Home Latest News ಆನ್‌ಲೈನ್ ಹರಾಜು ಪ್ರಕ್ರಿಯೆ ವಿರುದ್ಧ ಬೆಳೆಗಾರರ ಸಂಘಟನೆಗಳ ಪ್ರತಿಭಟನೆ
Latest NewschikamagalurHomenamma chikmagalur

ಆನ್‌ಲೈನ್ ಹರಾಜು ಪ್ರಕ್ರಿಯೆ ವಿರುದ್ಧ ಬೆಳೆಗಾರರ ಸಂಘಟನೆಗಳ ಪ್ರತಿಭಟನೆ

Share
Share

ಚಿಕ್ಕಮಗಳೂರು: ಕಾಫಿ ಕೃಷಿಕರು ತಮ್ಮ ತೋಟ ಜಮೀನಿನ ಅಭಿವೃದ್ಧಿಗೆಂದು ರಾಷ್ಟ್ರೀಕೃತ ಮತ್ತು ಕರ್ನಾಟಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಸಾಲ ಮಾಡಿದ್ದು, ಹವಾಮಾನ ವೈಪರೀತ್ಯ, ಬೆಲೆಯ ಏರಿಳಿತ, ಕಾಫಿ ತೋಟಗಳ ನಿರ್ವಹಣ ವೆಚ್ಚ ಹೆಚ್ಚಳ ಮುಂತಾದ ಕಾರಣಗಳಿಂದ ಸಕಾಲದಲ್ಲಿ ಸಾಲವನ್ನು ರೈತರು ಮರುಪಾವತಿ ಮಾಡಲು ಸಾಧ್ಯವಾಗಿಲ್ಲ ಎಂದು ಮೂಡಿಗೆರೆ ತಾಲ್ಲೂಕು ರೈತರ ಹಿತರಕ್ಷಣಾ ವೇದಿಕೆ ಅಧ್ಯಕ್ಷ ‌ ಬಿ.ಕೆ. ಲಕ್ಷ್ಮೀಣ್ ಕುಮಾರ್  ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಆರ್ಥಿಕ ನಷ್ಟದಿಂದಾಗಿ ರೈತರು ಸಾಲ ಮರುಪಾವತಿ ಮಾಡಲು ವಿಳಂಭವಾಗುತ್ತಿರುವುದರಿಂದ ಇದನ್ನು ನೆಪವಾಗಿಟ್ಟುಕೊಂಡು ಬ್ಯಾಂಕ್‌ಗಳು ರೈತರ ಜಮೀನುಗಳನ್ನು ಹರಾಜು ಮಾಡುತ್ತಿವೆ. ಕಾಫಿ ಕೃಷಿ ವಾಣಿಜ್ಯ ಬೆಳೆಯಾಗಿದ್ದು, ಸರ್ಫೇಸಿ ಕಾಯ್ದೆ ವ್ಯಾಪ್ತಿಗೆ ಬರುತ್ತದೆ ಎಂದು ಬ್ಯಾಂಕಿನವರು ಸುಸ್ತಿಯಾಗಿರುವ ಬೆಳೆಗಾರರ ಜಮೀನನ್ನು ಹರಾಜು ಮಾಡುತ್ತಿದ್ದಾರೆಂದು ಆರೋಪಿಸಿದರು.

ಈಗಾಗಲೇ ರಾಜ್ಯದ ಕಾಫಿ ಬೆಳೆಯುವ ಪ್ರದೇಶಗಳ ಸಾವಿರಾರು ರೈತರಿಗೆ ನೋಟೀಸ್ ನೀಡಿದ್ದು, ಈ ಸಂಬಂಧ ಸಂಸದ ಕೋಟಾ ಶ್ರೀನಿವಾಸ್ ಪೂಜಾರಿ ಅವರು ಲೋಕಸಭೆಯಲ್ಲಿ ವಿಷಯ ಪ್ರಸ್ತಾಪಿಸಿದಾಗ ವಾಣಿಜ್ಯ ಸಚಿವರು ತೋಟಗಾರಿಕಾ ಬೆಳೆಗಳಿಗೆ ಸರ್ಫೇಸಿ ಕಾಯ್ದೆ ಅನ್ವಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದರೂ ಬ್ಯಾಂಕ್‌ಗಳು ಸಚಿವರ ಹೇಳಿಕೆಯನ್ನು ಉಲ್ಲಂಘಿಸಿ ಆನ್‌ಲೈನ್ ಮೂಲಕ ಹರಾಜು ಮಾಡುತ್ತಿವೆ ಎಂದು ದೂರಿದರು.

ಬ್ಯಾಂಕ್ ಮ್ಯಾನೇಜರ್‌ಗಳು ಮತ್ತು ಕೆಲವು ಮಧ್ಯವರ್ತಿಗಳು ಲಾಭದಾಸೆಗಾಗಿ ಜಮೀನು ಹರಾಜು ಹಾಕಲು ಲಾಭಿ ನಡೆಸುತ್ತಿದ್ದಾರೆ. ಇದರಲ್ಲಿ ಕೆಲವು ಭೂಮಾಫಿಯಗಳು ಕೈಜೋಡಿಸಿರುವುದನ್ನು ಖಂಡಿಸಿದರು.

ಆನ್‌ಲೈನ್ ಹರಾಜು ಪ್ರಕ್ರಿಯೆಯನ್ನು ಮುಂದುವರೆಸಿದಲ್ಲಿ ಎಲ್ಲಾ ರೈತಪರ ಕಾರ್ಮಿಕ ಸಂಘಟನೆಗಳು ಬೆಳೆಗಾರರ ಸಂಘಟನೆಗಳ ನೇತೃತ್ವದಲ್ಲಿ ತೀವ್ರವಾದ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಸಿದರು.

