Home ಬೈದುವಳ್ಳಿ ಗ್ರಾಮದಲ್ಲಿ ಕಾರ್ಮಿಕನ ಮೇಲೆ ಕಾಡಾನೆದಾಳಿ
HomechikamagalurLatest Newsnamma chikmagalur

ಬೈದುವಳ್ಳಿ ಗ್ರಾಮದಲ್ಲಿ ಕಾರ್ಮಿಕನ ಮೇಲೆ ಕಾಡಾನೆದಾಳಿ

Share
Share

ಚಿಕ್ಕಮಗಳೂರು: ಕಾಫಿ ತೋಟದ ಕೆಲಸದಿಂದ ಹಿಂತಿರುಗುತ್ತಿದ್ದಾಗ ಕಾರ್ಮಿಕನ ಮೇಲೆ ಕಾಡಾನೆದಾಳಿ ನಡೆಸಿರುವ ಘಟನೆ ನಡೆದಿದೆ. ಮೂಡಿಗೆರೆ ತಾಲ್ಲೂಕಿನ ಬೈದುವಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಕಾಡಾನೆ ದಾಳಿಯಿಂದ ಕಾರ್ಮಿಕ ದಿನೇಶ್ (೩೭ ವರ್ಷ) ಗಾಯಗೊಂಡಿದ್ದಾರೆ.

ಬೈದುವಳ್ಳಿ ಗ್ರಾಮದ ಮೂರ್ತೇಶ್ ರವರ ತೋಟಕ್ಕೆ ಕೆಲಸಕ್ಕೆ ಬಂದಿದ್ದ ವೇಳೆ ಈ ಘಟನೆ ನಡೆದಿದೆ. ಮೂಡಿಗೆರೆ ಸಮೀಪದ ಹೆಸಗಲ್ ಗ್ರಾಮದ ದಿನೇಶ್ ಹಾಗೂ ಇತರರು ಮೂರ್ತೇಶ್ ಅವರ ತೋಟದ ಕೆಲಸಕ್ಕೆ ಆಗಮಿಸಿದ್ದರು.

ತೋಟದ ಕೆಲಸ ಮುಗಿಸಿ ನಡೆದುಕೊಂಡು ಬರುತ್ತಿದ್ದಾಗ ಕಾಡಾನೆಯೊಂದು ಏಕಾಏಕಿ ದಾಳಿ ನಡೆಸಿದೆ. ಹಿಂಬದಿಯಲ್ಲಿ ನಡೆದುಕೊಂಡು ಬರುತ್ತಿದ್ದ ದಿನೇಶ್ ಅವರನ್ನು ಕಾಡಾನೆ ಸೊಂಡಿಲಿನಿಂದ ಎತ್ತಿ ಬಿಸಾಡಿದೆ. ನಂತರ ಕೆಲ ಹೊತ್ತು ಅಲ್ಲಿಯೇ ನಿಂತು ವಾಪಾಸ್ಸಾಗಿದೆ.

ಕಾಡಾನೆ ಎತ್ತಿ ಎಸೆದ ರಭಸಕ್ಕೆ ದಿನೇಶ್ ಅವರ ಬೆನ್ನು, ಕುತ್ತಿಗೆ ಮತ್ತು ತಲೆ ಭಾಗಕ್ಕೆ ತೀವ್ರ ಗಾಯಗಳಾಗಿವೆ. ಈ ಸಂದರ್ಭದಲ್ಲಿ ತೋಟದ ಮಾಲೀಕ ಮೂರ್ತೇಶ್ ಮತ್ತು ಇತರೆ ಕಾರ್ಮಿಕರು ಕೂದಲೆಳೆ ಅಂತರದಿಂದ ಪಾರಾಗಿದ್ದಾರೆ.

ಗಾಯಗೊಂಡ ದಿನೇಶ್ ಅವರನ್ನು ತಕ್ಷಣ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಕೊಂಡೊಯ್ದು ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ.

ನಂತರ ಹೆಚ್ಚಿನ ಚಿಕಿತ್ಸೆಗೆ ಚಿಕ್ಕಮಗಳೂರಿಗೆ ಕರೆದೊಯ್ಯಲಾಗಿದೆ. ದಿನೇಶ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

Wild elephant attacks laborer in Baiduvalli village

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...