Home namma chikmagalur ಅನೈತಿಕ ಸಂಬಂಧ : ಹೆಂಡತಿಯಿಂದ ಗಂಡನ ಕೊಲೆ
namma chikmagalurchikamagalurCrime NewsHomeLatest News

ಅನೈತಿಕ ಸಂಬಂಧ : ಹೆಂಡತಿಯಿಂದ ಗಂಡನ ಕೊಲೆ

Share
Share

ಚಿಕ್ಕಮಗಳೂರು: ಸಂಸಾರದಲ್ಲಿ ಬಿರುಕು ಮತ್ತು ಅನೈತಿಕ ಸಂಬಂಧ ಹಿನ್ನಲೆ ಹೆಂಡತಿಯೇ ಗಂಡನನ್ನು ಕೊಲೆ ಮಾಡಿರುವ ಘಟನೆ ನರಸಿಂಹರಾಜಪುರ ತಾಲೂಕಿನಲ್ಲಿ ನಡೆದಿದ್ದು, ೨೪ಗಂಟೆಯಲ್ಲಿ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಸಫಲರಾಗಿದ್ದಾರೆ.

ಕಡುಹಿನಬೈಲು ಗ್ರಾಮದ ಕುರುಗುಂದ ಬಸ್‌ನಿಲ್ದಾಣದ ಸಮೀಪ ಅನುಮಾನಸ್ಪವಾಗಿ ವ್ಯಕ್ತಿ ಸಾವುನಪ್ಪಿದ್ದು, ಪ್ರಕರಣ ದಾಖಲಿ ಸಿಕೊಂಡ ಪೊಲೀಸರು ತನಿಖೆ ನಡೆಸಿದಾಗ ನರಸಿಂಹರಾಜಪುರ ಪಟ್ಟಣದ ಸುದರ್ಶನ್ ಮೃತ ವ್ಯಕ್ತಿ ಎಂದು ಗುರುತಿಸಿ, ಸುದರ್ಶನ್ ಹೆಂಡತಿ ಕಲಮ ನೀಡಿದ ದೂರಿನನ್ವಯ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದರು.

ಕಮಲ-ಸುದರ್ಶನ್ ಕಳೆದ ಹತ್ತು ವರ್ಷದ ಹಿಂದೆ ಮದುವೆಯಾಗಿದ್ದು, ಮಕ್ಕಳು ಇದ್ದಾರೆ. ಆದರೆ, ಸಂಸಾರದಲ್ಲಿ ಹೊಂದಾಣಿಕೆ ಬಾರದೆ ಕಮಲ ಅನೇಕ ವರ್ಷಗಳಿಂದ ಪರಿಚಯಸ್ಥನಾಗಿದ್ದ ಶಿವರಾಜ್ ಎಂಬಾತನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಳು. ಮೇ.೨೩ರಂದು ಶಿವರಾಜ್ ಹಾಗೂ ಇತರರ ಜತೆ ಸೇರಿ ಮೇ.೨೩ರಂದು ನರಸಿಂಹರಾಜಪುರ ಕರುಗುಂದ ಬಸ್ ನಿಲ್ದಾಣ ಸಮೀಪ ರಾತ್ರಿ ೯ಗಂಟೆ ವೇಳೆ ನಾಲ್ವರು ಸೇರಿ ಸುದರ್ಶನ್‌ಗೆ ಮದ್ಯದಲ್ಲಿ ನಿದ್ರೆ ಮಾತ್ರೆ ಸೇರಿಸಿ ಕುಡಿಸಿ ಪ್ರಜ್ಞೆ ತಪ್ಪಿದಾಗ ಕತ್ತು ಹಿಸುಕಿ ಕೊಲೆ ಮಾಡಿರುವುದು ತನಿಖೆ ವೇಳೆ ತಿಳಿದು ಬಂದಿದೆ.

ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಎಸ್.ಶಿವರಾಜ್, ಬಿ.ಆರ್.ಹರೀಶ್, ಬಿ.ಎಸ್.ಚನ್ನಕೇಶವ, ಕೃತ್ಯಕ್ಕೆ ಪ್ರಚಫದನೆ ನೀಡಿದ ಸುದರ್ಶನ್ ಹೆಂಡತಿ ಕಮಲ ಅವರನ್ನು ಬಂಧಿಸಲಾಗಿದೆ. ಕೃತ್ಯಕ್ಕೆ ಬಳಸಿದ ವ್ಯಾಗನರ್ ವಾಹನವನ್ನು ವಶಕ್ಕೆ ಪಡೆಯಲಾಗಿದೆ.

ಕಾರ್ಯಾಚರಣೆಯಲ್ಲಿ ನರಸಿಂಹರಾಜಪುರ ಪೊಲೀಸ್ ಠಾಣೆಯ ಪಿಎಸ್‌ಐ ಬಿ.ಎಸ್.ನಿರಂಜನ ಗೌಡ, ಜ್ಯೋತಿ, ಸಿಬ್ಬಂದಿಗಳಾದ ನಾಗರಾಜ್, ಅಮಿತ್ ಚೌಗುಲೆ, ಕೆ.ಸೋಮೇಶ್, ಮಧು, ಈಶ್ವರಪ್ಪ, ಯುಗಾಂಧರ್, ಶಿವರುದ್ರಪ್ಪ, ಬಿಂದು, ಕೌಶಿಕ್ ಅವರನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ್ ಅಮಟೆ ಅಭಿನಂದಿಸಿ ಬಹುಮಾನ ಘೋಷಿಸಿದ್ದಾರೆ.

