Home namma chikmagalur ನಿಸ್ವಾರ್ಥಗುಣ, ಸೇವಾಮನೋಭಾವದಿಂದ ಸಂಘಟನೆ ವೃದ್ದಿ
namma chikmagalurchikamagalurHomeLatest News

ನಿಸ್ವಾರ್ಥಗುಣ, ಸೇವಾಮನೋಭಾವದಿಂದ ಸಂಘಟನೆ ವೃದ್ದಿ

Share
Share

ಚಿಕ್ಕಮಗಳೂರು:  ಪ್ರಾಮಾಣಿಕತೆ, ನಿಸ್ವಾರ್ಥ ಗುಣ ಹಾಗೂ ಸೇವಾ ಮನೋಭಾವದಿಂ ದ ಸಂಘಟನೆಯನ್ನು ಕಟ್ಟಿಬೆಳೆಸಿದಾಗ ಮಾತ್ರ ಸಮಾಜದಲ್ಲಿ ಪರಿಪೂರ್ಣವಾಗಿ ಬೇರೂರಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹೇಳಿದರು.

ನಗರದ ಕುವೆಂಪು ಕಲಾಮಂದಿರದಲ್ಲಿ ಗುರುವಾರ ನಡೆದ ಕರ್ನಾಟಕ ಶ್ರಮಿಕ ಟ್ಯಾಕ್ಸಿ ಚಾಲಕರ ವೇ ದಿಕೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.

ಸಂಘಟನೆಗಳಲ್ಲಿ ಸ್ವಾರ್ಥ ನುಸುಳಿದರೆ, ಅಹಂಗೆ ಅವಕಾಶ ನೀಡಿದರೆ, ಒಳಗಿರುವವರ ಪ್ರತಿಷ್ಟೆಗೆ ವೇದಿ ಕೆಯಾದರೆ ಬಹುಕಾಲ ಉಳಿಗಾಲವಿಲ್ಲ. ಹೀಗಾಗಿ ಸಂಘಟನೆ ನೇತೃತ್ವದ ರೂವಾರಿಗಳು ನಿಸ್ವಾರ್ಥತನದಿಂ ದ ಕಾರ್ಯನಿರ್ವಹಿಸಬೇಕು. ಆ ನಿಟ್ಟಿನಲ್ಲ ಟ್ಯಾಕ್ಸಿ ಸಂಘಟನೆ ಅಧ್ಯಕ್ಷರು, ಚಾಲಕರಿಗೆ ಸೂಕ್ತ ಮಾರ್ಗದರ್ಶನ ನೀಡಿ ನೆರವಿಗೆ ಧಾವಿಸಬೇಕು ಎಂದರು.

ನದಿಗಳು ಎಂದಿಗೂ ದೊಡ್ಡಪ್ರವಾಹದಿಂದ ಹುಟ್ಟುವುದಿಲ್ಲ. ನದಿಗಳ ಉಗಮ ಸ್ಥಾನವನ್ನು ಗಮನಿಸಿರ ಬಹುದು. ಸಣ್ಣ ಸಣ್ಣ ತೊರೆಗಳಿಂದ ಹೊಳೆಯಾಗಿ, ನದಿಗಳಾಗುತ್ತವೆ. ಆ ರೀತಿಯಲ್ಲಿ ಇದೀಗ ತೊರೆಗಳಾಗಿ ಉಗಮಿಸಿರುವ ಟ್ಯಾಕ್ಸಿ ಚಾಲಕರ ಸಂಘಟನೆಗೆ ಹಲವರ ಕೈಜೋಡಣೆಯಿದ ದೊಡ್ಡನದಿಗಳಾಗಿ ಸಾಮರ್ಥ್ಯ ವಿಸ್ತರಿಸಬೇಕು ಎಂದು ತಿಳಿಸಿದರು.

ಪ್ರಸ್ತುತ ಟ್ಯಾಕ್ಸಿ ಚಾಲಕರೊಂದಿಗೆ ಸಂಕಷ್ಟದ ಸಮಯ ಹಾಗೂ ಒಳ್ಳೆಯ ಕೆಲಸಕ್ಕೆ ಮನೆಮಗನಂತೆ ಸದಾ ನಿಮ್ಮೊಂದಿಗೆ ನಿಲ್ಲಲು ಸಿದ್ಧ. ಸಂಘಟನೆ ಪದಾಧಿಕಾರಿಗಳು ಯಾವುದೇ ಆತಂಕಕ್ಕೆ ಒಳಗಾಗದೇ ಸಂಘಟನೆ ಯನ್ನು ಬಲಿಷ್ಟಗೊಳಿಸುವಲ್ಲಿ ಹೆಜ್ಜೆಹಾಕುವ ಜೊತೆಗೆ ಸಾರಿಗೆ ಇಲಾಖೆಯ ನಿಯಮವನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

ಕರ್ನಾಟಕ ಶ್ರಮಿಕ ಟ್ಯಾಕ್ಸಿ ಚಾಲಕರ ವೇದಿಕೆ ರಾಜ್ಯಾಧ್ಯಕ್ಷ ಹೆಚ್.ಕೆ.ಪ್ರಕಾಶ್ ಮಾತನಾಡಿ ರಾಜ್ಯದ ಚಾ ಲಕರು ಹೊರರಾಜ್ಯಗಳಲ್ಲಿ ಬ್ರೇಕ್‌ಡೌನ್ ಅಥವಾ ಅಂಗವೈಫಲ್ಯತೆಯಾದಲ್ಲಿ ವೇದಿಕೆಯಿಂದ ಸಹಾಯಧನ ಕಲ್ಪಿಸುವ ಗುರಿಹೊಂದಿದೆ. ಚಾಲಕರ ಕುಟುಂಬಕ್ಕೆ ಪ್ರತಿಭಾ ಪುರಸ್ಕಾರ, ರಕ್ತದಾನ ಶಿಬಿರ ಆಯೋಜಿಸಿ ಚಾಲ ಕರ ಶ್ರೇಯೋಭಿವೃದ್ದಿಗೆ ಕೆಲಸ ಮಾಡಲಾಗುವುದು ಎಂದರು.

ಪ್ರಸ್ತುತ ರಾಜ್ಯದಲ್ಲಿ ೨೭೦ಕ್ಕೂ ಹೆಚ್ಚು ಸದಸ್ಯರು ನೋಂದಣಿಯಾಗಿದೆ. ಈ ಪೈಕಿ ಜಿಲ್ಲೆಯಲ್ಲಿ ೧೧೦ ಚಾಲ ಕರು ವೇದಿಕೆಯಲ್ಲಿ ಸದಸ್ಯತ್ವ ಹೊಂದಿದ್ದಾರೆ. ಜಿಲ್ಲೆಯಿಂದ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು ಮು ಮುಂದೆ ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಸಂಘಟನೆ ಪದಾಧಿಕಾರಿಗಳನ್ನು ನೇಮಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಆರ್‌ಟಿಓ ಅಧಿಕಾರಿ ನರಸೇಗೌಡ, ಚಂದ್ರಕಲಾ, ವೇದಿಕೆ ರಾಜ್ಯ ಗೌರವಾಧ್ಯಕ್ಷ ರಾಜು, ಉಪಾಧ್ಯಕ್ಷ ಸಂಗಪ್ಪ ಬಾಗಲಕೋಟೆ, ಪ್ರಧಾನ ಕಾರ್ಯದರ್ಶಿ ಇ.ಗಿರೀಶ್, ಜಂಟಿ ಕಾರ್ಯದರ್ಶಿ ರಾಜ್‌ಕುಮಾರ್, ಖಜಾಂಚಿ ನಾಗರಾಜು, ಸಂಘಟನಾ ಕಾರ್ಯದರ್ಶಿ ಯೋಗೇಶ್, ಸಹ ಸಂಘಟನಾ ಕಾರ್‍ಯದರ್ಶಿ ರಾಜು ಹಾಗೂ ಚಾಲಕರು ಉಪಸ್ಥಿತರಿದ್ದರು.

Organizational growth through selflessness and service spirit

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...