Home namma chikmagalur ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?
namma chikmagalurchikamagalurHomeLatest NewsPolitical News

ಬಿ.ಎಲ್.ಶಂಕರ್ ರಾಜಕೀಯ ಹಿನ್ನಡೆ ಏಕೆ ?

Share
ಬಿ.ಎಲ್. ಶಂಕರ್
ಬಿ.ಎಲ್. ಶಂಕರ್
Share

ಚಿಕ್ಕಮಗಳೂರು: ಬಿ.ಎಲ್.ಶಂಕರ್ ರಾಜಕೀಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿ ದೊಡ್ಡ ಶಕ್ತಿಯಾಗಿದ್ದವರು ಹಿನ್ನಡೆ ಅನುಭವಿಸುತ್ತಿರುವುದು ಏಕೆ ?

ಕಿರಿಯ ವಯಸ್ಸಿನಲ್ಲಿ ಹಿರಿಯ ಜವಾಬ್ದಾರಿ ನಿರ್ವಹಿಸಿರುವ ಶಂಕರ್ ಕಳೆದ ಇಪ್ಪತ್ತೈದು ವರ್ಷಗಳಿಂದ ಯಾವ ಅಧಿಕಾರವಿಲ್ಲದೆ ಒದ್ದಾಡುತ್ತಿದ್ದಾರೆ. ಇಪ್ಪತ್ತೈದರ ಹರೆಯದಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮತ್ತು ಕ್ರೀಡಾ ಮಂತ್ರಿಯಾಗಿದ್ದವರು.ಬೆಳಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಸಂಜೆ ದೊಡ್ಡ ಕೈಗಾರಿಕಾ ಮಂತ್ರಿ ಯಾದ ದಾಖಲೆ ಇದೆ.

ಸಭಾಪತಿ ಯಾಗಿ ಸೈ ಅನ್ನಿಸಿಕೊಂಡವರು ಲೋಕಸಭಾ ಸದಸ್ಯರಾಗಿ ಜನತಾದಳದ ರಾಜ್ಯ ಅಧ್ಯಕ್ಷರಾಗಿ ಪಕ್ಷ ಕಟ್ಟಿದವರು. ಒಂದು ಹಂತದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಎಲ್ಲಾ ಅರ್ಹತೆ ಇದ್ದವರು ಕಳೆದ ಇಪ್ಪತ್ತೈದು ವರ್ಷಗಳಿಂದ ಏನು ಆಗದು ಎಂಬಂತೆ ಈ ಸಾರಿ ವಿಧಾನ ಪರಿಷತ್ ಗೆ ಗ್ಯಾರಂಟಿ ಎನ್ನುತ್ತ ಇರುವಾಗಲೇ ಪಟ್ಟಿಯಲ್ಲಿ ಇದ್ದ ಹೆಸರು ಕಾಣೆಯಾಗುತ್ತಿರುವುದರ ಗುಟ್ಟೇನಲ್ಲ.

ಜನತಾದಳ ತೊರೆದು ಕಾಂಗ್ರೆಸ್ ಸೇರಿದ ಮೇಲೆ ಮೂಲೆಗುಂಪಾಗಿರುವುದು ಸ್ಪರ್ಧೆ ಮಾಡಿದ ಚುನಾವಣೆಯಲ್ಲಿ ಸೋತ ದಾಖಲೆ ಸೇರಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ರಾಜಕಾರಣಕ್ಕೆ ಸೀಮಿತವಾದ ಶಂಕರ್ ತನಗೆ ಬೇಕಾದ ಗುಂಪು ಕಟ್ಟಿಕೊಂಡು ನೆಲಕಚ್ಚಿದ್ದಾರೆ ಎಂದು ಕಾಂಗ್ರೆಸ್ ನ ಮುಖಂಡರು ಹೇಳುವುದಲ್ಲದೆ ಶಂಕರ್ ನಮಗೆ ಗೂಟ ಒಡೆದರೆ ಶಂಕರ್ ಗೂ ಗೂಟ ಒಡೆಯುವವರು ಇರುತ್ತಾರೆ ಆದ್ದರಿಂದ ಶಂಕರ್ ರಾಜಕೀಯ ನಿವೃತ್ತಿ ಪಡೆಯಲಿ ಎನ್ನುತ್ತಾರೆ.ಈ ಬಾರಿ ಖಚಿತವಾಗಿ ವಿಧಾನ ಪರಿಷತ್ ಗೆ ಹೋಗುತ್ತಾರೆ ಎನ್ನುವಾಗ ಅವರ ಬದಲಾಗಿ ಆರತಿಕೃಷ್ಣರ ಹೆಸರು ಮೂಂಚುಣಿಗೆ ಬಂದಿದ್ದು ಮಾತ್ರ ಶಂಕರ್ ತೀವ್ರ ಹಿನ್ನಡೆ ಎನ್ನಲಾಗಿದೆ.

ಶಂಕರ್ ಬೆಂಗಳೂರು ರಾಜಕಾರಣದ ಕೇಂದ್ರವಾಗಿಸಿಕೊಂಡು ತಳಮಟ್ಟದ ಹಿಡಿತ ಕಳೆದುಕೊಂಡಿರುವುದರ ಜೊತೆಗೆ ಹಿಂಬಾಲಕರು ಕಿವಿ ಕಚ್ಚಿ ರಾಜಕೀಯ ಹಿನ್ನಡೆಗೆ ಕಾರಣ ಎನ್ನುವವರು ಇದ್ದಾರೆ.

ಸಾಂಸ್ಕೃತಿಕವಾಗಿ ಉತ್ತಮ ನಡವಳಿಕೆ ಮಾತು,ಓದುವ ಹವ್ಯಾಸ ಸಭೆ,ಸಮಾರಂಭ ಸಂಘಟಿಸುವುದು,ಪ್ರಣಾಳಿಕೆ ಬೇಕಾದ ವಿಷಯ ತಿಳಿದಿರುವ ಶಂಕರ್ ಒಳ್ಳೆಯ ಭಾಷಣಕಾರ ಹೀಗಾಗಿ ಕಳೆದ ಇಪ್ಪತ್ತೈದು ವರ್ಷಗಳಿಂದ ಚಿತ್ರ ಕಲಾ ಪರಿಷತ್ ನ ಅಧ್ಯಕ್ಷರಾಗಿದ್ದು ಇತ್ತೀಚಿಗೆ ಮತ್ತೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರು ಹೌದು ಒಟ್ಟಾರೆ ಹೇಳುವುದಾದರೆ ಶಂಕರ್ ಗೆ ರಾಜಕೀಯ ಬೇಕೋ ಬೇಡವೋ ಅವರೇ ಉತ್ತರಿಸ ಬೇಕು.

Why is B.L. Shankar politically backward?

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...