Home namma chikmagalur ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ – ಮೂವರು ಆರೋಪಿಗಳ ಬಂಧನ
namma chikmagalurchikamagalurCrime NewsHomeLatest News

ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ – ಮೂವರು ಆರೋಪಿಗಳ ಬಂಧನ

Share
Share

ಚಿಕ್ಕಮಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ಪೆಟ್ರೋಲ್ ಸುರಿದು ಸುಟ್ಟು ತಲೆಮರೆಸಿಕೊಂಡಿದ್ದ ಮೂವರು ಆರೋಪಿಗಳನ್ನು ಕಡೂರು ಪೊಲೀಸರು ಬಂದಿಸಿ, ಕೃತ್ಯಕ್ಕೆ ಬಳಸಿದ ಓಮಿನಿ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಕಡೂರು ಪಟ್ಟಣದ ಪ್ರದೀಪ್ ಆಚಾರಿ(೩೩), ಕಡೂರು ಪಟ್ಟಣ ಕೋಟೆ ಬಡಾವಣೆಯ ಸಿದ್ದೇಶ್(೩೫), ವಿಶ್ವಾಸ್ (೧೮) ಬಂಧಿತ ಆರೋಪಿಗಳು, ಜೂ.೨ರಂದು ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ಕಂಸಾಗರ ಗೇಟ್ ಬಳಿ ಅನಾಮಧೇಯ ವ್ಯಕ್ತಿಯ ದೇಹ ಸುಟ್ಟ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೃತದೇಹವು ಕೊಲೆ ಮಾಡಿ ಸುಟ್ಟ ಸ್ಥಿತಿಯಲ್ಲಿ ದೊರೆತ್ತಿದ್ದು, ಕಡೂರು ಪೊಲೀಸ್ ಠಾಣೆಯಲ್ಲಿ ಶ್ರೀನಿವಾಸ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿತ್ತು.

ಮೇ.೩೧ರಂದು ಕಡೂರು ಪಟ್ಟಣದ ಕೋಟೆ ಬಡಾವಣೆಯ ಮೀನಾಕ್ಷಿ ಎಂಬುವರು ತಮ್ಮ ಗಂಡ ಸುಬ್ರಹ್ಮಣ್ಯ ನಾಪತ್ತೆಯಾಗಿ ರುವ ಬಗ್ಗೆ ದೂರು ದಾಖಲಿಸಿದ್ದರು. ಎರಡು ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಪ್ರಾರಂಭಿಸಿದ ಕಡೂರು ಠಾಣೆ ಪೊಲೀಸರು, ಕೊಲೆಯಾಗಿ ಸುಟ್ಟಸ್ಥಿತಿಯಲ್ಲಿ ದೊರೆತ ಮೃತದೇಹ ಮತ್ತು ಮೀನಾಕ್ಷಿ ಅವರ ಗಂಡ ಸುಬ್ರಹ್ಮಣ್ಯ ಎಂಬುದು ಖಾತ್ರಿ ಪಡಿಸಿಕೊಂಡ ಪೊಲೀಸರು ಆರೋಪಿಗಳಾದ ಪ್ರದೀಪ್ ಆಚಾರಿ, ಸಿದ್ದೇಶ್, ವಿಶ್ವಾಸ್‌ನನ್ನು ವಶಕ್ಕೆ ಪಡೆದು ವಿಚಾ ರಣೆಗೆ ಒಳಪಡಿಸಿದಾಗ ಅಕ್ರಮ ಸಂಬಂಧದಿಂದ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ಪ್ರದೀಪ್ ಆಚಾರಿ ಮತ್ತು ಸುಬ್ರಹ್ಮಣ್ಯ ಅವರ ಪತ್ನಿ ಮೀನಾಕ್ಷಿ ನಡುವೆ ಅಕ್ರಮ ಸಂಬಂಧವಿದ್ದು, ಸುಬ್ರಹ್ಮಣ್ಯ ಅಕ್ರಮ ಸಂಬಂಧಕ್ಕೆ ಅಡ್ಡಿಪಡಿಸುತ್ತಿದ್ದ ಹಿನ್ನಲೆಯಲ್ಲಿ ಪ್ರದೀಪ್ ಆಚಾರಿ ಸಿದ್ದೇಶ್ ಮತ್ತು ವಿಶ್ವಾಸ್‌ಗೆ ಹಣದ ಆಸೆ ತೋರಿಸಿ ಮೇ.೩೧ರಂದು ಕಂಸಾಗರ ಗೇಟ್ ಬಳಿ ಸಿದ್ದೇಶ್ ಅವರ ಮಾರತಿ ಓಮಿನಿಯಲ್ಲಿ ಸುಬ್ರಹ್ಮಣ್ಯನನ್ನು ಕೂರಿಸಿಕೊಂಡು ಹಗ್ಗದಿಂದ ಕುತ್ತಿಗೆ ಬಿಗಿದು ಕೊಲೆ ಮಾಡಿ ನಂತರ ಮೃತದೇಹವನ್ನು ಸೌದೆ ಮತ್ತು ಪೆಟ್ರೋಲ್ ಬಳಸಿ ಸುಟ್ಟು ಹಾಕಲು ಯತ್ನಿಸಿರುವುದು ತಿಳಿದು ಬಂದಿದೆ.

ಮೂವರು ಆರೋಪಿಗಳನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಕೃತ್ಯಕ್ಕೆ ಬಳಸಿದ ಮಾರುತಿ ಓಮಿನಿ ಕಾರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಆರೋಪಿಗಳನ್ನು ಪತ್ತೆ ಕಾರ್ಯಾಚರಣೆಯಲ್ಲಿ ಭಾಗಿಯಾದ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ|ವಿಕ್ರಮ ಅಮಟೆ ಶ್ಲಾಘೀಸಿ ಬಹುಮಾನ ಘೋಷಿಸಿದ್ದಾರೆ.

Murder by hanging with rope – Three accused arrested

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...