Home Latest News ‘ಪರಿಶಿಷ್ಟ ಜಾತಿ,ಪಂಗಡದ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ’
Latest NewschikamagalurHomenamma chikmagalur

‘ಪರಿಶಿಷ್ಟ ಜಾತಿ,ಪಂಗಡದ ದೌರ್ಜನ್ಯ ಪ್ರಕರಣ ಕಾಲಮಿತಿಯಲ್ಲಿ ಇತ್ಯರ್ಥಪಡಿಸಿ’

Share
Share

ಚಿಕ್ಕಮಗಳೂರು: ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರ ಮೇಲೆ ಆಗುವ ದೌರ್ಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು, ಸಕಾಲದಲ್ಲಿ ಪ್ರಕರಣಗಳ ಬಗ್ಗೆ ಕ್ರಮ ವಹಿಸಿ ದೋಷಾರೋಪ ಪಟ್ಟಿ ಸಲ್ಲಿಸಿದ ನಂತರ ಕಾಲಮಿತಿಯೊಳಗೆ ಇತ್ಯರ್ಥವಾಗುವಂತೆ ನೋಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಸಿ.ಎನ್. ಸೂಚಿಸಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಅನುಸೂಚಿತ ಜಾತಿ, ಅನುಸೂಚಿತ ಪಂಗಡಗಳ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ದೌರ್ಜನ್ಯ ಪ್ರಕರಣಗಳಿಗೆ ಮಂಜೂರಾದ ಪರಿಹಾರ ಧನವನ್ನು ತಕ್ಷಣ ಬಿಡುಗಡೆ ಮಾಡಬೇಕು. ಎಸ್‌ಸಿ, ಎಸ್‌ಟಿ ಜನರಿಗೆ ಅನ್ಯಾಯವಾಗದಂತೆ ಎಚ್ಚರ ವಹಿಸಿ ದೌರ್ಜನ್ಯ ತಡೆಕಾಯ್ದೆ ಪ್ರಕಾರ ಕಾನೂನು ಕ್ರಮ ಜರುಗಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಎನ್.ಆರ್.ಪುರ ತಾಲ್ಲೂಕು ಬನ್ನೂರು ಗ್ರಾಮ ಪಂಚಾಯಿತಿ ಸರ್ವೇ ನಂ.೧೪ ರ ಗೋಮಾಳದಲ್ಲಿ ನಿವೇಶನ ರಹಿತ ಫಲಾನುಭವಿಗಳಿಗೆ ಆಶ್ರಯ ನಿವೇಶನಗಳನ್ನು ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕೆಂದು ಈಗಾಗಲೇ ಹಲವಾರು ಬಾರಿ ಸೂಚಿಸಲಾಗಿದ್ದು, ಇನ್ನೂ ಕ್ರಮಕ್ಕೆ ಮುಂದಾಗದಿರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿಗಳು, ಕೂಡಲೇ ಕ್ರಮ ವಹಿಸುವಂತೆ ಎನ್.ಆರ್.ಪುರ ತಾಲ್ಲೂಕು ತಹಸೀಲ್ದಾರರಿಗೆ ಸೂಚಿಸಿದರು.

ಎನ್.ಆರ್.ಪುರ ತಾಲ್ಲೂಕು ಬನ್ನೂರು ಗ್ರಾಮದ ಶೆಟ್ಟಿಹಿತ್ಲು ಸರ್ವೇ ನಂ.೮೯ ಮತ್ತು ೯೫ ರಲ್ಲಿ ೧೦೦ ವರ್ಷಗಳಿಂದ ವಾಸವಿರುವ ೩೦ ಆದಿವಾಸಿ ಕುಟುಂಬಗಳಿಗೆ ಹಕ್ಕು ಪತ್ರ ನೀಡಲು ಅರಣ್ಯ ಹಕ್ಕು ಕಾಯ್ದೆಯಡಿ ಅರ್ಜಿಗಳನ್ನು ಸ್ವೀಕರಿಸಿ ಕ್ರಮ ವಹಿಸುವಂತೆ ತಿಳಿಸಲಾಗಿತ್ತು. ಈ ಕುರಿತು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿಗಳು ಪ್ರತಿಕ್ರಿಯಿಸಿ, ಅರಣ್ಯ ಹಕ್ಕು ಅರ್ಜಿಗಳನ್ನು ಸ್ವೀಕಾರ ಮಾಡುವ ಬಗ್ಗೆ ಗ್ರಾಮ ಮಟ್ಟದ ಸಮಿತಿಗಳಿಗೆ ತರಬೇತಿ ನೀಡಿ ಬಾಕಿ ಇರುವ ಹಾಗೂ ಹೊಸದಾಗಿ ಸ್ವೀಕೃತವಾಗುವ ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಲು ಕ್ರಮ ವಹಿಸಲಾಗುವುದು ಎಂದು ಮಾಹಿತಿ ನೀಡಿದರು.

ಪರಿಶಿಷ್ಟ ಜಾತಿ, ಜನಾಂಗದವರು ವಾಸಿಸುತ್ತಿರುವ ಕಡೂರು ಟೌನ್ ಅಂಬೇಡ್ಕರ್ ನಗರದಲ್ಲಿ ಮಂಜೂರಾಗಿರುವ ಸ್ಮಶಾನ ಭೂಮಿಯನ್ನು ಪುರಸಭೆ ವ್ಯಾಪ್ತಿಗೆ ಬರುವುದಿದ್ದರೆ ಪುರಸಭೆಗೆ ಹಸ್ತಾಂತರಿಸುವಂತೆ ಕಡೂರು ತಹಸೀಲ್ದಾರರಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ.ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಚ್.ಎಸ್.ಕೀರ್ತನಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಟಿ.ಜಯಕುಮಾರ್, ಉಪವಿಭಾಗಾಧಿಕಾರಿಗಳಾದ ದೇವರಾಜ್, ಕಾಂತರಾಜ್, ಸಮಿತಿಯ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

‘Resolve Scheduled Caste and Scheduled Tribe atrocities cases within time limit’

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...