Home namma chikmagalur ಸೆಪ್ಟೆಂಬರ್ 13 ಕ್ಕೆ ಡಿ.ಸಿ.ಸಿ ಬ್ಯಾಂಕ್ ಚುನಾವಣೆ
namma chikmagalurchikamagalurHomeLatest News

ಸೆಪ್ಟೆಂಬರ್ 13 ಕ್ಕೆ ಡಿ.ಸಿ.ಸಿ ಬ್ಯಾಂಕ್ ಚುನಾವಣೆ

Share
Share

ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ಚುನಾವಣೆ ಸೆಪ್ಟೆಂಬರ್ 13 ರಂದು ನಡೆಯಲಿದೆ.

ಚಿಕ್ಕಮಗಳೂರು ಉಪವಿಭಾಗಧಿಕಾರಿಯವರನ್ನು ಚುನಾವಣಾ ಅಧಿಕಾರಿಯಾಗಿ ನೇಮಿಸಿದ್ದು ಚಿಕ್ಕಮಗಳೂರು ತಹಶಿಲ್ದಾರರನ್ನು ಸಹಾಯಕ ಚುನಾವಣಾಧಿಕಾರಿಯಾಗಿ ನೇಮಿಸಲಾಗಿದೆ.

ಬ್ಯಾಂಕ್ ನ 13 ನಿರ್ದೇಶಕ ಸ್ಥಾನಕ್ಕೆ ಚುನಾವಣೆ ನಡೆಯಲಿದ್ದು ಬಿಜೆಪಿಯವರು ಪ್ರಸ್ತುತ ಅಧಿಕಾರದ ಚುಕ್ಕಾಣಿ ಹಿಡಿದು ಮಾಜಿ ಶಾಸಕರಾದ ಡಿ.ಎಸ್.ಸುರೇಶ್ ಅಧ್ಯಕ್ಷರಾಗಿ ಅತ್ಯುತ್ತಮ ಬ್ಯಾಂಕ್ ಕಟ್ಟಡ ನಿರ್ಮಿಸಿರುವುದು ಸೇರಿದಂತೆ ರೈತರಿಗೆ ಸಕಾಲದಲ್ಲಿ ಸಾಲ ದೊರೆಯುವಂತೆ ಮಾಡಿದ್ದಾರೆ.

ಸಹಕಾರ ಕ್ಷೇತ್ರದ ಇತಿಹಾಸದಲ್ಲಿ ಘಾಟಾನುಘಟಿ ಸಹಕಾರಿಗಳು ಅತ್ಯುನ್ನತ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಲು ಹಾತೊರೆದರು ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿರಲಿಲ್ಲ.ಮಾಜಿ ಶಾಸಕರಾದ ಬೆಳ್ಳಿ ಪ್ರಕಾಶ್ ಡಿಸಿಸಿ ಬ್ಯಾಂಕ್ ನಿಂದ ಅಪೆಕ್ಸ್ ಬ್ಯಾಂಕ್ ನಿರ್ದೇಶಕರಾಗಿ ಅಪೆಕ್ಸ್ ಬ್ಯಾಂಕ್ ಅಧ್ಯಕ್ಷರಾಗಿ ಇದೇ ಅವಧಿಯಲ್ಲಿ ದಾಖಲೆ ಬರೆದಿದ್ದಾರೆ.

ಮತ್ತೆ ಚುನಾವಣೆ ನಿಗಧಿಯಾಗಿದ್ದು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಿಲ್ಲೆಯಲ್ಲಿ ಐದು ಜನ ಕಾಂಗ್ರೆಸ್ ಶಾಸಕರಿದ್ದಾರೆ ಹೀಗಾಗಿ ಕುತೂಹಲ ಹುಟ್ಟಿಸಿದೆಯಾದರೂ ಒಂದಿಬ್ಬರು ಗೆದ್ದರೆ ಹೆಚ್ಚು ಎನ್ನುತ್ತಿದ್ದಾರೆ. ಏಕೆಂದರೆ ಕಳೆದ ಮೂವತ್ತು ವರ್ಷಗಳಿಂದ ಕಾಂಗ್ರೆಸ್ ಡಿಸಿಸಿ ಬ್ಯಾಂಕ್ ವಿಚಾರದಲ್ಲಿ ಕೈ ಕಟ್ಟಿ ಕುಳಿತಿದ್ದೇ ಹೆಚ್ಚು. ಈಗಲೂ ಕೂಡ ಅದೇ ಸ್ಥಿತಿ ಯಥಾಸ್ಥಿತಿ ಎನ್ನುತ್ತಿದ್ದಾರೆ.

ಸಹಕಾರ ಸಂಘಗಳಿಗೆ ನಡೆದ ಚುನಾವಣೆಗಳನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡ ಬಿಜೆಪಿಯವರು ಮತ್ತೊಂದು ಅವಧಿಯ ಅಧಿಕಾರ ಹಿಡಿಯುವ ಸಾಧ್ಯತೆ ಹೆಚ್ಚಿದೆ ಎನ್ನಲಾಗಿದೆ.

ಚಿಕ್ಕಮಗಳೂರು, ಕಡೂರು, ತರೀಕೆರೆ ಮತ್ತು ಮೂಡಿಗೆರೆಯಲ್ಲಿ ಬಹುತೇಕ ಸೊಸೈಟಿಗಳನ್ನು ಬಿಜೆಪಿಯವರು ಹಿಡಿತಕ್ಕೆ ಪಡೆದಿದ್ದಾರೆ ಕಾಂಗ್ರೆಸ್ ಕೊಪ್ಪ ದಲ್ಲಿ ಮಾತ್ರ ದಾರಿ ಸುಗಮ ಮಾಡಿಕೊಂಡಿದೆ.

DCC Bank Election on September 13

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...