Home namma chikmagalur ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ
namma chikmagalurchikamagalurHomeLatest News

ಕಂದಾಯ ಭೂಮಿ ಅರಣ್ಯ ಇಲಾಖೆಗೆ ವರ್ಗಾಯಿಸದಿರಲು ಒತ್ತಾಯ

Share
Share

ಚಿಕ್ಕಮಗಳೂರು: ಮೂಡಿಗೆರೆ ತಾಲ್ಲೂಕಿನ ಕಂದಾಯ ಭೂಮಿಯನ್ನು ಅರಣ್ಯ ಇಲಾಖೆಗೆ ವರ್ಗಾಯಿಸದಂತೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಮಾಜಿ ಶಾಸಕರು ಶುಕ್ರವಾರ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರಿಗೆ ಮನವಿ ಸಲ್ಲಿಸಿದರು.

ಬಳಿಕ ಮಾತನಾಡಿದ ಮಾಜಿ ಶಾಸಕ ಎಂ.ಪಿ.ಕುಮಾರಸ್ವಾಮಿ ಮುಂದಿನ ಪೀಳಿಗೆಗೆ ಮೂಲಭೂತ ಸೌಲಭ್ಯವನ್ನು ಗಮನದಲ್ಲಿಟ್ಟುಕೊಂಡು ಕಂದಾಯ ಭೂಮಿಯನ್ನು ಅರಣ್ಯಕ್ಕೆ ಸೇರಿಸಬಾರದು. ಪ್ರಸ್ತುತ ೪/೧ ಆಗಿರುವ ಅನೇಕ ಗ್ರಾಮಗಳಲ್ಲಿ ೪/೧ ನೋಟಿಫಿಕೇಷನ್‌ನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ಇದೀಗ ಕಳಸ ತಾಲ್ಲೂಕಿನ ಎಸ್.ಕೆ.ಮೇಗಲ್, ಮಾವಿನಕೆರೆ, ಕಗ್ಗನಹಳ್ಳ, ಹೊರನಾಡು, ಬಾಳೂರು ಹೋಬಳಿಯ ಕಲ್ಮನೆ, ಹಾದಿಓಣಿ, ಕುವೆ, ತೆಲಗೂರು, ಆಲ್ದೂರು ಹೋಬಳಿಯ ಹಳಿಯೂರು, ಬನ್ನೂರು, ಆವ್ವಳ್ಳಿ, ಇಳೇಖಾನ್, ಬೆಳಗೋಡು, ವಸ್ತಾರೆ, ಬಾಚಿನಗಹಳ್ಳಿ, ಹಲಸುಮನೆ, ಕದ್ರಿಮಿದ್ರಿ ಗ್ರಾಮಗಳಲ್ಲಿ ೪/೧ ನೋಟಿಫಿಕೇಷನ್ ಪರಿವರ್ತನೆ ಮಾಡಲು ಅರಣ್ಯ ಇಲಾಖೆ ಸಿದ್ದತೆ ಮಾಡಿಕೊಂಡಿದೆ ಎಂದರು.

ಈ ಹಿಂದೆ ಅನೇಕ ಕಂದಾಯ ಭೂಮಿಯನ್ನು ಅರಣ್ಯ ಭೂಮಿಯಾಗಿ ಪರಿವರ್ತನೆ ಮಾಡಲಾಗಿದೆ. ಅಂತ ಕಡೆಗಳಲ್ಲಿ ಕೂಡ ರೈತರು ಬೀದಿಪಾಲಾಗಿದ್ದಾರೆ. ಬಹುತೇಕ ಗ್ರಾಮದ ಭೂಮಿಗಳಲ್ಲಿ ಕೃಷಿಕರು, ನಿವೇ ಶನ ರಹಿತರು ವಾಸವಾಗಿದ್ದು ಜೊತೆಗೆ ಸಾವಿರಾರು ಮಂದಿ ನಿವೇಶನಕ್ಕಾಗಿ ಕಾದು ಕುಳಿತುಕೊಂಡಿದ್ದಾರೆ ಎಂದು ಹೇಳಿದರು.

ಇನ್ನೂ ಕೆಲವೆಡೆ ಸಾವಿರಾರು ಕುಟುಂಬಗಳು, ಬೆಳೆಗಾರರ ಕೂಲಿಲೈನ್‌ಗಳಲ್ಲಿ ನಿವೇಶನಕ್ಕಾಗಿ, ಸ್ವಂತ ಮನೆ ನಿರ್ಮಿಸಿಕೊಳ್ಳಲು ಕನಸು ಕಾಣಲಾಗುತ್ತಿದೆ. ಅಂಗನವಾಡಿ ಶಾಲೆ, ಆಟದ ಮೈದಾನ, ಸಮುದಾಯ ಭವನ, ಸ್ಮಶಾನಕ್ಕೆ ಜಾಗವಿಲ್ಲದೇ ಆಹಾಕಾರಪಡುವಂತಾಗಿದೆ ಎಂದರು.

ಆದ್ದರಿಂದ ಜಿಲ್ಲೆಯ ಯಾವುದೇ ಗ್ರಾಮದ ಕಂದಾಯ ಭೂಮಿಯನ್ನು ಅರಣ್ಯ ಎಂದು ಪರಿವರ್ತನೆ ಮಾಡಬೇಕಾದರೆ ಎಲ್ಲಾ ಮೂಲಭೂತ ಸೌಲಭ್ಯದ ಕೊರತೆಗಳನ್ನು ನೀಗಿಸಬೇಕಾಗಿದೆ ಮತ್ತು ಅರಣ್ಯಕ್ಕೆ ವರ್ಗಾಯಿಸಬೇಕಾದ ವೇಳೆಯಲ್ಲಿ ಮುಂದಿನ ಪೀಳಿಗೆಗೆಯನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರವನ್ನು ಕೈ ಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಸ್ಸಿಎಸ್ಟಿ ದೌರ್ಜನ್ಯ ನಿಯಂತ್ರಣ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ್, ಮು ಖಂಡರುಗಳಾದ ಹರೀಶ್ ಮಿತ್ರ, ಕಬ್ಬಿಕೆರೆ ಮೋಹನ್‌ಕುಮಾರ್, ಭಾರತಿ, ದಿವಾಕರ್ ಹಾಜರಿದ್ದರು.

Demand not to transfer revenue land to the Forest Department

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...