Home Latest News ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ
Latest NewschikamagalurHomenamma chikmagalur

ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ

Share
Share

ತರೀಕೆರೆ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರೀಕೆರೆ, ಅಜ್ಜಂಪುರ ತಾಲ್ಲೂಕಿನ ಪರವಾನಗಿ ಭೂಮಾಪಕರ ಸಂಘದ ಪದಾಧಿಕಾರಿಗಳು ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜುನಾಥ್‌ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಭೂಮಾಪಕರಿಗೂ, ಪರವಾನಗಿ ಭೂಮಾಪಕರಿಗೂ ವೇತನದಲ್ಲಿ ಬಹಳ ತಾರತಮ್ಯವಿದೆ. ದರ್ಖಾಸ್ತು, ಕೆರೆ, ದೇವಸ್ಥಾನ, ಕೋರ್ಟ್ ಪ್ರಕರಣ ಇತ್ಯಾದಿ ಅಳತೆ ಕೆಲಸಗಳನ್ನು ಪರವಾನಗಿ ಭೂಮಾಪಕರು ನಿರ್ವಹಿಸುತ್ತಿದ್ದಾರೆ. ಆಕಾರ್‌ಬಂದು ಗಣಕೀಕರಣ, ನಕ್ಷಾ ಯೋಜನೆ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಾಪನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಕನಿಷ್ಠ ಸವಲತ್ತುಗಳಿಂದಲೂ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಳತೆ ಕೆಲಸಕ್ಕೆ, ನೋಟಿಸ್ ಮಾಡುವುದಕ್ಕೆ ಅಗತ್ಯವಿರುವ ಬಾಂದು ಜವಾನರನ್ನು ನೀಡಿರುವುದಿಲ್ಲ. ಆದರೆ ಸಂಬಳ ನಿಗದಿ ಮಾಡಿರುವುದಿಲ್ಲ. ಆರೋಗ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ನೀಡಬೇಕು. ತಾಂತ್ರಿಕ ದೋಷಗಳಿಂದ ಆಗುವ ಸಮಸ್ಯೆಗಳಿಗೆ ಮೇಲಧಿಕಾರಿಗಳಿಂದ ನೋಟಿಸ್ ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಸರ್ಕಾರಿ ಭೂಮಾಪಕರಿಗೆ ನೀಡುವ ವೇತನ ಮತ್ತಿತರೆ ಸೌಲಭ್ಯಗಳನ್ನು ನಮಗೂ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೂದಾಖಲೆಗಳ ಕಚೇರಿ ಅಧೀಕ್ಷಕ ಮಹೇಶ್, ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸ್, ದರ್ಶನ್ ಜೊತೆಗಿದ್ದರು.

Demand for health insurance-provident fund facility

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...