Home namma chikmagalur ಚಿಕ್ಕಮಗಳೂರು INTSDRC-1ರಲ್ಲಿ ಎನ್.ಮಹೇಶ್ವರನ್ ಅಸಾಧಾರಣ ಪ್ರದರ್ಶನ
namma chikmagalurchikamagalurHomeLatest News

ಚಿಕ್ಕಮಗಳೂರು INTSDRC-1ರಲ್ಲಿ ಎನ್.ಮಹೇಶ್ವರನ್ ಅಸಾಧಾರಣ ಪ್ರದರ್ಶನ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ನಡೆದ 2025ರ ‌ ರಾಲಿ ಆಫ್ ಚಿಕ್ಕಮಗಳೂರು INTSDRC-1ರಲ್ಲಿ ಎನ್.ಮಹೇಶ್ವರನ್ ಮತ್ತು ಸಹ-ಚಾಲಕ ಪ್ರಕಾಶ್ ಮುತ್ತುಸಾಮಿ ಅವರು ಅಸಾಧಾರಣ ಪ್ರದರ್ಶನ ನೀಡಿ ಮುನ್ನಡೆ ಸಾಧಿಸಿದರು.

ಫೆಡರೇಷನ್ ಆಫ್ ಮೋಟಾರ್ ಸ್ಪೋರ್ಟ್ ಕ್ಲಬ್ ಆಫ್ ಇಂಡಿಯಾ (FMSCI) ಆಯೋಜಿಸಿದ ಭಾರತೀಯ ನ್ಯಾಷನಲ್ ಟೈಮ್ ಸ್ಪೀಡ್ ಡಿಸ್ಟನ್ಸ್ ರ್ಯಾಲಿ ಚಾಂಪಿಯನ್‌ಶಿಪ್ (4W) 2025ರ ಮೊದಲ ಅರ್ಹತಾ ಸುತ್ತಾಗಿ ಈ ರ್ಯಾಲಿ ನಡೆಯಿತು.

ಒಟ್ಟು ಎಂಟು ವಿಭಾಗಗಳಲ್ಲಿ 130ಕ್ಕೂ ಹೆಚ್ಚು ಸ್ಪರ್ಧಿಗಳು ಭಾಗವಹಿಸಿದ ಈ ಸುತ್ತು, ಚಾಂಪಿಯನ್‌ಶಿಪ್ ಇತಿಹಾಸದಲ್ಲೇ ಗರಿಷ್ಠ ಭಾಗವಹಿಸುವಿಕೆಯನ್ನು ದಾಖಲಿಸಿದೆ.

ಇತರ ವಿಭಾಗಗಳ ವಿಜೇತರಲ್ಲಿ ಎ.ವಿನೋದ್ (INTSDRC-2), ಅಪರ್ಣಾ ಪಠಕ್ (ಮಹಿಳಾ ಮತ್ತು ಕರ್ನಾಟಕ ರಾಜ್ಯ ವಿಭಾಗಗಳು), ವಿನಯ್ ಪ್ರಸನ್ನ (ಪ್ರೋ ಸ್ಟಾಕ್), ಭವಾನಿ ಬಾಲಕೃಷ್ಣನ್ (ಕಪಲ್ ಮತ್ತು ಸೂಪರ್ ಕಾರ್ ವಿಭಾಗಗಳು) ಸೇರಿದ್ದರು.

INTSDRC-1 ವಿಭಾಗದಲ್ಲಿ, ಮಹೇಶ್ವರನ್ ಎನ್ ಮತ್ತು ಪ್ರಕಾಶ್ ಮುತ್ತುಸ್ವಾಮಿ ಪ್ರಥಮ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿದ್ದ ತಂಡಕ್ಕಿಂತ ಸುಮಾರು ಒಂದು ನಿಮಿಷ ಮುನ್ನಡೆಯಿದ್ದರು. ಸಂತೋಷ್ ಕುಮಾರ್ ವಿ ಮತ್ತು ಟಿ. ನಾಗರಾಜನ್ ಎರಡನೇ ಸ್ಥಾನದಲ್ಲಿದ್ದು, ಗಣೇಶ್ ಮೂರ್ತಿ ಮತ್ತು ಚಂದ್ರಶೇಖ‌ರ್ ಮೂರನೇ ಸ್ಥಾನ ಪಡೆದರು.

