Home Latest News ಪೊಲೀಸ್ ಲೇಔಟ್‌ನಲ್ಲಿ 50 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳುವು
Latest NewschikamagalurCrime NewsHomenamma chikmagalur

ಪೊಲೀಸ್ ಲೇಔಟ್‌ನಲ್ಲಿ 50 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳುವು

Share
Share

ಚಿಕ್ಕಮಗಳೂರು: ನಗರದ ಪೊಲೀಸ್ ಲೇಔಟ್‌ನ ಮನೆಯೊಂದರಲ್ಲಿ ಕಳ್ಳತನ ನಡೆದಿದ್ದು, ಸುಮಾರು 50 ಲಕ್ಷ ರುಪಾಯಿ ಮೌಲ್ಯದ ಚಿನ್ನಾಭರಣ ಕಳುವು ಆಗಿರುವುದು ಬೆಳಕಿಗೆ ಬಂದಿದೆ.

ಪೊಲೀಸ್ ಲೇಔಟ್ ನಿವಾಸಿ ಪುಪ್ಪೇಗೌಡ ಅವರು ಕುಟುಂಬದ ಸಮೇತರಾಗಿ ಬೇರೆ ಊರಿಗೆ ಹೋಗಿದ್ದ ಸಂದರ್ಭದಲ್ಲಿ ಅವರ ಮನೆಯಲ್ಲಿ ಕಳುವುವಾಗಿದ್ದು, ಸುಮಾರು 490 ಗ್ರಾಂ ಚಿನ್ನಾಭರಣ ಕಳುವು ಮಾಡಲಾಗಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಾಲಿ ಸೇವೆಯಲ್ಲಿರುವ ಹಾಗೂ ನಿವೃತ್ತ ಪೊಲೀಸರು ಈ ಬಡಾವಣೆಯಲ್ಲಿ ವಾಸವಾಗಿದ್ದಾರೆ. ಅವರ ಬಡಾವಣೆಗೆ ಕಳ್ಳರು ಬಂದು ಕಳುವು ಮಾಡಿರುವುದು ಇಲಾಖೆ ಸಾರ್ವಜನಿಕರ ನಗೆಪಾಟಲಿಗೆ ಗುರಿಯಾಗಿದೆ.

ಸಾರ್ವಜನಿಕರೇ ಹುಷಾರ್ ನಗರದ ತುಳಸಿ ಲೇಔಟ್, ಪೊಲೀಸ್ ಲೇಔಟ್, ಡಾ. ಕುಮಾರಸ್ವಾಮಿ ಲೇಔಟ್ ಪ್ರದೇಶದಲ್ಲಿ ಆಗಾಗ ಮನೆಗಳ್ಳತನ ಪ್ರಕರಣಗಳು ನಡೆಯುತ್ತಲೇ ಇವೆ. ಅವುಗಳು ಈಗಲೂ ಮುಂದುವರೆದಿವೆ ಎಂಬುದಕ್ಕೆ ಪೊಲೀಸ್ ಲೇಔಟ್‌ನಲ್ಲಿ ಜೂ. ೧೯ ರಂದು ರಾತ್ರಿ ನಡೆದಿರುವ ಘಟನೆಯೇ ಸಾಕ್ಷಿ ಎಂದು ಸ್ಥಳೀಯರು ಹೇಳುತ್ತಿದ್ದಾರೆ.

ಪುಪ್ಪೇಗೌಡರ ಮನೆಯಲ್ಲಿ ಕಳುವು ಆಗಿ ಎರಡೇ ದಿನಕ್ಕೆ ಅಂದರೆ ಜೂನ್ ೨೧ ರ ರಾತ್ರಿ ಆರು ಮಂದಿಯ ಗ್ಯಾಂಗ್ ರಾತ್ರಿ ವೇಳೆಯಲ್ಲಿ ಓಡಾಡುತ್ತಿರುವುದು ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ನಗರದ ಬೈಪಾಸ್ ರಸ್ತೆಯಲ್ಲಿರುವ ಎಐಟಿ ಲೇಡಿಸ್ ಹಾಸ್ಟೆಲ್ ಮುಂಭಾಗದ ರಸ್ತೆಯಲ್ಲಿ ೬ ಮಂದಿ ಕಳ್ಳರು ಮುಖಕ್ಕೆ ಬಟ್ಟೆ ಕಟ್ಟಿಕೊಂಡು ಕೈಯಲ್ಲಿ ಬಾಗಿಲು, ಗೇಟ್ ಮುರಿಯುವ ಕಬ್ಬಿಣದ ವಸ್ತುಗಳು ಹಾಗೂ ಬ್ಯಾಗ್ ಸಹಿತ ಓಡಾಡುತ್ತಿರುವುದು ಕಂಡು ಬಂದಿದೆ.

