Home namma chikmagalur ಸಾಂಕ್ರಾಮಿಕ ರೋಗಗಳ ತಡೆಗೆ ನಗರಸಭೆಯೊಂದಿಗೆ ಕೈ ಜೋಡಿಸಬೇಕು
namma chikmagalurchikamagalurHomeLatest News

ಸಾಂಕ್ರಾಮಿಕ ರೋಗಗಳ ತಡೆಗೆ ನಗರಸಭೆಯೊಂದಿಗೆ ಕೈ ಜೋಡಿಸಬೇಕು

Share
Share

ಚಿಕ್ಕಮಗಳೂರು:  ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿರುವ ಎಲ್ಲಾ ಹೋಟೆಲ್, ಬೇಕರಿ, ಸಹಿ-ಖಾರ ತಿಂಡಿಗಳ ತಯಾರಕರು, ಕಲ್ಯಾಣ ಮಂಟಪ ಮತ್ತಿತರೆ ಉದ್ದಿಮೆದಾರರು ಸ್ವಚ್ಛತೆಗೆ ಆಧ್ಯತೆ ನೀಡಿ ಸಾಂಕ್ರಾಮಿಕ ರೋಗಗಳ ತಡೆಗೆ ನಗರಸಭೆಯೊಂದಿಗೆ ಕೈ ಜೋಡಿಸಬೇಕು ಎಂದು ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮನವಿ ಮಾಡಿದರು.

ಅವರು ಮಂಗಳವಾರ ನಗರಸಭೆ ಸಭಾಂಗಣದಲ್ಲಿ ಬೇಕರಿ, ಸಿಹಿ-ಖಾರ ತಿನಿಸುಗಳ ತಯಾರಕರು, ಮಾರಾಟಗಾರರು, ಸ್ವೀಟ್ಸ್ ಸ್ಟಾಲ್, ಕಾಂಡಿಮೆಂಟ್ಸ್, ಕಲ್ಯಾಣ ಮಂಟಪಗಳ ಮಾಲೀಕರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಆಹಾರ ನಮ್ಮ ಆರೋಗ್ಯ ಒಂದು ಭಾಗ ಗುಣಮಟ್ಟದ ಆಹಾರ ಸೇವನೆ ಅಗತ್ಯವಿರುತ್ತದೆ. ಹೋಟೆಲ್‌ಗಳು, ಬೇಕರಿ ಇನ್ನಿತರೆ ತಿನಿಸು ಮಾರಾಟ ಮಾಡುವವರು ಉತ್ತಮವಾದ ಆಹಾರ ಪೂರೈಕೆ ಮಾಡಬೇಕು. ಅಗತ್ಯ ಇರುವಷ್ಟು ಮಾತ್ರ ತಯಾರು ಮಾಡಿಕೊಳ್ಳಬೇಕು. ಉಳಿಸಿ ಮತ್ತೆ ಮಾರಾಟ ಮಾಡಬಾರದು ಎಂದರು.

ಬಸ್ ನಿಲ್ದಾಣ, ಇತರೆ ಕೆಲವುಕಡೆ ತೆರೆದ ವಾತಾವರಣದಲ್ಲಿ ತಿಂಡಿ, ತಿನಿಸು ಮಾರಾಟ ಮಾಡುವುದನ್ನು ಗಮನಿಸಿದ್ದೇನೆ. ಜನ ಸಂದಣಿ ಪ್ರದೇಶಗಳಲ್ಲಿ ಧೂಳು, ಕ್ರಿಮಿ, ಕೀಟಗಳು ಇರುತ್ತವೆ. ಇವು ಆಹಾರ ಪದಾರ್ಥಗಳನ್ನು ಕೆಡಿಸಿ ಸಾಂಕ್ರಾಮಿಕ ರೋಗಗಳಿಗೆ ದಾರಿ ಮಾಡಿಕೊಡುತ್ತದೆ. ಈ ಕಾರಣಕ್ಕೆ ಆಹಾರ ಪದಾರ್ಥಗಳನ್ನು ಸುರಕ್ಷಿತವಾಗಿ ಮುಚ್ಚಿದ ವಾತಾವರಣದಲ್ಲಿಟ್ಟು ಮಾರಾಟಮಾಡಬೇಕು ಎಂದರು.

ಪ್ಲಾಸ್ಟಿಕ್ ಬಳಕೆಯಿಂದ ಪರಿಸರ ಹಾಗೂ ಆರೋಗ್ಯದ ಮೇಲೆ ಸಾಕಷ್ಟು ದುಷ್ಪರಿಣಾಮ ಉಂಟು ಮಾಡುತ್ತಿದೆ. ಈಹಿನ್ನೆಲೆಯಲ್ಲಿ ಪ್ಲಾಸ್ಟಿಕ್ ವಸ್ತುಗಳನ್ನು ಮಾರಾಟ ಮಾಡುವುದಕ್ಕೆ ವರ್ತಕರೇ ಕಡಿವಾಣ ಹಾಕಿಕೊಳ್ಳಬೇಕು ಎಂದು ಮನವಿ ಮಾಡಿದರು.

ಕೆಲವರು ಮದ್ಯ ಸೇವಿಸಿ ಸಾರ್ವಜನಿಕ ಪ್ರದೇಶದಲ್ಲೇ ಬಾಟಲಿಗಳನ್ನು ಬಿಸಾಡಿ ಬರುತ್ತಿದ್ದಾರೆ. ವಿದ್ಯಾವಂತರಾದರೂ ಅವಿವೇಕಿಗಳ ರೀತಿ ನಡೆದುಕೊಳ್ಳುತ್ತಿರುವುದು ವಿಪರ್ಯಾಸ ಅದಕ್ಕೆ ಅವರೇ ಸ್ವಯಂ ಕಡಿವಾಣ ಹಾಕಿಕೊಳ್ಳಬೇಕು ಎಂದರು.

ಕಲ್ಯಾಣ ಮಂಟಪಗಳಲ್ಲಿ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ನಿಷೇಧವಿದೆ. ಅದನ್ನು ಕಟ್ಟು ನಿಟ್ಟಾಗಿ ಜಾರಿಗೆ ತರಬೇಕು. ಅಲ್ಲದೆ ಶುಚಿತ್ವಕ್ಕೆ ಮಹತ್ವ ನೀಡಬೇಕು ಎಂದು ತಿಳಿಸಿದರು.

ನಗರಸಭೆ ಆಯಕ್ತ ಬಿ.ಸಿ.ಬಸವರಾಜು ಮಾತನಾಡಿ, ಮಳೆಗಾಲ ಆರಂಭವಾಗಿರುವ ಹಿನ್ನೆಲೆಯಲ್ಲಿ ಹೋಟೆಲ್‌ಗಳು, ಬೇಕರಿಗಳು ಮತ್ತಿತರೆ ತಿಂಡಿ-ತಿನಿಸುಗಳನ್ನು ತಯಾರಿಸುವವರು ಸ್ವಚ್ಛತೆ ಕಾಪಾಡಿಕೊಳ್ಳುವ ಜೊತೆಗೆ ಗ್ರಾಹಕರಿಗೆ ಕುಡಿಯಲು ಬಿಸಿಯಾದ ಅಥವಾ ಕಾಯಿಸಿ ಆರಿಸಿದ ನೀರು ನೀಡಬೇಕು ಎಂದು ಸೂಚಿಸಿದರು.

ಅಕ್ಟೋಬರ್ ವರೆಗೆ ಇದೇ ರೀತಿ ಮಳೆ ಮುಂದುವರಿಯಲಿದೆ. ಸೊಳ್ಳೆಗಳು ಉತ್ಪತ್ತಿಯಾಗುವ ಸಂದರ್ಭ ಇದಾಗಿರುತ್ತದೆ. ಈ ಬಗ್ಗೆ ಆರೋಗ್ಯ ಇಲಾಖೆ ಸಾಕಷ್ಟು ಜಾಗೃತಿಯ ಮಾಹಿತಿಗಳನ್ನು ನೀಡಿದೆ. ಇದಲ್ಲದೆ ಆಹಾರ ಪದಾರ್ಥಗಳನ್ನು ಪ್ರಿಡ್ಜ್‌ಗಳಲ್ಲಿಟ್ಟು ಮಾರಾಟ ಮಾಡವ ತಿನಿಸುಗಳಿಂದ ಸಾರ್ವಜನಿಕರ ಆರೋಗ್ಯಕ್ಕೆ ಕುತ್ತಾಗಬಾರದು. ಈ ವಿಚಾರದಲ್ಲಿ ಎಚ್ಚರಿಕೆ ವಹಿಸಬೇಕು. ಶುಚಿತ್ವವನ್ನು ಕಾಪಾಡಿಕೊಳ್ಳಬೇಕು. ವಿಶೇಷವಾಗಿ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಿಕೊಳ್ಳಬೇಕು ಎಂದರು.

ಪದೇ ಪದೇ ನಮ್ಮ ಸಿಬ್ಬಂದಿ ದಾಳಿ ಮಾಡಿ ದಂಡ ವಿಧಿಸಿದರೂ ಮತ್ತದೇ ಅಭ್ಯಾಸ ಪುನರಾವರ್ತನೆ ಆಗುತ್ತಲೇ ಇದೆ. ಆದರೆ ಅದಕ್ಕೆ ಶಾಶ್ವತ ಕಡಿವಾಣ ಹಾಕಬೇಕಿದೆ. ಜಿಲ್ಲೆ ಸಂಪೂರ್ಣ ಪ್ಲಾಸ್ಟಿಕ್ ಮುಕ್ತ ಜಿಲ್ಲೆಯಾಗಬೇಕೆಂದು ಆದೇಶವಿದೆ. ಇದಕ್ಕೆ ಎಲ್ಲರೂ ಸಹಕರಿಸಬೇಕು. ಇಲ್ಲವಾದಲ್ಲಿ ಅಂಗಡಿ, ಉದ್ದಿಮೆಗಳನ್ನು ಮುಚ್ಚಿ ದಂಡ ವಿಧಿಸುವುದು ಅನಿವಾರ್ಯವಾಗುತ್ತದೆ. ನಂತರ ಕೋರ್ಟ್‌ಗೆ ಹೋಗಿ ಆದೇಶ ತರಬೇಕಾಗುತ್ತದೆ ಎಂದು ಎಚ್ಚರಿಸಿದರು.

ಪ್ಲಾಸ್ಟಿಕ್ ನಿಷೇಧದ ವಿಚಾರದಲ್ಲಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪ ಮಾದರಿಯಾಗಿದೆ. ಅಲ್ಲಿ ಕುಡಿಯುವ ನೀರನ್ನೂ ಸಹ ಪ್ಲಾಸ್ಟಿಕ್ ಬಾಟಲಿಯಲ್ಲಿ ಕೊಡುವುದಿಲ್ಲ. ಪ್ಲಾಸ್ಟಿಕ್ ಬಳಕೆ ಸಂಪೂರ್ಣ ನಿಷೇಧ ಮಾಡಿದ್ದಾರೆ. ಅದೇ ರೀತಿ ಉಳಿದವರು ಪ್ಲಾಸ್ಟಿಕ್ ನಿಷೇಧಕ್ಕೆ ಕ್ರಮ ತೆಗೆದುಕೊಳ್ಳಬೇಕು. ಇನ್ನು ಏಳೆಂಟು ದಿನಗಳಲ್ಲಿ ಪರ್ಯಾಯ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕು ಇಲ್ಲವಾದಲ್ಲಿ ಗಂಭೀರ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಎಚ್ಚರಿಸಿದರು.

ಕಲ್ಯಾಣ ಮಂಟಪಗಳಲ್ಲಿ ಸಮಾರಂಭ ನಡೆಯುವಾಗ ಪಾರ್ಕಿಂಗ್ ಸಮಸ್ಯೆಯಿಂದ ಸಾರ್ವಜನಿಕರಿಗೆ ತೊಂದರೆ ಆಗುತ್ತಿದೆ. ಒಕ್ಕಲಿಗರ ಕಲ್ಯಾಣ ಮಂಟಪದ ಬಳಿ ಸ್ವಲ್ಪ ಹೆಚ್ಚೇ ತೊಂದರೆ ಆಗುತ್ತಿದೆ. ಈ ಬಗ್ಗೆ ಗಮನ ಹರಿಸಿ ಟ್ರಾಫಿಕ್‌ನಿಂದ್ ಕಿರಿಕಿರಿ ಉಂಟಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಿದರು.

ಆರೋಗ್ಯ ಇಲಾಖೆಯ ಆರೋಗ್ಯ ನಿರೀಕ್ಷಕ ಶ್ರೀಧರ್ ಸ್ವಚ್ಛತೆ-ಸಾಂಕ್ರಾಮಿಕ ರೋಗಗಳ ನಿಯಂತ್ರಣದ ಬಗ್ಗೆ ಮಾಹಿತಿ ನೀಡಿದರು. ನಗರಸಭೆ ಅಧಿಕಾರಿ, ಸಿಬ್ಬಂದಿಗಳು ಉಪಸ್ಥಿತರಿದ್ದರು.

We should join hands with the municipality to prevent infectious diseases.

Share

Leave a comment

Leave a Reply

Your email address will not be published. Required fields are marked *

Don't Miss

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ತಿಳಿಸಿದರು. ಚಿಕ್ಕಮಗಳೂರಿನಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವರು, ರಾಜ್ಯ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ ನ್ಯಾಯಾಲಯವು ಮಹತ್ವದ ಶಿಕ್ಷೆ ಪ್ರಕಟಿಸಿದೆ. ಹಣದ ವಿಚಾರವಾಗಿ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ...

Related Articles

ಮೆಡಿಕಲ್ ಅಂಗಡಿಗೆ ಕನ್ನ : ₹2.66 ಲಕ್ಷ ನಗದು ದೋಚಿ ಪರಾರಿ

ಚಿಕ್ಕಮಗಳೂರು;  ಜಿಲ್ಲೆಯ ಶೃಂಗೇರಿ ಪಟ್ಟಣದಲ್ಲಿ ತಡರಾತ್ರಿ ನಡೆದ ಕಳ್ಳತನ ಪ್ರಕರಣ ಸ್ಥಳೀಯರಲ್ಲಿ ಆತಂಕಕ್ಕೆ ಕಾರಣವಾಗಿದೆ. ಪಟ್ಟಣದ...

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್...

ಸಾಲ ತೀರಿಸಲಾಗದೆ ರೈತ ಬೆಂಕಿ ಹಚ್ಚಿಕೊಂಡು ಸಾವು

ಕಡೂರು: ಜಮೀನಿನ ಅಭಿವೃದ್ಧಿ ಹಾಗೂ ಬೆಳೆಗೆ ಮಾಡಿದ್ದ ಸಾಲವನ್ನು ತೀರಿಸಲಾಗದೆ ತೀವ್ರವಾಗಿ ಕೊರಗುತ್ತಿದ್ದ ಕನ್ನೇನಹಳ್ಳಿಯ ರೈತರೊಬ್ಬರು...