Home Latest News ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ
Latest NewschikamagalurHomenamma chikmagalur

ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ

Share
????????????????????????????????????
Share

ಚಿಕ್ಕಮಗಳೂರು: ಕಾರ್ಮಿಕರಿಗೆ ಎಲ್ಲಾ ರೀತಿಯ ಚಿಕಿತ್ಸೆಗೆ ಒಳಗಾಗಿಸುವ ನಿಟ್ಟಿನಲ್ಲಿ ರಾಜ್ಯಸರ್ಕಾರ ಆಧುನಿಕ ತಂತ್ರಜ್ಞಾನ ಹಾಗೂ ಪರಿಣಿತ ವೈದ್ಯರ ತಂಡದೊಂದಿಗೆ ಸಂಚಾರಿ ಆರೋಗ್ಯ ವಾಹನ ಶ್ರಮಿಕರಿಗಾಗಿ ಪೂರೈಸಲಾಗಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಕಾರ್ಮಿಕ ಕಚೇರಿಯಲ್ಲಿ ಮಂಗಳವಾರ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ನೂತನ ಎರಡು ಸಂಚಾರಿ ಆರೋಗ್ಯ ಘಟಕದ ವಾಹನಕ್ಕೆ ಚಾಲನೆ ನೀಡಿ ಅವರು ಮಾತನಾಡಿ ಕಟ್ಟಡ ಕಾರ್ಮಿಕರಿಗೆ ತುರ್ತು ಆರೋಗ್ಯ ಪರಿಸ್ಥಿತಿ ಕಂಡುಬಂದ ಸಂದರ್ಭಗಳಲ್ಲಿ ಸಮೀಪದ ಆಸ್ಪತ್ರೆತೆ ಅಂಬ್ಯೂಲೆನ್ಸ್ ಮಾದರಿಯಲ್ಲಿ ಸೇವೆಯನ್ನು ಒದಗಿಸಿ, ತದನಂತರ ಮಂಡಳಿಯೊಂದಿಗೆ ಸಮನ್ವಯ ಸಾಧಿಸಿ ಕಾರ್ಮಿಕರಿಗೆ ಅಗತ್ಯ ಚಿಕಿತ್ಸೆ ಒದಗಿಸುವ ಜೊತೆಗೆ ಪ್ರತಿ ವಾಹನದಲ್ಲೂ ಎಂಬಿಬಿಎಸ್ ನುರಿತ ವೈದ್ಯರ ತಂಡ ಕಾರ್ಯನಿರ್ವಹಿಸಲಿದೆ ಎಂದರು.

ಸಂಚಾರಿ ವಾಹನವು ಜಿಲ್ಲೆಯಾದ್ಯಂತ ಸಂಚರಿಸಿ ರಕ್ತದೊತ್ತಡ, ರಕ್ತಹೀನತೆ, ಅಪೌಷ್ಠಿಕತೆ, ತುರ್ತು ಔಷಧ, ಮೂರ್ಛೆರೋಗ, ಮಧುಮೇಹ, ಬಿಪಿ, ತಾಯಿಯ ಆರೋಗ್ಯ, ನವ ಜನನ ಮತ್ತು ಶಿಶು ಆರೋಗ್ಯ, ದೀರ್ಘಕಾಲದ ಸಂವಹನ ರೋಗಗಳ ನಿರ್ವಹಣೆ, ಕ್ಷಯರೋಗ, ಹೆಚ್‌ಐವಿ, ಕುಷ್ಠ, ಮಲೇರಿಯಾ ಸೇರಿ ದಂತೆ ಇಪ್ಪತ್ತಕ್ಕೂ ಹೆಚ್ಚು ಚಿಕಿತ್ಸೆಯನ್ನು ಉಚಿತವಾಗಿ ನೀಡಲಿದೆ ಎಂದು ಹೇಳಿದರು.

ಪ್ರಸ್ತುತ ಜಿಲ್ಲೆಯಲ್ಲಿ ೧.೪೦ ಲಕ್ಷ ಕಾರ್ಮಿಕರು ಇಲಾಖೆಯಲ್ಲಿ ನೋಂದಾಯಿಸಿಕೊಂಡಿದ್ದು ಮದುವೆ, ವೈದ್ಯಕೀಯ ವೆಚ್ಚ, ಹೆರಿಗೆ ಸೌಲಭ್ಯವನ್ನು ನೀಡುತ್ತಿದೆ. ಪ್ರಸಕ್ತ ಸಾಲಿನ ಅಪಘಾತದಲ್ಲಿ ಮೃತರಾದ ಕಾರ್ಮಿಕರ ಕುಟುಂಬಕ್ಕೆ ರಾಜ್ಯಸರ್ಕಾರ ೫.೧೩ ಕೋಟಿ ಹಣವನ್ನು ನೇರ ಖಾತೆಗೆ ಜಮಾಯಿಸಿ ನೊಂದವರಿಗೆ ಆಸರೆ ಯಾಗಿದೆ ಎಂದರು.

