Home ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ
HomeLatest Newsnamma chikmagalurTarikere

ತರೀಕೆರೆ ರಸ್ತೆ ಕಾಮಗಾರಿ ಉತ್ತಮವಾಗಿರಲಿ

Share
Share

ತರೀಕೆರೆ: ತರೀಕೆರೆ ಪಟ್ಟಣದ ಹೈವೇ ರಸ್ತೆ ಹಲವು ವರ್ಷಗಳಿಂದ ಕಾಮಗಾರಿ ಕಾಣದೆ ಜನ ಹಿಡಿ ಶಾಪ ಹಾಕುತ್ತಾ ಓಡಾಡುತ್ತಿದ್ದರು.ಈಗ ರಸ್ತೆ ಅಭಿವೃದ್ಧಿಗೆ ಕಾಲ ಕೂಡಿ ಬಂದಿದೆ.ಇದಕ್ಕೆ ಕಾರಣವಾದವರನ್ನು ಮೆಚ್ಚಲೇ ಬೇಕು ನಿಜ .ಹಲವು ವರ್ಷಗಳ ನಂತರ ನಡೆಯುತ್ತಿರುವ ಕಾಮಗಾರಿ ನೋಡಿದರೆ ಮುಂದೆ ಏನು ಕಾದಿದೆಯೋ ಎಂಬ ಚಿಂತೆ ಮಾಡುವಂತೆ ಆಗಿದೆ.

ಎರಡು ತಿಂಗಳಿಂದ ನಡೆಯುತ್ತಿರುವ ಕಾಮಗಾರಿ ಮುಗಿಯುವುದು ಯಾವಾಗ ಎಂಬ ಚಿಂತೆ ಕಾಡುತ್ತಿದೆ.ಸೇತುವೆ ನಿರ್ಮಾಣ ಮಾಡಬೇಕಾಗಿರುವುದರಿಂದ ರಸ್ತೆಯ ಇಕ್ಕೆಲಗಳಲ್ಲೂ ಬಗೆದಿರುವುದರಿಂದ ಅಚೆ- ಇಚೆ ಸಂಚರಿಸುವುದು ಕಷ್ಟವಾಗಿದೆ .ಪಟ್ಟಣದ ಒಳಗಿನ ರಸ್ತೆಗಳಿಗೆ ಹೋಗುವುದು ದುಸ್ತರವಾಗಿದೆ ಎಂದು ಜನ ಪೇಚಾಡುತ್ತಿದ್ದಾರೆ.ಅದರಲ್ಲೂ ಸಾವು_ ನೋವು ನೋಡಲು ಹೋಗುವ ಜನರಿಗೆ ಕಡು ಕಷ್ಟ. ಇದರಿಂದ ಕಳೆದ ಎರಡು ತಿಂಗಳಿಂದ ವಿದ್ಯುತ್ ಅಭಾವ ಸೃಷ್ಟಿಯಾಗಿದೆ ಮಳೆ ಬೇರೆ ಬರುತ್ತಿರುವುದರಿಂದ ಕೆಸರಿನಿಂದ ಜನ ಓಡಾಡಲು ತೊಂದರೆ ಆಗಿದೆ.

ಬಸ್ ನಿಲ್ದಾಣ ಅಕ್ಕ_ಪಕ್ಕ ಕಟ್ಟಡಗಳು ಅರ್ಧಕ್ಕೆ ಮುಚ್ಚಿ ಹೋಗುವಂತೆ ಆಗಿದೆ.ವ್ಯಾಪಾರಿಗಳು ಮಾತನಾಡುವುದಿಲ್ಲ ನಿಜ ನಮ್ಮ ಗತಿ ಇಷ್ಟೇ ಎನ್ನುವಂತೆ ಆಗಿದೆ ಎನ್ನುತ್ತಿದ್ದಾರೆ.

ತಾಂತ್ರಿಕವಾಗಿ ರಸ್ತೆಯ ನಿರ್ಮಾಣ ಮಾಡುವುದನ್ನು ಬಿಟ್ಟು ಬೇಕಾಬಿಟ್ಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ ಎಂದುಇನ್ನೂ ಕೆಲವರು ಹೇಗೋ ರಸ್ತೆ ಕೆಲಸ ಮಾಡಲಿ ಎಂದು ಕೆಲವರು ಹೇಳುತ್ತಾರೆ.

ಗುತ್ತಿಗೆದಾರ ಕಾಮಗಾರಿ ಮುಗಿಸಿ ಕೈ ತೊಳೆದುಕೊಂಡರೆ ಸಾಕು ಕೊಡುವುದನ್ನು ಕೊಟ್ಟು ಬಿಡುವುದನ್ನು ಬಿಟ್ಟು ಬಿಲ್ ಕರೆಸಿಕೊಳ್ಳುವ ತವಕದಲ್ಲಿ ಇದ್ದಾನೆ.ಹೋದೆಯಾ ಪಿಶಾಚಿ ಎಂದರೆ ಬಂದೆಯಾ ಗವಾಕ್ಷಿ ಎನ್ನುವಂತೆ ಆಗದೆ ರಸ್ತೆ ನಿರ್ಮಾಣ ಜನರಿಗೆ ಅನುಕೂಲ ಆದರೆ ಅಷ್ಟೇ ಸಾಕು.ಈಗಲೂ ಕಾಲ ಮಿಂಚಿಲ್ಲ ಆಗಿರುವ ತಪ್ಪುಗಳನ್ನು ಸರಿಪಡಿಸಿ ರಸ್ತೆ ಮಾಡಲಿ ಎಂದು ಜನರ ಆಸೆ.

May the Tarikere road work go well.

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...