ಅಂದರೆ ಮನೆಗಳ್ಳತನದ ನಂತರವೂ ಕಳ್ಳರ ಗ್ಯಾಂಗ್ ಅದೇ ಬಡಾವಣೆಯ ಸಮೀಪದಲ್ಲಿ ಮತ್ತೆ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಈ ಬಡಾವಣೆಯಲ್ಲಿ ರಾತ್ರಿ ವೇಳೆಯಲ್ಲಿ ಪೊಲೀಸರು ಬೀಟ್‌ಗೆ ಬರುತ್ತಿಲ್ಲ. ಹಾಗಾಗಿ ಕಳ್ಳರಿಗೆ ಭಯ ಎಂಬುದು ಹೊರಟು ಹೋಗಿದೆ. ಮನೆಗಳಿಗೆ ಹಾಗೂ ಈ ಭಾಗದ ನಿವಾಸಿಗಳಿಗೆ ರಕ್ಷಣೆ ಇಲ್ಲದಂತಾಗಿದೆ ಎಂದು ಸ್ಥಳೀಯರು ಅಳಲು ತೋಡಿಕೊಂಡಿದ್ದಾರೆ.

Gold jewellery worth Rs 50 lakh stolen in Police Layout

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಪ್ರತಿಭಾ ಪುರಸ್ಕಾರ

ಚಿಕ್ಕಮಗಳೂರು: ವಿದ್ಯಾರ್ಥಿಗಳು ದೃಢ ಆತ್ಮವಿಶ್ವಾಸ, ಉತ್ತಮ ನಡವಳಿಕೆಯನ್ನು ಮೈಗೂಡಿಸಿಕೊಳ್ಳ ಬೇಕೆಂದು ಜಿಲ್ಲಾಪೊಲೀಸ್ ಮುಖ್ಯಾಧಿಕಾರಿ ಡಾ.ವಿಕ್ರಮ್ ಅಮಟೆ ತಿಳಿಸಿದರು. ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ...

ಕರ್ನಾಟಕ ರಾಜ್ಯ ರೈತ ಸಂಘದ ಆಶ್ರಯದಲ್ಲಿ ರೈತ ಹುತಾತ್ಮ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರೈತ ಸಂಘ ಸೇರಿದಂತೆ ವಿವಿಧ ಪಕ್ಷ ಸಂಘಟನೆಗಳಿಂದ ನಗರದಲ್ಲಿ ಇಂದು ರೈತ ಹುತಾತ್ಮ ದಿನಾಚರಣೆಯನ್ನು ಆಚರಿಸಲಾಯಿತು. ನಗರದ ಆಜಾದ್ ಪಾರ್ಕಿನಲ್ಲಿ ಹಸಿರು ಬಾವುಟದೊಂದಿಗೆ ಸಮಾವೇಶಗೊಂಡ ನೂರಾರು ರೈತರು, ವಿವಿಧ...

Related Articles

ಮೂಲಭೂತ ಸೌಲಭ್ಯ ಕಲ್ಪಿಸಲು ಜ್ಯೋತಿನಗರ ಬಡಾವಣೆ ನಿವಾಸಿಗಳ ಮನವಿ

ಚಿಕ್ಕಮಗಳೂರು: ನಗರದ ಜ್ಯೋತಿ ನಗರ ಬಡಾವಣೆಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುವುದು ಎಂದು...

ಧರ್ಮಸ್ಥಳದ ಅಸಹಜ ಸಾವು ಪ್ರಕರಣದ ಸಮಗ್ರ ತನಿಖೆಗೆ ಆಗ್ರಹಿಸಿ ಧರಣಿ

ಆಲ್ದೂರು: ‘ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಅಸಹಜ ಸಾವು ಪ್ರಕರಣದ ತನಿಖೆಯನ್ನು ಎಸ್‌ಐಟಿಗೆ ವಹಿಸಿರುವುದು ರಾಜ್ಯ...

ಯುವಜನರಿಗೆ ಅಬ್ದುಲ್ ಕಲಾಂ ಸ್ಪೂರ್ತಿದಾಯಕ ವ್ಯಕ್ತಿ

ಚಿಕ್ಕಮಗಳೂರು:  ಬಾಹ್ಯಕಾಶದ ವಿಜ್ಞಾನಿ ಡಾ|| ಎ.ಪಿ.ಜೆ.ಅಬ್ದುಲ್ ಕಲಾಂ ಅವರ ೧೦ನೇ ವರ್ಷದ ಪುಣ್ಮಸ್ಮರಣೆ ಅಂಗವಾಗಿ ನಗರದ...

ತುಂಬಿ ಹರಿಯುತ್ತಿರುವ ತುಂಗಾ, ಭದ್ರಾ – ಹೇಮಾವತಿ ನದಿಗಳು

ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡಿನ ನಾಲ್ಕು ತಾಲೂಕುಗಳು ಹೊರತುಪಡಿಸಿ ಇನ್ನುಳಿದ ಐದು ತಾಲೂಕುಗಳಲ್ಲಿ ಭಾನುವಾರ ಮಳೆಯ ಪ್ರಮಾಣ ಇಳಿಮುಖವಾಗಿತ್ತು....