Home ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?
Homechikamagalurnamma chikmagalurPolitical News

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

Share
Share

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್ ಶಿಖರದ ತುದಿ ಮುಟ್ಟಿರುತ್ತದೆ ಇನ್ನೂ ಖಚಿತ ಎನ್ನುವಾಗ ಶಂಕರ್ ಹೆಸರು ತೆರೆಮರೆಗೆ ಸರಿದು ಮಾಯಾವಾಗುತ್ತದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಶಂಕರ್ ಪರ ಪ್ರಬಲವಾಗಿ ನಿಂತು ವಿಧಾನ ಪರಿಷತ್ ಗೆ ಕಳುಹಿಸಿ ಸಭಾಪತಿ ಮಾಡುವ ಲೆಕ್ಕಾಚಾರವನ್ನು ಹೈಕಮ್ಯಾಂಡ್ ಎಳ್ಳುನೀರು ಬಿಟ್ಟಿದೆ.ಇದರಿಂದಾಗಿ ಶಂಕರ್ ಗೆ ಮತ್ತೆ ಮತ್ತೆ ಮಿಸ್ ಹೊಡೆಯುತ್ತಿರುವುದು ಏಕೆ .

ಶಂಕರ್ ಸದಾಕಾಲವೂ ಚಟುವಟಿಕೆಯಲ್ಲಿ ಇರುತ್ತಾರೆ.ಕಾಲೇಜು ದಿನಗಳಿಂದ ಸಂಘಟನೆ,ಹೋರಾಟ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಇಪ್ಪತ್ತೈದನೇ ವಯಸ್ಸಿನಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮಂತ್ರಿಯಾಗಿ ದೇವೇಗೌಡರ ನೀಲಿ ಕಣ್ಣಿನ ಹುಡುಗನಾಗಿ ಸಕ್ರಿಯವಾಗಿದ್ದರು.ಬೆಳಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಸಂಜೆ ಮಂತ್ರಿಯಾದ ಶಂಕರ್ ಎಷ್ಟು ಗಟ್ಟಿಯಾಗಿದ್ದರು ಎಂಬುದಕ್ಕೆ ಸಾಕ್ಷಿ.

ದೇವೇಗೌಡರ ಜೊತೆಗೆ ಸಂಬಂಧ ಹಳಸಿದ ಮೇಲೆ ರಾಜಕೀಯವಾಗಿ ಮೂಲೆ ಗುಂಪಾಗಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಚಿಕ್ಕಮಗಳೂರು ರಾಜಕಾರಣದ ಸೂತ್ರಧಾರರಾಗಿದ್ದಾರೆ.

ಸ್ಪರ್ಧೆ ಮಾಡಿದ ಚುನಾವಣೆಯಲ್ಲಿ ಸೋಲು ಖಚಿತ ಎನ್ನುವ ಪರಿಸ್ಥಿತಿ ಕಳೆದ ಇಪ್ಪತ್ತೈದು ವರ್ಷಗಳಿಂದ ದೇವೇಗೌಡರ ಶಾಪದಿಂದ ಮುಕ್ತರಾಗಿಲ್ಲ.ಇನ್ನೂ ಕಾಂಗ್ರೆಸ್ ನ ಹಲವರು ಒಳಗೆ ಬತ್ತಿ ಇಡುತ್ತಿದ್ದಾರೆ ಎನ್ನುವವರು ಇದ್ದಾರೆ ಜಿಲ್ಲೆಯ ಶಾಸಕರುಗಳು ಶಂಕರ್ ಬರದಂತೆ ತಡೆದಿದ್ದಾರೆ ಎನ್ನುವವರು ಇದ್ದಾರೆ.ಶಂಕರ್ ಪವರ್‌ ಸೆಂಟರ್ ನಲ್ಲಿ ಇದ್ದರೆ ಜನರಿಂದ ಚುನಾಯಿತರಾದ ನಾವು ಇವರ ಬಳಿ ಹೋಗಬೇಕು ಎಂಬ ಲೆಕ್ಕಾಚಾರದಲ್ಲಿ ಮುಖ್ಯ ಮಂತ್ರಿ ಬಳಿ ಅಲವತ್ತು ಕೊಂಡು ಕಾಲು ಎಳೆದಿದ್ದಾರೆ ಎನ್ನುತ್ತಾರೆ.

ಕಳೆದ ಎರಡು ತಿಂಗಳಿಂದ ಶಂಕರ್ ಗೆ ಶುಭಾಶಯ ಕೇಳಿ,ಕೇಳಿ ಸಾಕಾಗಿದೆ ಅಂತೂ ಇಂತೂ ಶಂಕರ್ ಗೆ ವಿಧಾನ ಪರಿಷತ್ ಗೆ ಹೋಗುವ ಭಾಗ್ಯ ಬರಲಿಲ್ಲ. ಜಿಲ್ಲೆಯ ಮಾಜಿ ಮಂತ್ರಿ ಬೇಗಾನೆ ರಾಮಯ್ಯನವರ ಮಗಳು ಅನಿವಾಸಿ ಭಾರತೀಯ ಉಪಾಧ್ಯಕ್ಷೆ ಆರತಿಕೃಷ್ಣರನ್ನು ವಿಧಾನ ಪರಿಷತ್ ಗೆ ಕಳುಹಿಸಲು ಹೈಕಮ್ಯಾಂಡ್ ತೀರ್ಮಾನ ಮಾಡಿರುವುದರಿಂದ ಶಂಕರ್ ಗೆ ಮತ್ತೆ,ಮತ್ತೆ ಪ್ರಯತ್ನ ಮಾಡುವುದು ಬಿಟ್ಟು ಬೇರೆ ಯಾವ ಗ್ಯಾರಂಟಿ ಇಲ್ಲ.

B.L. Shankar misses again and again…?

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...