Home Crime News ಧಾರಾಕಾರ ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಬಿದ್ದು ಚಾಲಕ ಸಾವು
Crime NewschikamagalurHomeLatest Newsnamma chikmagalur

ಧಾರಾಕಾರ ಮಳೆಗೆ ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರ ಬಿದ್ದು ಚಾಲಕ ಸಾವು

Share
Share

ಚಿಕ್ಕಮಗಳೂರು: ಚಲಿಸುತ್ತಿದ್ದ ಆಟೋ ಮೇಲೆ ಬೃಹತ್ ಮರವೊಂದು ಬಿದ್ದು ಚಾಲಕ ಕುಳಿತ ಜಾಗದಲ್ಲೇ ಸಾವನ್ನಪ್ಪಿರುವ ಘಟನೆ ಜಯಪುರ ಸಮೀಪ ಸಂಭವಿಸಿದ್ದು, ಈ ಬಾರಿಯ ಮುಂಗಾರು ಮಳೆಗೆ ಜಿಲ್ಲೆಯಲ್ಲಿ ಮೊದಲ ಬಲಿಯಾದಂತಾಗಿದೆ. ಕೊಪ್ಪ ತಾಲೂಕಿನ ಜಯಪುರ ಸಮೀಪ ಬೈರೇದೇವರು ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ ಘಟನೆ ನಡೆದಿದೆ. ಮೃತರನ್ನು ೩೮ ವರ್ಷದ ರತ್ನಾಕರ್ ಎಂದು ಗುರುತಿಸಲಾಗಿದೆ.

ಕೊಪ್ಪ ತಾಲೂಕಿನಲ್ಲೂ ಧಾರಾಕಾರ ಮಳೆ ಸುರಿಯುತ್ತಿದ್ದು ಊಟಕ್ಕೆಂದು ಮನೆಗೆ ತೆರಳುವಾಗ ರಸ್ತೆ ಬದಿಯ ಭಾರೀ ಗಾತ್ರದ ಮರವೊಂದು ಆಟೋ ರಿಕ್ಷಾದ ಮೇಲೆ ಉರುಳಿ ಬಿದ್ದಿದೆ. ಆಟೋದ ಮುಂಭಾಗದಲ್ಲೇ ಮರ ಬಿದ್ದಿರುವುದರಿಂದ ಜೀವ ಉಳಿಸಿಕೊಳ್ಳಲು ಚಾಲಕನಿಗೆ ಯಾವುದೇ ಅವಕಾಶವೂ ಸಿಕ್ಕಿಲ್ಲ. ತಕ್ಷಣ ರಕ್ಷಣಾ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮರವನ್ನು ಯಂತ್ರಗಳಿಂದ ಕತ್ತರಿಸಿ ತೆರವು ಮಾಡಿದ್ದಾರೆ.

ಮಲೆನಾಡಿನಲ್ಲಿ ಈ ವರ್ಷದ ಮಹಾಮಳೆಗೆ ಇದು ಮೂರನೇ ಬಲಿಯಾಗಿದ್ದು, ಮುಂಗಾರಿಗೆ ಮೊದಲ ಬಲಿಯಾಗಿದೆ. ಇತ್ತಿಚೆಗೆ ಅಜ್ಜಂಪುರ ಹಾಗೂ ಚಿಕ್ಕಮಗಳೂರು ತಾಲೂಕಿನಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದರು. ಪೂರ್ವ ಮುಂಗಾರಿನ ಅಬ್ಬರಕ್ಕೆ ಜಿಲ್ಲೆಯು ನಲುಗುತ್ತಿದ್ದು, ವಿದ್ಯುತ್ ಸಂಪರ್ಕ ಸಂಪೂರ್ಣ ಅಸ್ತವ್ಯಸ್ಥಗೊಂಡು ಮಲೆನಾಡು ತಾಲ್ಲೂಕುಗಳು ಕತ್ತಲಲ್ಲಿ ಮುಳುಗುವಂತಾಗಿದೆ.

ಎಡಬಿಡದೆ ಸುರಿಯುತ್ತಿರುವ ಮಳೆಯಿಂದ ಜನತೆ ತತ್ತರಿಸುತ್ತಿದ್ದು, ಮನೆಯಿಂದ ಹೊರಕ್ಕೆ ಬರಲಾಗದ ಸ್ಥಿತಿ ನಿರ್ಮಾಣವಾಗಿದೆ. ನೂರಾರು ಮರಗಳು, ವಿದ್ಯುತ್ ಕಂಬಗಳು ನೆಲಕ್ಕುರುಳಿರುವುದರಿಂದ ತೋಟದ ಮನೆಗಳು, ಕೂಲಿ ಲೈನ್‌ನ ನಿವಾಸಿಗಳು ಹೊರಕ್ಕೆ ಬರಲು ಹೆದರುತ್ತಿದ್ದಾರೆ. ಎಲ್ಲಿ ವಿದ್ಯುತ್ ಪ್ರವಾಹ ಉಂಟಾಗುತ್ತದೋ ಎನ್ನುವ ಭೀತಿ ಕಾಡಲಾರಂಭಿಸಿದೆ.

