Home Latest News ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ
Latest NewschikamagalurHomenamma chikmagalur

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ

Share
Share

ಚಿಕ್ಕಮಗಳೂರು : ಚಿಕ್ಕಮಗಳೂರು ನಗರಸಭೆಯ ಮಹತ್ವದ ಬೆಳವಣಿಗೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸುಜಾತಾ ಶಿವಕುಮಾರ ರಾಜೀನಾಮೆ ನೀಡಿದ್ದಾರೆ.

ನಗರಸಭೆಯಲ್ಲಿ ಬಿಜೆಪಿ ಅಧಿಕಾರದಲ್ಲಿದ್ದರು ಕಳೆದ ಬಾರಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡದೆ ಪಕ್ಷದಿಂದಲೇ ಉಚ್ಚಾಟನೆಗೊಂಡು ಭಾರೀ ಮುಖಭಂಗ ಅನುಭವಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆ ಹೆಜ್ಜೆ ಇಟ್ಟಿದೆ. ಜೆಡಿಎಸ್ ಜೊತೆ ಮೈತ್ರಿ ಒಪ್ಪಂದದಂತೆ ಕೊಟ್ಟ ಮಾತಿಗೂ ತಪ್ಪದಂತೆ ಕೇವಲ ಇಬ್ಬರೇ ಸದಸ್ಯರಿರುವ ಜೆಡಿಎಸ್ ಗೆ ಬಿಟ್ಟು ಕೊಡಲು ನಿರ್ಧರಿಸಿದೆ.

ಈ ಹಿನ್ನಲೆಯಲ್ಲಿ ಪ್ರಸ್ತುತ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ನಡುವೆ ಮತ್ತೊಮ್ಮೆ ಕುರ್ಚಿಗಾಗಿ ಪೈಪೋಟಿ ಎದುರಾಗುವ ಸಾಧ್ಯತೆ ಇದ್ದು, ಈ ಎಲ್ಲಾ ಬೆಳವಣಿಗೆಗಳನ್ನು ಕಾಂಗ್ರೆಸ್ ಕಾದು ನೋಡುವ ತಂತ್ರಕ್ಕೆ ಮುಂದಾಗಿದೆ.

ಬಿಜೆಪಿ ಜೆಡಿಎಸ್ ನಡುವಿನ ಒಪ್ಪಂದ ಮತ್ತು ಅಧಿಕಾರದ ಹೊಂದಾಣಿಕೆಯನ್ನು ಸೂಕ್ಷ್ಮವಾಗಿ ಗಮನಿಸಿ ಮುಂದುವರೆಯುವ ಸಾಧ್ಯತೆ ಇದೆ. ಎರಡು ದಿನ ಹಿಂದಷ್ಟೇ ಅಧ್ಯಕ್ಷೆ ಸುಜಾತಾ ಶಿವಕುಮಾರ್ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಅವರಿಗೆ ರಾಜೀನಾಮೆ ಸಲ್ಲಿಸಿದ್ದು ರಾಜೀನಾಮೆ ಅಂಗೀಕಾರಗೊಳ್ಳಲು ಹತ್ತು ದಿನಗಳ ಕಾಲಾವಕಾಶ ಇದೆ.

ಇದರ ನಡುವೆ ಮತ್ತೆನಾದರು ಬೆಳವಣಿಗೆಗಳು ನಡೆಯಲಿವೆಯೇ ಎಂಬ ಕುತೂಹಲ ಕೂಡ ಪಕ್ಷದ ಸದಸ್ಯರಲ್ಲಿ ಮನೆ ಮಾಡಿದೆ. ಇದರ ನಡುವೆ ಪಕ್ಷೇತರ ನಗರಸಭೆ ಸದಸ್ಯೆ ಶೀಲಾದಿನೇಶ್ ಮುಂದಿನ ಅಧ್ಯಕ್ಷೆ ಎಂದು ಬಿಂಬಿಸಲಾಗುತ್ತಿದ್ದು.

ಇದಕ್ಕೆ ಕಾಂಗ್ರೆಸ್ ಸದಸ್ಯರು ಬೆಂಬಲ ವ್ಯಕ್ತಪಡಿಸುವ ಸಾಧ್ಯತೆ ಇದೆ. ಆದರೆ ಇದಕ್ಕೆ ರಾಜೀನಾಮೆ ಅಂಗೀಕಾರವಾದ ಬಳಿಕ ಜಿಲ್ಲಾಧಿಕಾರಿಗಳು ಚುನಾವಣೆ ನಿಗದಿ ಪಡಿಸಬೇಕಿದೆ.

Sujatha Shivakumar resigns as Chikkamagaluru Municipal Council President

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...