Home Latest News ಆನ್‌ಲೈನ್ ಹರಾಜು ಪ್ರಕ್ರಿಯೆ ವಿರುದ್ಧ ಬೆಳೆಗಾರರ ಸಂಘಟನೆಗಳ ಪ್ರತಿಭಟನೆ
Latest NewschikamagalurHomenamma chikmagalur

ಆನ್‌ಲೈನ್ ಹರಾಜು ಪ್ರಕ್ರಿಯೆ ವಿರುದ್ಧ ಬೆಳೆಗಾರರ ಸಂಘಟನೆಗಳ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕಾಫಿ ಕೃಷಿಕರು ತಮ್ಮ ತೋಟ ಜಮೀನಿನ ಅಭಿವೃದ್ಧಿಗೆಂದು ರಾಷ್ಟ್ರೀಕೃತ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದು, ಹವಾಮಾನ ವೈಪರೀತ್ಯ, ಬೆಲೆಯ ಏರಿಳಿತ, ಕಾಫಿ ತೋಟಗಳ ನಿರ್ವಹಣ ವೆಚ್ಚ ಹೆಚ್ಚಳ ಮುಂತಾದ ಕಾರಣಗಳಿಂದ ಸಕಾಲದಲ್ಲಿ ಸಾಲವನ್ನು ರೈತರು ಮರುಪಾವತಿ ಮಾಡಲು ಸಾಧ್ಯವಾಗಿಲ್ಲ ಎಂದು ಮೂಡಿಗೆರೆ ತಾಲ್ಲೂಕು ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ‌ ಬಿ.ಕೆ. ಲಕ್ಷ್ಮೀಣ್ ಕುಮಾರ್  ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್ಥಿಕ ನಷ್ಟದಿಂದಾಗಿ ರೈತರು ಸಾಲ ಮರುಪಾವತಿ ಮಾಡಲು ವಿಳಂಭವಾಗುತ್ತಿರುವುದರಿಂದ ಇದನ್ನು ನೆಪವಾಗಿಟ್ಟುಕೊಂಡು ಬ್ಯಾಂಕ್‌ಗಳು ರೈತರ ಜಮೀನುಗಳನ್ನು ಹರಾಜು ಮಾಡುತ್ತಿವೆ. ಕಾಫಿ ಕೃಷಿ ವಾಣಿಜ್ಯ ಬೆಳೆಯಾಗಿದ್ದು, ಸರ್ಫೇಸಿ ಕಾಯ್ದೆ ವ್ಯಾಪ್ತಿಗೆ ಬರುತ್ತದೆ ಎಂದು ಬ್ಯಾಂಕಿನವರು ಸುಸ್ತಿಯಾಗಿರುವ ಬೆಳೆಗಾರರ ಜಮೀನನ್ನು ಹರಾಜು ಮಾಡುತ್ತಿದ್ದಾರೆಂದು ಆರೋಪಿಸಿದರು.

ಈಗಾಗಲೇ ರಾಜ್ಯದ ಕಾಫಿ ಬೆಳೆಯುವ ಪ್ರದೇಶಗಳ ಸಾವಿರಾರು ರೈತರಿಗೆ ನೋಟೀಸ್ ನೀಡಿದ್ದು, ಈ ಸಂಬಂಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಾಗ ವಾಣಿಜ್ಯ ಸಚಿವರು ತೋಟಗಾರಿಕಾ ಬೆಳೆಗಳಿಗೆ ಸರ್ಫೇಸಿ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ ಬ್ಯಾಂಕ್‌ಗಳು ಸಚಿವರ ಹೇಳಿಕೆಯನ್ನು ಉಲ್ಲಂಘಿಸಿ ಆನ್‌ಲೈನ್ ಮೂಲಕ ಹರಾಜು ಮಾಡುತ್ತಿವೆ ಎಂದು ದೂರಿದರು.

