ತರೀಕೆರೆ : ಜಿಲ್ಲೆಯಲ್ಲಿ ದಿನದಿನಕ್ಕೆ ಮಾನವ ಮತ್ತು ವನ್ಯ ಪ್ರಾಣಿಗಳ ಸಂಘ ಹೆಚ್ಚಾಗುತ್ತಿದ್ದರೆ, ಮತ್ತೋಂದೆಡೆ ರೈತರು ಮತ್ತು ಅರಣ್ಯ ಇಲಾಖೆಯ ಸಂಘದ ಪ್ರಕಟಣಗಳು ಅವ್ಯಾಹತವಾಗಿ ನಡೆಯುತ್ತಿದ್ದು, ಇದ್ದನ್ನು ತಪ್ಪಿಸಲು ಮಲೆನಾಡು ಮತ್ತು ಕೆಲ ಬಯಲು ಸೀಮೆಯ ಜನಜೀವನ ಉಳಿಸಿಕೊಳ್ಳಲು ಜೂ. ೯ರಂದು ಚಿಕ್ಕಮಗಳೂರಿನಲ್ಲಿ ನಡೆಯುವ ರೈತರ ಬೃಹತ್ ಸಮಾವೇಶಕ್ಕೆ ಪಕ್ಷಾತೀತವಾಗಿ ಬೆಂಬಲಿಸಿ ಯಶಸ್ವಿಗೊಳಿಸಿ ಎಂದು ತರೀಕೆರೆ ತಾಲ್ಲೂಕು ದೇವರಾಜ್ ಅರಸ್ ವಿಚಾರ ವೇದಿಕೆಯ ಉಪಾಧ್ಯಕ್ಷ ಸಿ.ಆರ್. ಬಸವರಾಜ್ ಹೇಳಿದರು.
ಅವರು ಪಟ್ಟಣದ ಪ್ರವಾಸಿ ಮಂದಿರದಲ್ಲಿ ಪತ್ರಿಕೆಯೊಂದಿಗೆ ಮಾತನಾಡುತ್ತಾ ಈ ಸಮಾವೇಶದಲ್ಲಿ ನಮೂನೆ – ೫೭ರಲ್ಲಿ ಅರ್ಜಿ ಸಲ್ಲಿಸಿದವರಿಗೆ ಸಾಗುವಳಿ ಚೀಟಿ ನೀಡಬೇಕು. ಡೀಮ್ಡ್ ಫಾರೆಸ್ಟ್ ಪರಿ?ತ ಪಟ್ಟಿ ತಯಾರಿಸುವಾಗ ಗ್ರಾಮ ಪಂಚಾಯಿತಿ ಮೂಲಕ ಪ್ರಚುರ ಪಡಿಸಿ ರೈತರ ಹಾಗೂ ಗ್ರಾಮಸ್ಥರ ಗಮನಕ್ಕೆ ತರಬೇಕು. ಸೆಕ್ಷನ್ ೪(೧) ಪ್ರಸ್ತಾವನೆಯಲ್ಲಿರುವ ಎಲ್ಲಾ ರೈತರ ಜಮೀನು, ಮನೆ, ಗ್ರಾಮ, ಶಾಲಾ-ಕಾಲೇಜು, ಆಟದ ಮೈದಾನ, ಆಸ್ಪತ್ರೆ, ಸ್ಮಶಾನ, ಆಶ್ರಯ ನಿವೇಶನ ಮತ್ತು ಇನ್ನೀತರೆ ಅಭಿವೃದ್ಧಿ ಕೆಲಸಗಳಿಗೆ ಜಾಗ ಮೀಸಲಿಡಬೇಕು ಎಂಬುವುದರ ಜೊತೆಗೆ ಇನ್ನೀತೆ ಹಲವಾರು ಬೇಡಿಕೆಗಳನ್ನು ಈ ಸಮಾವೇಶದಲ್ಲಿ ಒತ್ತಾಯಿಸಲಾಗಿದೆ ಎಂದರು.
ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ, ಚಿಕ್ಕಮಗಳೂರು, ಕರ್ನಾಟಕ ಬೆಳೆಗಾರರ ಒಕ್ಕೂಟ, ಮಲೆನಾಡು ನಾಗರೀಕ ರೈತ ಹಿತರಕ್ಷಣಾ ಸಮಿತಿ, ಶೃಂಗೇರಿ ಕ್ಷೇತ್ರ ಹಾಗೂ ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳು, ಕನ್ನಡ, ದಲಿತ, ರೈತ ಮತ್ತು ವಿವಿಧ ಸಂಘ-ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದು, ಈ ಸಮಾವೇಶದಲ್ಲಿ ಜಿಲ್ಲೆಯ ಸಂಸದ ಮತ್ತು ಎಲ್ಲಾ ಶಾಸಕರು ಭಾಗವಹಿಸುವ ನಿರೀಕ್ಷೆ ಇದೆ ಎಂದರು.
Support the massive farmers’ convention
Leave a comment