INTSDRC-2 ವಿಭಾಗದಲ್ಲಿ, ಎ.ವಿನೋದ್ ಮತ್ತು ಎನ್.ಮುರುಗನ್ ಮೊದಲ ಸ್ಥಾನ ಪಡೆದರೆ, ಮಂಜು ಜೈನ್‌ ಮತ್ತು ಡಿಂಕಿ ವರ್ಗೀಸ್ ಎರಡನೇ ಸ್ಥಾನ ಹಾಗೂ ರಾಹೀಲ್ ಅಹ್ಮದ್ ಮತ್ತು ಸಕಾಯನ ಕುಮಾರ್ ಮೂರನೇ ಸ್ಥಾನ ಪಡೆದುಕೊಂಡರು. ಮಹಿಳಾ ವಿಭಾಗದಲ್ಲಿ, ಅಪರ್ಣಾ ಪಠಕ್ ಮತ್ತು ಲಲಿತಾ ಗೌಡ ತಂಡ ಒಂದು ಗಂಟೆಗೂ ಹೆಚ್ಚು ಮುನ್ನಡೆಯೊಂದಿಗೆ ಗೆಲುವು ಸಾಧಿಸಿತು. ಕ್ಷಮತಾ ಮತ್ತು ಅಮೋಲ್ ತಂಡ ಎರಡನೇ ಸ್ಥಾನ ಪಡೆದರೆ, ವಸ್ತ್ರೀ ಪಠಕ್ ಮತ್ತು ರಾಮುಚಂದ್ರ ಮೂರನೇ ಸ್ಥಾನ ಪಡೆದರು.

ಪ್ರೋ ಸ್ಟಾಕ್ ವಿಭಾಗದಲ್ಲಿ, ವಿನಯ್ ಪ್ರಸನ್ನ ಮತ್ತು ಆದಿ ಆಂಥನಿ ಮೊದಲ ಸ್ಥಾನದಲ್ಲಿದ್ದರು. ಡಿ ಕೀರ್ತಿ ಪ್ರಸಾದ್ ಮತ್ತು ಸಿ ಸಖೀವೇಲ್ ಎರಡನೇ ಸ್ಥಾನ, ವಿನಯ್ ಕುಮಾರ್ ಎಂ ಮತ್ತು ವೈ ಅರುಣ್ ಮೂರನೇ ಸ್ಥಾನ ಪಡೆದರು.

ಕಪಲ್ ವಿಭಾಗದಲ್ಲಿ, ಭವಾನಿ ಬಾಲಕೃಷ್ಣನ್ ಮತ್ತು ಆನಂದರಾಜ್ ಎಸ್ 6 ನಿಮಿಷಗಳ ಮುನ್ನಡೆಯೊಂದಿಗೆ ಜಯ ಸಾಧಿಸಿದರು.‌ ಶ್ರುತಾ ಜಯಂತ್ ಮತ್ತು ಜಯಂತ್ ಎಂ ಜೈನ್ ಎರಡನೇ ಸ್ಥಾನ, ರಾವಮಿ ಮಾಬೆಲ್ ಮತ್ತು ವಿನೋತ್ ಕುಮಾರ್ ಮೂರನೇ ಸ್ಥಾನ ಪಡೆದರು.

ಸೂಪರ್ ಕಾರ್ ವಿಭಾಗದಲ್ಲೂ, ಭವಾನಿ ಬಾಲಕೃಷ್ಣನ್ ಮತ್ತು ಆನಂದರಾಜ್ ಎಸ್ ಮೊದಲ ಸ್ಥಾನ ಪಡೆದರೆ, ಕರ್ನಾಟಕ ರಾಜ್ಯ ವಿಭಾಗದಲ್ಲಿ ಅಪರ್ಣಾ ಪಠಕ್ ಮತ್ತು ಲಲಿತಾ ಗೌಡ ಮೊದಲ ಸ್ಥಾನ ಪಡೆದರು. ನಾನು ಜಾನ್ ಮತ್ತು ಡಿಂಕಿ ವರ್ಗೀಸ್ ದ್ವಿತೀಯ ಸ್ಥಾನ ಹಾಗೂ ರಾಹೀಲ್ ಅಹ್ಮದ್ ಮತ್ತು ಸರವಣ ಕುಮಾ‌ರ್ ತೃತೀಯ ಸ್ಥಾನದಲ್ಲಿ ಸ್ಪರ್ಧೆಯನ್ನು ಮುಗಿಸಿದರು.

ಚಿಕ್ಕಮಗಳೂರಿನ ಮೋಟಾರ್ ಸ್ಪೋರ್ಟ್ಸ್ ಕ್ಲಬ್ (MSCC) ಆಯೋಜಿಸಿದ್ದ ಈ ಇವೆಂಟ್‌ನ್ನು ಜೆಕೆ ಟೈ‌ರ್ ಮೋಟಾರ್ ಸ್ಪೋರ್ಟ್ಸ್ ಸಹಯೋಗದಲ್ಲಿ ಹಾಗೂ ವಾಮ್ಪಿ ಮೆರ್ಲಾ ಸ್ಪೋರ್ಟ್ಸ್ ಫೌಂಡೇಶನ್ ಸಹ ಪ್ರಾಯೋಜಕತ್ವದಲ್ಲಿ ನಡೆಸಲಾಯಿತು. ಸೌತ್ ರೋನ್‌ನ ರೌಂಡ್ 1 ತಜ್ಞರು ಹಾಗೂ ಹೊಸ ಪ್ರತಿಭೆಗಳನ್ನು ಒಟ್ಟುಗೂಡಿಸಿ, ಸುಂದರ ಆದರೆ ತಾಂತ್ರಿಕವಾಗಿ ಸವಾಲುಗಳಿರುವ ಚಿಕ್ಕಮಗಳೂರಿನ ಹಾದಿಗಳನ್ನು ನವೀನ ಧೈರ್ಯದಿಂದ ನವಿರಾಗಿ ನಿರ್ವಹಿಸಲು ಪೂರಕವಾಗಿದೆ.

