Home namma chikmagalur ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಹದಿನೈದು ದಿನಗಳಲ್ಲಿ ಇ–ಸ್ವತ್ತು ದಾಖಲೆ
namma chikmagalurchikamagalurHomeLatest News

ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಹದಿನೈದು ದಿನಗಳಲ್ಲಿ ಇ–ಸ್ವತ್ತು ದಾಖಲೆ

Share
Share

ಬಾಳೆಹೊನ್ನೂರು: ಎಲ್ಲವನ್ನೂ ವಿರೋಧಿಸುತ್ತ ಹೋದರೆ ಹೇಗೆ? ಅನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ಹದಿನೈದು ದಿನಗಳಲ್ಲಿ ಇ–ಸ್ವತ್ತು ದಾಖಲೆಯನ್ನು ಪಡೆಯಬಹುದಾಗಿದೆ. ಇದರಿಂದ ರೈತರಿಗೆ ಒಳಿತಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದರು.

ಕಳೆದ ವಾರ ಸುರಿದ ಗಾಳಿ ಮಳೆಗೆ ಮರದ ಕೊಂಬೆ ಬಿದ್ದು ಮೃತಪಟ್ಟ ಚಿಕ್ಕಮಗಳೂರು ತಾಲ್ಲೂಕು ಖಾಂಡ್ಯ ಹೋಬಳಿ ಬಿಳುಕೊಪ್ಪದ ಅನಿಲ್ ರೊಜಾರಿಯೊ ಕುಟುಂಬಕ್ಕೆ ₹ 5 ಲಕ್ಷದ ಪರಿಹಾರದ ಚೆಕ್‌ ಹಸ್ತಾಂತರಿಸಿ ಶನಿವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

ರೈತರು ಜಮೀನಿನಲ್ಲಿ ಕಟ್ಟುವ ಮನೆಗೆ ವಿದ್ಯುತ್ ಸಂಪರ್ಕ ಪಡೆಯಲು ಇ–ಸ್ವತ್ತು ಕಡ್ಡಾಯ. ಟ್ರಾನ್ಸ್‌ಫಾರ್ಮರ್ ಸಂಪರ್ಕ ಕಲ್ಪಿಸುವಂತೆ ಕೋರಿ 4.5 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. 3 ಲಕ್ಷ ಅರ್ಜಿಗಳನ್ನು ವಿಲೇವಾರಿ ಮಾಡಲಾಗಿದೆ. ಟ್ರಾನ್ಸ್‌ಫಾರ್ಮರ್ ಅಳವಡಿಕೆಗೆ ಯಾರೂ ₹ 3 ಲಕ್ಷ ಅಥವಾ ₹ 4 ಲಕ್ಷ ಕಟ್ಟಬೇಕಿಲ್ಲ. ಯಾರಾದರೂ  ಕಟ್ಟಿದ್ದಲ್ಲಿ ಸರ್ಕಾರದ ಗಮನಕ್ಕೆ ತರಬೇಕು ಎಂದು ಅವರು ಹೇಳಿದರು.

ಪ್ರಾಣ ಕಳೆದುಕೊಂಡವರ ಕುಟುಂಬಕ್ಕೆ ಹಣ ಮಾತ್ರ ಕೊಟ್ಟರೆ ಸಾಲದು. ನೈತಿಕ ಬಲ ತುಂಬುವ ಕೆಲಸ ಆಗಬೇಕು. ಕೊಪ್ಪ ತಾಲ್ಲೂಕಿನ ಮೇಗೂರು ಹೊಸತೋಟ ಬಳಿ ಆಟೊ ಮೇಲೆ ಮರ ಬಿದ್ದು ಚಾಲಕ ರತ್ನಾಕರ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅವರ ಕುಟುಂಬಕ್ಕೂ ₹ 5 ಲಕ್ಷ ಪರಿಹಾರ ನೀಡಲಾಗುವುದು ಎಂದು ಸಚಿವ ಅವರು ತಿಳಿಸಿದರು.

ಶಾಸಕ ಟಿ.ಡಿ.ರಾಜೇಗೌಡ, ಜಿಲ್ಲಾಧಿಕಾರಿ ಮೀನಾ ನಾಗರಾಜ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಚಿಕ್ಕಮಗಳೂರು ಉಪವಿಭಾಗಾಧಿಕಾರಿ ಬಿ.ಕೆ.ಸುದರ್ಶನ್, ತಹಸೀಲ್ದಾರ್ ರೇಷ್ಮಾ ಶೆಟ್ಟಿ, ಖಾಂಡ್ಯ ಹೋಬಳಿ ರಾಜಸ್ವ ನಿರೀಕ್ಷಕ ಎಸ್.ಆರ್.ವಿನಯ್, ಗ್ರಾಮ ಆಡಳಿತ ಅಧಿಕಾರಿ ಕೆ.ಆರ್.ಸೌಧ, ಮುಖಂಡರಾದ ಪ್ರಶಾಂತ್ ಎಲ್.ಶೆಟ್ಟಿ, ಬಿ.ಸಿ ಮಂಜುನಾಥ್, ಕಾಫಿ ಗಿರೀಶ್, ಮಹಮ್ಮದ್ ಹನೀಫ್, ಆಶಾ ನಾರಾಯಣಗೌಡ, ಬಿ.ಕೆ ಮಧುಸೂದನ್, ಕೆ.ಎಸ್ ಗಣೇಶ್, ಚಂದ್ರಶೇಖರ್ ರೈ ಪಾಲ್ಗೊಂಡಿದ್ದರು.

Apply online and get e-asset record within fifteen days

 

Share

Leave a comment

Leave a Reply

Your email address will not be published. Required fields are marked *

Don't Miss

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ನೀಡಿದ್ದು, ೮೧ ಸಾವಿರ ರೂ.ಗಳ ದಂಡ...

ಹುಬ್ಬಳ್ಳಿ-ಚಿಕ್ಕಮಗಳೂರು ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆ ವಿಸ್ತರಣೆ

ಚಿಕ್ಕಮಗಳೂರು: ನೈಋತ್ಯ ರೈಲ್ವೆಯು ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸುವ ಉದ್ದೇಶದಿಂದ ಹುಬ್ಬಳ್ಳಿ ಮತ್ತು ಚಿಕ್ಕಮಗಳೂರು ನಡುವೆ ಚಲಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಯನ್ನು ವಿಸ್ತರಿಸಲು ನಿರ್ಧರಿಸಿದೆ. ಈ ಹಿಂದೆ ಜೂನ್ 21,...

Related Articles

ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ

ಚಿಕ್ಕಮಗಳೂರು: RVR ಹೆಲ್ತ್ ಕೇರ್ ವತಿಯಿಂದ, ಶ್ರೀ ವಿಜಯ್ ಎಂ.ಎನ್. ಶೆಟ್ಟಿ ಹಾಗೂ ಡಾ. (ಪ್ರೊ). ರಾಘವೇಂದ್ರ...

ಧುಮ್ಮಿಕ್ಕಿ ಹರಿಯುತ್ತಿರುವ ಹೆಬ್ಬೆ ಫಾಲ್ಸ್‌

ಚಿಕ್ಕಮಗಳೂರು: ಕಾಫಿನಾಡಿನ ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿ ಮಳೆ (Rain) ಅಬ್ಬರ ಜೋರಾಗಿದ್ದು, ತರೀಕೆರೆ (Tarikere) ತಾಲೂಕಿನಲ್ಲಿರುವ ಹೆಬ್ಬೆ...

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....