ದಿನವಿಡೀ ದಟ್ಟವಾದ ಮಂಜು, ಅಬ್ಬರದ ಮಳೆ, ಭಾರೀ ಬಿರುಸಿನ ಗಾಳಿಯಿಂದಾಗಿ ಕ್ಷಣಕ್ಕೊಂದು ಮರ ಉರುಳಿ ಬೀಳುತ್ತಿದೆ. ನಿರಂತರ ಮಳೆಯಿಂದ ಭೂಮಿ ಸಂಪೂವರ್ಣ ತೇವಗೊಂಡು ವಿದ್ಯುತ್ ಕಂಬಗಳು ಬುಡಮೇಲಾಗುತ್ತಿವೆ. ಹಲವು ಮರಗಳು ವಿದ್ಯುತ್ ತಂತಿಗಳ ಮೇಲೆ ಉರುಳಿ ಬಿದ್ದಿರುವುದರಿಂದ ಕಂಬಗಳು ಒತ್ತಡ ತಾಳಲಾರದೆ ಕುಸಿದು ಬಿದ್ದಿವೆ. ಕೆಲವು ಕಂಬಗಳು ಮುರಿದು ಬಿದ್ದಿವೆ. ತೀವ್ರ ಪ್ರಮಾಣದಲ್ಲಿ ಮಳೆ ಬೀಳುತ್ತಿರುವುದರಿಂದ ಕಂಬಗಳ ಮರು ಸ್ಥಾಪನೆ, ಲೈನ್‌ಗಳ ದುರಸ್ಥಿ ಸಾಧ್ಯವಾಗದ ಹಿನ್ನೆಲೆಯಲ್ಲಿ ಹಲವಾರು ಹಳ್ಳಿಗಳು, ನೂರಾರು ಮನೆಗಳು ವಿದ್ಯುತ್ ಇಲ್ಲದೆ ಪರದಾಡುವಂತಾಗಿದೆ.

ಚಿಕ್ಕಮಗಳೂರು ತಾಲ್ಲೂಕಿನ ವಸ್ತಾರೆ, ದಿಣ್ಣೇಕೆರೆ, ಕೂದುವಳ್ಳಿ, ತೋರಣಮಾವು, ಕೋಡುವಳ್ಳಿ, ಕೋಟೆವೂರು, ಹುಣಸೇಮಕ್ಕಿ, ಕೆಸರಿಕೆ, ಮುಳ್ಳಾರೆ, ಕಲ್ಲುಗುಡ್ಡೆ, ಕಟ್ರುಮನೆ, ಹಳ್ಳಿಹಿತ್ಲು, ಮಿಂಚೇರಿ ಇನ್ನಿತರೆ ಗ್ರಾಮಗಳು ವಿದ್ಯುತ್ ಕಡಿತಗೊಂಡು ಕತ್ತಲ ಕೂಪವಾಗಿವೆ. ಮೂಡಿಗೆರೆ ತಾಲ್ಲೂಕಿನಲ್ಲಿ ಅತೀ ಹೆಚ್ಚು ಮರಗಳು ಹಾಗೂ ವಿದ್ಯುತ್ ಕಂಬಗಳು ನೆಲಕ್ಕುರುಳಿವೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲ್ಲೂಕುಗಳಲ್ಲೂ ಭಾರೀ ಮಳೆ ಗಾಳಿಯಿಂದ ಸಾವಿರಾರು ಕಂಬಗಳು ಉರುಳಿಬಿದ್ದು ಹಲವು ಗ್ರಾಮಗಳಿಗೆ ವಿದ್ಯುತ್ ಕಡಿತ ಉಂಟಾಗಿದೆ.

ಮೆಸ್ಕಾಂಗೆ ಬಿಡುವಿಲ್ಲದ ದೂರುಗಳು, ಕರೆಗಳು ಬರುತ್ತಿದ್ದು ಸಿಬ್ಬಂದಿಗಳು ದಿಕ್ಕು ತೋಚದಂತಾಗಿದ್ದಾರೆ. ಭಾರೀ ಮಳೆಯಿಂದಾಗಿ ತೋಟಗಳು ಹಾಗೂ ಹಳ್ಳ, ಕೊಳ್ಳಗಳನ್ನು ದಾಟಿಕೊಂಡು ಹೋಗಿ ಲೈನ್‌ಗಳು, ಕಂಬಗಳನ್ನು ದುರಸ್ಥಿ ಪಡಿಸುವುದು ಸವಾಲಿನ ಕೆಲಸವಾಗಿದ್ದು, ಪರದಾಡುವಂತಾಗಿದೆ. ಕೆಲವು ಗ್ರಾಮಗಳಿಗೆ ಸಧ್ಯಕ್ಕೆ ವಿದ್ಯುತ್ ಸಂಪರ್ಕ ಸಿಗುವುದು ಅನುಮಾನ ಎನ್ನುವ ಸ್ಥಿತಿ ನಿರ್ಮಾಣವಾಗಿದೆ.

ಬಹುತೇಕ ಮನೆಗಳಲ್ಲಿ ಕ್ಯಾಂಡಲ್‌ಗಳು, ದೀಪದ ಬೆಳಕಿನಲ್ಲಿ ಕಾಲ ಕಳೆಯುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಕೆಲವು ತಾಂತ್ರಿಕ ಕೋರ್ಸ್‌ಗಳ ಪರೀಕ್ಷೆಗಳು ನಡೆಯುತ್ತಿದ್ದು, ಮನೆಗಳಿಂದ ಓಡಾಡುವ ವಿದ್ಯಾರ್ಥಿಗಳು ಓದಲೂ ಆಗದೇ ಪರೀಕ್ಷಾ ಕೇಂದ್ರಗಳನ್ನು ತಲುಪು ಆಗದೆ ತೊಂದರೆ ಅನುಭವಿಸುತ್ತಿದ್ದಾರೆ.

Driver dies after huge tree falls on auto moving in heavy rain

 

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...