Immoral relationship: Wife murders husband

Share

Leave a comment

Leave a Reply

Your email address will not be published. Required fields are marked *

Don't Miss

ತರೀಕೆರೆ-ಕಡೂರು-ಚಿಕ್ಕಮಗಳೂರು: ಅದಲು-ಬದಲು ಕಾಂಗ್ರೆಸ್, ಬಿಜೆಪಿ ಕಿತ್ತಾಟ !

ಚಿಕ್ಕಮಗಳೂರು: ರಸ್ತೆ ಕಾಮಗಾರಿಗಳು, ಭದ್ರ ಉಪಕಣಿವೆ ಯೋಜನೆಗಳಿಗೆ ಕಾಂಗ್ರೆಸ್ ಶಾಸಕರುಗಳಲ್ಲಿ “ಸಿಟ್ಟು” ಮಡಿಗಟ್ಟಿದೆ. ಇದಕ್ಕೆ ಪ್ರತಿಯಾಗಿ ವಿಧಾನ ಪರಿಷತ್ ಸದಸ್ಯಮತ್ತು ಬಿಜೆಪಿ ಮುಖಂಡ ಸಿ.ಟಿ.ರವಿ ಹಾದಿ ರಂಪ,ಬೀದಿ ರಂಪ ಮಾಡಿಕೊಂಡು ದೂರುಪ್ರತಿದೂರು...

ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆಯಿಂದ ಶಾಸಕ ಸಿ.ಟಿ ರವಿ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ರಾಂಪುರ ರಸ್ತೆ ಕಾಮಗಾರಿ ವೀಕ್ಷಣೆ ಸಂದರ್ಭದಲ್ಲಿ ಸ್ಥಳೀಯ ಶಾಸಕರ ಪ್ರಚೋದನಾಕಾರಿ ಹೇಳಿಕೆ ಹಿನ್ನಲೆಯಲ್ಲಿ ಬಿಜೆಪಿ ಪಕ್ಷದ ಮುಖಂಡರು ಹಾಗೂ ವಿಧಾನಪರಿಷತ್ ಶಾಸಕ ಸಿ.ಟಿ ರವಿ ರವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು...

Related Articles

ಶಾಲೆಗೆ ಆಗಮಿಸಿದ ವಿದ್ಯಾರ್ಥಿಗಳಿಗೆ ಜನಪ್ರತಿನಿಧಿಗಳಿಂದ ಸ್ವಾಗತ

ಚಿಕ್ಕಮಗಳೂರು:  ಬೇಸಿಗೆ ರಜೆ ಮುಗಿದು ಇಂದಿನಿಂದ ಶಾಲೆಗಳು ಪ್ರಾರಂಭಗೊಂಡಿದ್ದು, ಅತ್ಯಂತ ಹುರುಪಿನಿಂದ ಶಾಲೆಗಳಿಗೆ ಆಗಮಿಸಿದ ಮಕ್ಕಳಿಗೆ...

ಮತದಾರರ ಪಟ್ಟಿ ಶುದ್ಧೀಕರಣಕ್ಕೆ ಆದ್ಯತೆ ನೀಡಿ

ಚಿಕ್ಕಮಗಳೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚುನಾವಣೆಗಳು ಸುಸೂತ್ರ ಹಾಗೂ ಪಾರದರ್ಶಕವಾಗಿ ನಡೆಯಬೇಕಾದರೆ ದೋಷಮುಕ್ತ ಮತದಾರರ ಪಟ್ಟಿ ಅತ್ಯಗತ್ಯ....

 ಮಕ್ಕಳ ಶಾಲಾ ಹಾಜರಾತಿ ಬಗ್ಗೆ ಪೋಷಕರು ನಿಗಾ ವಹಿಸಬೇಕು

ಚಿಕ್ಕಮಗಳೂರು: ಮಕ್ಕಳು ಪ್ರತಿದಿನ ತಪ್ಪದೆ ಶಾಲೆಗೆ ಹಾಜರಾಗಬೇಕು. ಶಿಕ್ಷಣದಲ್ಲಿ ನಿರಂತರತೆ ಅತ್ಯಂತ ಮುಖ್ಯವಾಗಿದ್ದು, ಪೋಷಕರು ಈ...

ನಿವೇಶನಕ್ಕಾಗಿ ಒತ್ತಾಯಿಸಿ 4ನೇ ದಿನಕ್ಕೆ ಮುಂದುವರೆದ ಧರಣಿ

ಮೂಡಿಗೆರೆ: ತಾಲೂಕಿನ ಮಣ್ಣಿಕೆರೆ ಗ್ರಾಮದಲ್ಲಿ ಟಿಯುಸಿಐ ಮತ್ತು ವಸತಿಗಾಗಿ ಹೋರಾಟ ವೇದಿಕೆ ವತಿಯಿಂದ ನಿವೇಶನ ರಹಿತರು...