ಬ್ಯಾಂಕ್ ಮ್ಯಾನೇಜರ್‌ಗಳು ಮತ್ತು ಕೆಲವು ಮಧ್ಯವರ್ತಿಗಳು ಲಾಭದಾಸೆಗಾಗಿ ಜಮೀನು ಹರಾಜು ಹಾಕಲು ಲಾಭಿ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಭೂಮಾಫಿಯಗಳು ಕೈಜೋಡಿಸಿರುವುದನ್ನು ಖಂಡಿಸಿದರು.

ಆನ್‌ಲೈನ್ ಹರಾಜು ಪ್ರಕ್ರಿಯೆಯನ್ನು ಮುಂದುವರೆಸಿದಲ್ಲಿ ಎಲ್ಲಾ ರೈತಪರ ಕಾರ್ಮಿಕ ಸಂಘಟನೆಗಳು ಬೆಳೆಗಾರರ ಸಂಘಟನೆಗಳ ನೇತೃತ್ವದಲ್ಲಿ ತೀವ್ರವಾದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕಾಫಿ ಸೇರಿದಂತೆ ಎಲ್ಲಾ ತೋಟಗಾರಿಕೆಗಳ ಮೇಲಿನ ಸಾಲವನ್ನು ಸರ್ಫೇಸಿ ಕಾಯ್ದೆಯಿಂದ ಹೊರಗಿಟ್ಟು ಕೇಂದ್ರಸರ್ಕಾರ ಕಾಯ್ದೆಯನ್ನು ಜಾರಿಗೆ ತರಬೇಕು, ಕಾಫಿ ಬೆಳೆಯುವ ರೈತರ ಸುಸ್ತಿ ಸಾಲಕ್ಕೆ ಈ ಹಿಂದೆ ನೀಡಿದ್ದ ವಿದರ್ಭ ಪ್ಯಾಕೇಜ್ ಮಾದರಿಯಲ್ಲಿ ಘೋಷಣೆ ಮಾಡಿ ರೈತರು, ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಮಾತನಾಡಿ ಸರ್ಫೇಸಿ ಕಾಯಿದೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಕಾಫಿ ಬೆಳೆಗಾರರು-ರೈತರ ಭೂಮಿಯನ್ನು ಆನ್‌ಲೈನ್ ಮೂಲಕ ಹರಾಜು ಹಾಕುತ್ತಿರುವುದನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿದರು.

ಈಗಾಗಲೇ ಮೂಡಿಗೆರೆ ತಾಲ್ಲೂಕಿನಲ್ಲಿ ಹರಾಜು ಹಾಕಿರುವ ಭೂಮಿಯನ್ನು ಸಂಬಂಧಿಸಿದವರಿಗೆ ವಾಪಾಸ್ ನೀಡಬೇಕೆಂದು ಒತ್ತಾಯಿಸಿದರು.

ಕಾಫಿ ಕೃಷಿ ಮೇಲಿನ ಸಾಲವನ್ನು ಸರ್ಫೇಸಿ ಕಾಯಿದೆಯಿಂದ ಹೊರಗಿಡಬೇಕು, ಕೇಂದ್ರ ಸರ್ಕಾರ ಈ ಕಾಯಿದೆಯನ್ನು ಜಾರಿಮಾಡಿರುವುದರಿಂದ ಇದರ ನೈತಿಕ ಹೊಣೆಯನ್ನು ಕೇಂದ್ರವೇ ಹೊರಬೇಕು, ಸಂಸದರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ಮುಖಂಡ ಹೆಚ್.ಎಂ ರೇಣುಕಾರಾಧ್ಯ, ಜೆಡಿಎಸ್‌ನ ಮಂಜಪ್ಪ, ರೈತ ಸಂಘದ ಗುರುಶಾಂತಪ್ಪ, ರೈತ ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಜಿ.ಯು. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ ಹೆಚ್.ಇ ಸುರೇಂದ್ರ, ಕಾರ್ಯದರ್ಶಿ ಎಂ.ಕೆ. ರವಿ, ಸಂತ್ರಸ್ಥ ವಿಜಯ್ ಕುಮಾರ್ ಡಿ.ಆರ್ ಉಪಸ್ಥಿತರಿದ್ದರು.

Growers’ organizations protest against online auction process

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...