Home namma chikmagalur ಕಾರು‌- ಲಾರಿ ನಡುವೆ ಡಿಕ್ಕಿ‌ : ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿ ಸಾವು
namma chikmagalurchikamagalurCrime NewsHomeLatest News

ಕಾರು‌- ಲಾರಿ ನಡುವೆ ಡಿಕ್ಕಿ‌ : ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿ ಸಾವು

Share
Share

ಮೂಡಿಗೆರೆ: ಗೋಣಿಬೀಡು ಗ್ರಾಮದ ಕಸ್ಕೇಬೈಲ್ ಸಮೀಪ ಭಾನುವಾರ ಸಂಜೆ ಕಾರು‌ ಹಾಗೂ ತರಕಾರಿ‌ ಸಾಗಿಸುತ್ತಿದ್ದ ಲಾರಿ ನಡುವೆ ಡಿಕ್ಕಿ‌ ಸಂಭವಿಸಿದ್ದು, ರಸ್ತೆ ಬದಿಯಲ್ಲಿ‌ ನಿಂತಿದ್ದ ವ್ಯಕ್ತಿಯೊಬ್ಬರು ಸ್ಥಳದಲ್ಲೆ ಸಾವನ್ನಪ್ಪಿದ್ದಾರೆ.

ಸುಧಾಕರ್ (35) ಮೃತಪಟ್ಟವರು. ಇವರು, ಗೋಣಿಬೀಡು ಹೋಬಳಿಯ ಚಿನ್ನಿಗಾ ಗ್ರಾ.ಪಂ. ಅಟೆಂಡರ್ ಆಗಿ ಸೇವೆ ಸಲ್ಲಿಸುತ್ತಿದ್ದರು.

ಕಸ್ಕೇಬೈಲ್ ಗ್ರಾಮದ ಚರ್ಚ್ ಹಾಲ್ ಬಳಿ ಸುಧಾಕರ್ ರಸ್ತೆ ಬದಿ ಬಸ್‌ ಗಾಗಿ ಕಾಯುತ್ತಾ ನಿಂತಿದ್ದಾಗ, ರಾಷ್ಟ್ರೀಯ ಹೆದ್ದಾರಿ 73ರಲ್ಲಿ ‌ವೇಗವಾಗಿ ಬಂದ ತರಕಾರಿ ಸಾಗಾಟದ ಲಾರಿಯು ಎದುರಿ ನಿಂದ ಬಂದ ಕಾರಿಗೆ ಡಿಕ್ಕಿ ಹೊಡೆದು ಸುಧಾಕರ್ ಮೇಲೆ ಹರಿದಿದೆ. ಇದರಿಂದ ಅವರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಡಿಕ್ಕಿಯ ರಭಸಕ್ಕೆ ಲಾರಿ ಪಲ್ಟಿಯಾಗಿದ್ದು, ಮುಂದಿನ ಚಕ್ರಗಳು ಕಿತ್ತು ಬಂದಿವೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಘಟನೆಯಿಂದ ಹೆದ್ದಾರಿಯಲ್ಲಿ ಸಂಚಾರ‌ ಅಸ್ತವ್ಯಸ್ತವಾಗಿತ್ತು.‌ ಸ್ಥಳಕ್ಕೆ ಬಂದ ಗೋಣಿಬೀಡು ಪೊಲೀಸರು ವಾಹನಗಳನ್ನು ‌ತೆರವು ಗೊಳಿಸಿ, ಸುಗಮ ಸಂಚಾರಕ್ಕೆ ಅವಕಾಶ ಕಲ್ಪಿಸಿದರು.

ಅಪಘಾತದ ಘಟನೆಗೆ ಸಂಬಂಧಿಸಿದಂತೆ ಗೋಣಿಬೀಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಧಾಕರ್ ಅವರಿಗೆ ಪತ್ನಿ, ಇಬ್ಬರು ಮಕ್ಕಳಿದ್ದು, ತಿಂಗಳ‌ ಹಿಂದಷ್ಟೇ ಮನೆಯ ಗೃಹಪ್ರವೇಶ ನಡೆಸಿದ್ದರು. ಕುಟುಂಬಸ್ಥರ ಆಕ್ರಂದನ‌ ಮುಗಿಲು ಮುಟ್ಟಿತ್ತು.

Car-lorry collision: Man standing on the side of the road dies

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...