್ ಮಿತ್ರ, ಕಬ್ಬಿಕೆರೆ ಮೋಹನ್‌ಕುಮಾರ್, ಭಾರತಿ, ದಿವಾಕರ್ ಹಾಜರಿದ್ದರು.

Demand not to transfer revenue land to the Forest Department

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...