Home Latest News ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ
Latest NewschikamagalurHomenamma chikmagalur

ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸಿದ ಸರ್ಕಾರ

Share
Share

ಚಿಕ್ಕಮಗಳೂರು: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಬೆಂಗಳೂರಿನಲ್ಲಿ ನಡೆದ ಕಾಲ್ತುಳಿತದಿಂದ ೧೧ ಮಂದಿ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಪೊಲೀಸ್‌ ಅಧಿಕಾರಿಗಳನ್ನು ಅಮಾನತುಗೊಳಿಸಿ ತನ್ನ ತಪ್ಪನ್ನು ಅಧಿಕಾರಿಗಳ ಮೇಲೆ ಹೊರಿಸುವ ಕೆಲಸ ಮಾಡಿದೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಆಕ್ರೋಶ ವ್ಯಕ್ತಪಡಿಸಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಲ್ತುಳಿತ ಪ್ರಕರಣದಲ್ಲಿ ಸರ್ಕಾರ ತಾನು ಹೊಣೆಗಾರಿಕೆಯಿಂದ ನುಣುಚಿಕೊಳ್ಳುವ ಕೆಲಸ ಮಾಡಬಾರದು ಎಂದು ಹೇಳಿದರು.

ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರನ್ನು ನಾನು ಬಲ್ಲೆ. ಅವರು ಶಿಸ್ತಿನ ಒಳ್ಳೆಯ ಅಧಿಕಾರಿ. ಅವರನ್ನೂ ಸೇರಿದಂತೆ ಇತರೆ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಪಡಿಸಿರುವುದು ಸರಿಯಲ್ಲ. ಸರ್ಕಾರ ತಾನು ಮಾಡಿದ ತಪ್ಪನ್ನು ಅವರ ಮೇಲೆ ಹೊರಿಸಿ ನಾವು ಮಾಡಿದ್ದೇ ಸರಿ ಎಂದು ಹೇಳಿದರೆ ಅವರಿಗೆ ತಿಳಿವಳಿಕೆ ಹೇಳುವುದು ಯಾರು ಎಂದು ಪ್ರಶ್ನಿಸಿದರು.

ಕಾರ್ಯಕ್ರಮಕ್ಕೆ ಸರ್ಕಾರದ ಕಡೆಯಿಂದ ಪೂರ್ವ ತಯಾರಿ ಇರಲಿಲ್ಲ. ಪೊಲೀಸ್ ಗುಪ್ತಚರ ಇಲಾಖೆ ಸಹ ಈ ಬಗ್ಗೆ ಎಚ್ಚರಿಸಿತ್ತು. ಅದನ್ನು ಸರ್ಕಾರ ಲೆಕ್ಕಕ್ಕೆ ತೆಗೆದುಕೊಳ್ಳಲಿಲ್ಲ. ಇದರ ಪರಿಣಾಮ ೧೧ ಮಂದಿ ಅಮಾಯಕರು ಸಾವಿಗೀಡಾದರು. ಆದರೂ ಮುಖ್ಯಮಂತ್ರಿಯಾಗಲಿ, ಉಪ ಮುಖ್ಯಮಂತ್ರಿಯಾಗಲಿ ವಿಷಾಧವನ್ನೂ ಸಹ ವ್ಯಕ್ತಪಡಿಸಿಲ್ಲ. ಅಲ್ಲದೆ ಅಧಿಕಾರಿಗಳ ಮೇಲೆ ತಪ್ಪು ಹೊರಿಸಿರುವುದರಲ್ಲಿ ಅರ್ಥವೂ ಇಲ್ಲ ಎಂದರು.

ವಾಸ್ತವಿಕತೆಯನ್ನು ಅರ್ಥ ಮಾಡಿಕೊಂಡು ಕನಿಷ್ಟ ಸರ್ಕಾರ ವಿಷಾಧ ಹೇಳಬೇಕಿತ್ತು. ಅದನ್ನು ಬಿಟ್ಟು ಅಧಿಕಾರಿಗಳನ್ನು ಅಮಾನತು ಪಡಿಸುವುದು ಸರಿಯಲ್ಲ ಎಂದು ಹೇಳಿದರು.

The government blamed its mistakes on the officials.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...