N. Maheshwaran’s exceptional performance in Chikmagalur INTSDRC-1

 

Share

Leave a comment

Leave a Reply

Your email address will not be published. Required fields are marked *

Don't Miss

ಸರ್ವಜ್ಞರ ತ್ರಿಪದಿಗಳು ಸಮಾಜದ ಅಂಕುಡೊಂಕು ತಿದ್ದುವ ಚಿಕಿತ್ಸಕ ಶಕ್ತಿಗಳು

ಚಿಕ್ಕಮಗಳೂರು: ಕನ್ನಡದ ಮಹಾನ್ ಸಂತ, ಕವಿ ಮತ್ತು ದಾರ್ಶನಿಕ ಸರ್ವಜ್ಞರ ತ್ರಿಪದಿಗಳು ಕೇವಲ ಸಾಹಿತ್ಯವಲ್ಲ, ಅವು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಚಿಕಿತ್ಸಕ ಶಕ್ತಿಯಾಗಿವೆ ಎಂದು ಭಾರತ ಸರ್ಕಾರದ ರಾಜ್ಯ ಪರಿಸರ ಮೌಲ್ಯಮಾಪನ...

ರಸ್ತೆ ಅಪಘಾತದಲ್ಲಿ ಬೈಕ್ ಸಾವಾರನ ಸಾವು

ಎನ್. ಆರ್ ಪುರ: ಬಾಳೆಹೊನ್ನೂರು ಸಮೀಪದ ಮಸೀದಿಕೆರೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನೊಬ್ಬ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಸಂಭವಿಸಿದೆ. ಮೃತರನ್ನು 21 ವರ್ಷದ ಗೋಕುಲ್ ಎಂದು...

Related Articles

ನಯನ ಔಟ್ -ಇಕ್ಕಟ್ಟಿನಲ್ಲಿ ತಮ್ಮಯ್ಯ ? ರಾಜೇಗೌಡ-ಆನಂದ್ ಸೇಫ್-ಶ್ರೀನಿವಾಸ್ ಗೆ ತ್ರೀ ಶಂಕು ಸ್ಥಿತಿ ?

ಚಿಕ್ಕಮಗಳೂರು; ರಾಜ್ಯದಲ್ಲಿ ಕಾಂಗ್ರೆಸ್ ಮೂರು ಬಣವಾಗಿರುವುದು ಸ್ಪಷ್ಟವಾಗಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಬಣ ,ಇನ್ನೊಂದು...

ಚಿಕ್ಕಮಗಳೂರು ನಗರ ಸಮೀಪಕ್ಕೆ ಬಂದ ಕಾಡಾನೆಗಳು

ಚಿಕ್ಕಮಗಳೂರು: ಕಾಫಿನಾಡಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದೆ. ಕಾಡಾನೆಗಳು ಚಿಕ್ಕಮಗಳೂರು ನಗರದಿಂದ ಕೇವಲ 5 ಕಿಮೀ ದೂರದ...

ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ ಭೀಕರ ಅಗ್ನಿ ಅವಘಡ

ಚಿಕ್ಕಮಗಳೂರು:  ಮೂಡಿಗೆರೆ ತಾಲೂಕಿನ ಹೆಗ್ಗುಡ್ಲು ಸರ್ಕಾರಿ ಶಾಲೆಯಲ್ಲಿ  ಭೀಕರ ಅಗ್ನಿ ಅವಘಡ ಸಂಭವಿಸಿದೆ. ಶಾಲೆಯ ಬಿಸಿಯೂಟದ...

ಸಂಸ್ಕೃತಿ, ಸಾಹಿತ್ಯ, ಕಲೆಯಿಂದ ಸುಸಂಸ್ಕೃತ ಸಮುದಾಯ ಕಟ್ಟಲು ಸಾಧ್ಯ

ಚಿಕ್ಕಮಗಳೂರು: ಸಂಸ್ಕೃತಿ, ಸಾಹಿತ್ಯ, ಕಲೆಯ ಮೂಲಕ ಮಾತ್ರ ಸುಸಂಸ್ಕೃತ ಸಮುದಾಯವನ್ನು ಕಟ್ಟಬಹುದು ಎಂದು ಬಸವತತ್ವ ಪೀಠಾಧ್ಯಕ್ಷರಾದ...