ಈಗಾಗಲೇ ರಾಜ್ಯದಲ್ಲಿ ೪೬ ಕೋಟಿ ರೂ. ವೆಚ್ಚದಲ್ಲಿ ಒಟ್ಟು ೧೦೦ ವಾಹನಗಳನ್ನು ರಾಜ್ಯಾದ್ಯಂತ ಸಂಚರಿ ಸುತ್ತಿದ್ದು ಎಲ್ಲಾ ಕಾರ್ಮಿಕರು ಮತ್ತು ಅವಲಂಬಿತರಿಗೆ ಅಗತ್ಯ ಆರೋಗ್ಯ ತಪಾಸಣೆ ಮತ್ತು ಚಿಕಿತ್ಸೆಯನ್ನು ಕಾರ್ಮಿಕರಿರುವ ಸ್ಥಳಕ್ಕೆ ತೆರಳಿ ನೀಡುತ್ತಿದೆ. ಅದರಂತೆ ಜಿಲ್ಲಾ ಕೇಂದ್ರಕ್ಕೂ ಎರಡು ವಾಹನಗಳನ್ನು ನೀಡಿ ಕಾ ರ್ಮಿಕರಿಗೆ ಸ್ಪಂದಿಸಿದೆ ಎಂದರು.

ಕಾರ್ಮಿಕರ ಬದುಕಿನ ಶ್ರೇಯೋಭಿವೃದ್ದಿಗಾಗಿ ಕಟ್ಟಡ ನಿರ್ಮಿಸುವ ಮಾಲೀಕರಿಂದ ಶೇ.೧ರ ಸುಂಕವನ್ನು ಕಾರ್ಮಿಕ ಇಲಾಖೆಗೆ ಕಡ್ಡಾಯಗೊಳಿಸಿದ್ದು ಇದರಿಂದ ಬಡಕಾರ್ಮಿಕ ವರ್ಗಕ್ಕೆ ಸಕಲಸವಲತ್ತನ್ನು ಪೂರೈಸಿ ತುರ್ತು ವೇಳೆಯಲ್ಲಿ ಸಹಕರಿಸುತ್ತಿದೆ. ಜೊತೆಗೆ ವಾಹನದಲ್ಲಿ ಕಾರ್ಯನಿರ್ವಹಿಸುವ ವೈದ್ಯರು, ಶುಶ್ರೂಷಕರು ಸೇವಾಮನೋಭಾವನದಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

ಕಾರ್ಮಿಕ ಅಧಿಕಾರಿ ಸುರೇಶ್ ಮಾತನಾಡಿ ಹೈಟೆಕ್ ಸಂಚಾರಿ ಆರೋಗ್ಯ ಕ್ಲಿನಿಕ್ ವಾಹನವು ಕಾರ್ಮಿ ಕರು ತುರ್ತು ಸಂದರ್ಭದಲ್ಲಿ ಸ್ಪಂದಿಸಲು ರಾಜ್ಯಸರ್ಕಾರ ಎರಡು ವಾಹಗಳನ್ನು ಒದಗಿಸಿಕೊಟ್ಟಿದ್ದು ೨೦ಕ್ಕೂ ಹೆಚ್ಚು ವಿವಿಧ ಸೌಲಭ್ಯಗಳು ಈ ವಾಹನದಿಂದ ಅಡಕವಾಗಿದೆ ಎಂದು ತಿಳಿಸಿದರು.

ಇದೇ ವೇಳೆ ೨೦ ಬಡಗಾರೆ ಕೆಲಸಗಾರರಿಗೆ ಟೂಲ್‌ಕಿಟ್ ಹಾಗೂ ಅಪಘಾತದಲ್ಲಿ ಮೃತಪಟ್ಟ ವಾಣಿಜ್ಯ ಚಾಲಕರ ಈರ್ವರ ಕುಟುಂಬಕ್ಕೆ ತಲಾ ೫ ಲಕ್ಷ ರೂ.ಗಳ ಆದೇಶ ಪ್ರತಿಯನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಸಹಾಯಕ ಕಾರ್ಮಿಕ ಆಯುಕ್ತ ಎಂ.ಸುಭಾಶ್, ಕಾರ್ಮಿಕ ನಿರೀಕ್ಷಕರಾದ ಪ್ರಭಾಕರ್, ಪ್ರವೀಣ್‌ಕುಮಾರ್, ತರೀಕೆರೆ ಕಾರ್ಮಿಕ ನಿರೀಕ್ಷಕ ಮಹಾದೇವಪ್ಪ, ಕಾರ್ಮಿಕ ಕಲ್ಯಾಣ ಮಂಡಳಿ ಅಭಿ ಯಂತರ ಹ್ಯಾರಿಸ್, ಇಲಾಖೆ ಸಿಬ್ಬಂದಿಗಳು, ಫಲಾನುಭವಿಗಳು ಉಪಸ್ಥಿತರಿದ್ದರು.

Workers’ Welfare Board launches health unit vehicle

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...