Home Latest News ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ
Latest NewschikamagalurHomenamma chikmagalur

ಆರೋಗ್ಯ ವಿಮೆ- ಭವಿಷ್ಯ ನಿಧಿ ಸೌಲಭ್ಯ ನೀಡುವಂತೆ ಒತ್ತಾಯ

Share
Share

ತರೀಕೆರೆ: ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತರೀಕೆರೆ, ಅಜ್ಜಂಪುರ ತಾಲ್ಲೂಕಿನ ಪರವಾನಗಿ ಭೂಮಾಪಕರ ಸಂಘದ ಪದಾಧಿಕಾರಿಗಳು ಭೂದಾಖಲೆಗಳ ಸಹಾಯಕ ನಿರ್ದೇಶಕ ಮಂಜುನಾಥ್‌ ಸಿಂಗ್ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರಿ ಭೂಮಾಪಕರಿಗೂ, ಪರವಾನಗಿ ಭೂಮಾಪಕರಿಗೂ ವೇತನದಲ್ಲಿ ಬಹಳ ತಾರತಮ್ಯವಿದೆ. ದರ್ಖಾಸ್ತು, ಕೆರೆ, ದೇವಸ್ಥಾನ, ಕೋರ್ಟ್ ಪ್ರಕರಣ ಇತ್ಯಾದಿ ಅಳತೆ ಕೆಲಸಗಳನ್ನು ಪರವಾನಗಿ ಭೂಮಾಪಕರು ನಿರ್ವಹಿಸುತ್ತಿದ್ದಾರೆ. ಆಕಾರ್‌ಬಂದು ಗಣಕೀಕರಣ, ನಕ್ಷಾ ಯೋಜನೆ ಸೇರಿದಂತೆ ವಿವಿಧ ರೀತಿಯಲ್ಲಿ ಭೂಮಾಪನ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುತ್ತಿಲ್ಲ. ಕನಿಷ್ಠ ಸವಲತ್ತುಗಳಿಂದಲೂ ವಂಚಿತರಾಗಿದ್ದೇವೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಅಳತೆ ಕೆಲಸಕ್ಕೆ, ನೋಟಿಸ್ ಮಾಡುವುದಕ್ಕೆ ಅಗತ್ಯವಿರುವ ಬಾಂದು ಜವಾನರನ್ನು ನೀಡಿರುವುದಿಲ್ಲ. ಆದರೆ ಸಂಬಳ ನಿಗದಿ ಮಾಡಿರುವುದಿಲ್ಲ. ಆರೋಗ್ಯ ವಿಮೆ, ಭವಿಷ್ಯ ನಿಧಿ ಸೌಲಭ್ಯ ನೀಡಬೇಕು. ತಾಂತ್ರಿಕ ದೋಷಗಳಿಂದ ಆಗುವ ಸಮಸ್ಯೆಗಳಿಗೆ ಮೇಲಧಿಕಾರಿಗಳಿಂದ ನೋಟಿಸ್ ಪಡೆದುಕೊಳ್ಳುವ ಪರಿಸ್ಥಿತಿ ಎದುರಾಗುತ್ತಿದೆ. ಸರ್ಕಾರಿ ಭೂಮಾಪಕರಿಗೆ ನೀಡುವ ವೇತನ ಮತ್ತಿತರೆ ಸೌಲಭ್ಯಗಳನ್ನು ನಮಗೂ ಒದಗಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

ಭೂದಾಖಲೆಗಳ ಕಚೇರಿ ಅಧೀಕ್ಷಕ ಮಹೇಶ್, ಪರವಾನಗಿ ಭೂಮಾಪಕರ ಸಂಘದ ಅಧ್ಯಕ್ಷ ಮಂಜುನಾಥ್, ಶ್ರೀನಿವಾಸ್, ದರ್ಶನ್ ಜೊತೆಗಿದ್ದರು.

Demand for health insurance-provident fund facility

Share

Leave a comment

Leave a Reply

Your email address will not be published. Required fields are marked *

Don't Miss

‘ರಾಷ್ಟ್ರದ ಸುರಕ್ಷತೆಗಾಗಿ ಎಲ್ಲರೂ ಒಂದಾಗಬೇಕು’

ಚಿಕ್ಕಮಗಳೂರು: ರಾಷ್ಟ್ರದ ಸುರಕ್ಷತೆ ಹಾಗೂ ದೇಶದ ಹಿತಾಸಕ್ತಿಗಾಗಿ ವೈಯಕ್ತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಎಲ್ಲರೂ ಒಂದಾಗಬೇಕು ಎಂದು ಖ್ಯಾತ ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಕರೆ ನೀಡಿದರು. ನಗರದಲ್ಲಿ ಸೋಮವಾರ ಟಿಪ್ಪು...

ಆರೋಪಿಯಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ ಚಿನ್ನಾಭರಣ ವಶ

ಎನ್.ಆ‌ರ್. ಪುರ: ಮನೆಯ ಹಂಚು ತೆಗೆದು ಒಳನುಗ್ಗಿ, ಮಲಗಿದ್ದ ಮಹಿಳೆಯ ಕೊರಳಿನಿಂದ ಮಾಂಗಲ್ಯ ಸರ ಎಗರಿಸಿದ್ದ ಆರೋಪಿಯನ್ನು ಎನ್.ಆ‌ರ್.ಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತನಿಂದ ₹11.30 ಲಕ್ಷ ಮೌಲ್ಯದ 71 ಗ್ರಾಂ...

Related Articles

ಜನರ ಗಮನ ಸೆಳೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ

ಚಿಕ್ಕಮಗಳೂರು: ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ನಗರದ ಕುವೆಂಪು ಕಲಾಮಂದಿರದಲ್ಲಿ ನಡೆದ ಪ್ರಾಜೆಕ್ಟ್ ಪಂಚತಂತ್ರ ನಾಟಕ...

ತುಂಗಾನದಿಯಲ್ಲಿ ಕಾಲು ಜಾರಿ ಬಿದ್ದು ಪ್ರಾಣ ಯವಕನ ಸಾವು

ಶೃಂಗೇರಿ : ನದಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರಹಿಡಿಯಲು ಹೋದ ಯುವಕನೊಬ್ಬ ಕಾಲು ಜಾರಿ ನದಿಗೆ ಬಿದ್ದು...

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ...