Home namma chikmagalur ಕಾಫಿ ನಾಡಿನಾದ್ಯಂತ ಬಕ್ರೀದ್ ಆಚರಣೆ
namma chikmagalurchikamagalurHomeLatest News

ಕಾಫಿ ನಾಡಿನಾದ್ಯಂತ ಬಕ್ರೀದ್ ಆಚರಣೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಶನಿವಾರ ಬಕ್ರೀದ್ ಆಚರಣೆ ನಡೆಯಿತು.

ಮುಸ್ಲಿಂ ಸಮುದಾಯದವರು, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯವನ್ನು ವಿನಿಯಮ ಮಾಡಿಕೊಂಡರು.

ನಗರದ ಎಂ.ಜಿ. ರಸ್ತೆಯಲ್ಲಿರುವ ತಾಜಾರಿನ್, ಸಂಗೀನಾ, ನೆಹರು ನಗರದ ಬದ್ರಿಯಾ, ಉಪ್ಪಳ್ಳಿಯ ಶಾದ್ರುಲಿ, ಕಲ್ಲುದೊಡ್ಡಿಯ ಅಮ್ಜದ್ ಖಾರಾರ್ ಹಾಗೂ ಆದಿಶಕ್ತಿ ನಗರದ ಮಸೀದಿಗಳಲ್ಲಿ ಬ್ಯಾರಿ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಮುಸ್ಲಿಂ ಸಮುದಾಯದವರು ನಗರದ ವಿಜಯಪುರ ಹಾಗೂ ಕೆಂಪನಹಳ್ಳಿಯ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಂಪನಹಳ್ಳಿಯ ಈದ್ಗಾ ಮೈದಾನಕ್ಕೆ ಸಾಮೂಹಿಕ ಪ್ರಾರ್ಥನೆ ಬಕ್ರೀದ್ ಹಬ್ಬದ ಶುಭಾಶಯ ಸಲ್ಲಿಸಿದರು.

ಎಲ್ಲರೂ ಕೂಡ ಜಾತಿ, ಧರ್ಮವನ್ನು ಬದಿಗಿಟ್ಟಿ ಸೌಹಾರ್ದತೆಯಿಂದ ಬಾಳಬೇಕು. ಇದು, ಸಂವಿಧಾನದ ಆಶಯವಾಗಿದೆ. ಅದರಂತೆ ಎಲ್ಲರೂ ನಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಗುರುಗಳು ಹಾಜರಿದ್ದರು.

Bakrid celebration across coffee country

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...