ಕಾಫಿ ಸೇರಿದಂತೆ ಎಲ್ಲಾ ತೋಟಗಾರಿಕೆಗಳ ಮೇಲಿನ ಸಾಲವನ್ನು ಸರ್ಫೇಸಿ ಕಾಯ್ದೆಯಿಂದ ಹೊರಗಿಟ್ಟು ಕೇಂದ್ರಸರ್ಕಾರ ಕಾಯ್ದೆಯನ್ನು ಜಾರಿಗೆ ತರಬೇಕು, ಕಾಫಿ ಬೆಳೆಯುವ ರೈತರ ಸುಸ್ತಿ ಸಾಲಕ್ಕೆ ಈ ಹಿಂದೆ ನೀಡಿದ್ದ ವಿದರ್ಭ ಪ್ಯಾಕೇಜ್ ಮಾದರಿಯಲ್ಲಿ ಘೋಷಣೆ ಮಾಡಿ ರೈತರು, ಬೆಳೆಗಾರರ ನೆರವಿಗೆ ಧಾವಿಸಬೇಕೆಂದು ಮನವಿ ಮಾಡಿದರು.

ಕೆಪಿಸಿಸಿ ವಕ್ತಾರ ಹೆಚ್.ಹೆಚ್. ದೇವರಾಜ್ ಮಾತನಾಡಿ ಸರ್ಫೇಸಿ ಕಾಯಿದೆ ಹೆಸರಿನಲ್ಲಿ ಕೇಂದ್ರ ಸರ್ಕಾರ ಕಾಫಿ ಬೆಳೆಗಾರರು-ರೈತರ ಭೂಮಿಯನ್ನು ಆನ್‌ಲೈನ್ ಮೂಲಕ ಹರಾಜು ಹಾಕುತ್ತಿರುವುದನ್ನು ಕೂಡಲೇ ಕೈಬಿಡಬೇಕೆಂದು ಆಗ್ರಹಿಸಿದರು.

ಈಗಾಗಲೇ ಮೂಡಿಗೆರೆ ತಾಲ್ಲೂಕಿನಲ್ಲಿ ಹರಾಜು ಹಾಕಿರುವ ಭೂಮಿಯನ್ನು ಸಂಬಂಧಿಸಿದವರಿಗೆ ವಾಪಾಸ್ ನೀಡಬೇಕೆಂದು ಒತ್ತಾಯಿಸಿದರು.

ಕಾಫಿ ಕೃಷಿ ಮೇಲಿನ ಸಾಲವನ್ನು ಸರ್ಫೇಸಿ ಕಾಯಿದೆಯಿಂದ ಹೊರಗಿಡಬೇಕು, ಕೇಂದ್ರ ಸರ್ಕಾರ ಈ ಕಾಯಿದೆಯನ್ನು ಜಾರಿಮಾಡಿರುವುದರಿಂದ ಇದರ ನೈತಿಕ ಹೊಣೆಯನ್ನು ಕೇಂದ್ರವೇ ಹೊರಬೇಕು, ಸಂಸದರು ಈ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕೆಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ಮುಖಂಡ ಹೆಚ್.ಎಂ ರೇಣುಕಾರಾಧ್ಯ, ಜೆಡಿಎಸ್‌ನ ಮಂಜಪ್ಪ, ರೈತ ಸಂಘದ ಗುರುಶಾಂತಪ್ಪ, ರೈತ ಹಿತರಕ್ಷಣಾ ವೇದಿಕೆ ಉಪಾಧ್ಯಕ್ಷ ಜಿ.ಯು. ಚಂದ್ರೇಗೌಡ, ಪ್ರಧಾನ ಕಾರ್ಯದರ್ಶಿ ಹೆಚ್.ಇ ಸುರೇಂದ್ರ, ಕಾರ್ಯದರ್ಶಿ ಎಂ.ಕೆ. ರವಿ, ಸಂತ್ರಸ್ಥ ವಿಜಯ್ ಕುಮಾರ್ ಡಿ.ಆರ್ ಉಪಸ್ಥಿತರಿದ್ದರು.

Growers’ organizations protest against online auction process

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ವಿದ್ಯಾರ್ಥಿಗಳು ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳ ಬೇಕೆಂದು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ...

ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ರೈತ ಹುತಾತ್ಮ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಪಕ್ಷ ಸಂಘಟನೆಗಳಿಂದ ನಗರದಲ್ಲಿ ಇಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಆಜಾದ್ ಪಾರ್ಕಿನಲ್ಲಿ ಹಸಿರು ಬಾವುಟದೊಂದಿಗೆ ಸಮಾವೇಶಗೊಂಡ ನೂರಾರು ರೈತರು, ವಿವಿಧ...

Related Articles

ಮೂಲಭೂತ ಸೌಲಭ್ಯ ಕಲ್ಪಿಸಲು ಜ್ಯೋತಿನಗರ ಬಡಾವಣೆ ನಿವಾಸಿಗಳ ಮನವಿ

ಚಿಕ್ಕಮಗಳೂರು: ನಗರದ ಜ್ಯೋತಿ ನಗರ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು...

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ

ಆಲ್ದೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ರಾಜ್ಯ...

ಯುವಜನರಿಗೆ ಅಬ್ದುಲ್ ಕಲಾಂ ಸ್ಪೂರ್ತಿದಾಯಕ ವ್ಯಕ್ತಿ

ಚಿಕ್ಕಮಗಳೂರು:  ಬಾಹ್ಯಕಾಶದ ವಿಜ್ಞಾನಿ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಅವರ ೧೦ನೇ ವರ್ಷದ ಪುಣ್ಮಸ್ಮರಣೆ ಅಂಗವಾಗಿ ನಗರದ...

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು....