Home Latest News ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ
Latest NewschikamagalurHomenamma chikmagalur

ಪೆಟ್ರೋಲ್ ಕಳ್ಳತನ ಆರೋಪಿಗಳು ಪರಾರಿ

Share
Share

ಮೂಡಿಗೆರೆ: ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣ ವ್ಯಾಪ್ತಿಯ ಹಿರೇಗೆಶಿ ಎಂಬ ಗ್ರಾಮದ ಬಳಿ ಪೆಟ್ರೋಲ್ ಕಳ್ಳತನ ಮಾಡಿರುವ ಲಾರಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದಾರೆ.

ಮೂಡಿಗೆರೆ ತಾಲೂಕಿನಲ್ಲಿ ಎಲ್ಲೂ ಪೈಪ್ ಕೊರೆದಿಲ್ಲ ಎಂದು ತಿಳಿದುಬಂದಿದೆ.ಆದರೆ ಲಾರಿಯಲ್ಲಿ 2 000 ಕ್ಕೂ ಹೆಚ್ಚಿನ ಪೆಟ್ರೋಲ್ ಇರುವ ಶಂಕೆ ಇದ್ದು ಲಾರಿಗೆ ಪ್ಲೇಟ್ ನಂಬರ್ ಕೂಡ ಇಲ್ಲದಿರುವುದು ಈ ಹಿಂದೆ ಸಕ್ರಿಯವಾಗಿದ್ದ ಗ್ಯಾಂಗ್ ಇರಬಹುದು ಎಂಬ ಅನುಮಾನವಿದೆ.

20 ವರ್ಷಗಳ ಹಿಂದೆ ಇದೇ ಸ್ಥಳದಲ್ಲಿ ಪೈಪ್ ಕೊರೆದು ಪೆಟ್ರೋಲ್ ಸಾಗಿಸುತ್ತಿದ್ದ ಬೇಲೂರಿನ ರಾಜಶೆಟ್ಟಿ ಎಂಬುವನ ಬಂಧನವಾಗಿತ್ತು. ಪೊಲೀಸ್ ಇಲಾಖೆಯ ಹಲವರು ಈ ಗ್ಯಾಂಗ್ ಜೊತೆಗೆ ಕೈ ಜೋಡಿಸಿದ್ದರಿಂದ ಇಲಾಖಾ ತನಿಖೆ ನಡೆದಿತ್ತು.

ಠಾಣಧಿಕಾರಿಯಾಗಿದ್ದ ಸುನೀಲ್ ಕುಮಾರ್ ಮತ್ತು ಮೂಡಿಗೆರೆ ವೃತ್ತ ನಿರೀಕ್ಷಕ ಸ್ವಾಮಿ ಎಂಬುವರ ಅಮಾನತ್ತು ಕೂಡ ಆಗಿತ್ತು ಇದರ ಜೊತೆಗೆ ಚಿಕ್ಕಮಗಳೂರು ವೃತ್ತ ನಿರೀಕ್ಷಕ ಸಿದ್ದಯ್ಯ ಎಂಬುವರ ವಿಚಾರಣೆ ಕೂಡ ನಡೆದಿತ್ತು.

ಲಾರಿ ಬಿಟ್ಟು ಪರಾರಿಯಾಗಿರುವುದನ್ನು ನೋಡಿದರೆ ಹಳೆ ಗ್ಯಾಂಗ್ ಮತ್ತೆ ಸಕ್ರಿಯವಾಗಿರಬಹುದು ಎಂಬ ಅನುಮಾನವಿದೆ ಎಂದು ಜನ ಹೇಳುತ್ತಾರೆ.

Petrol theft suspects flee

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ಯವಕ ಸಾವು

ಚಿಕ್ಕಮಗಳೂರು: ಪೊಲೀಸರ ದಾಳಿಗೆ ಹೆದರಿ ಓಡುವಾಗ ಜಾರಿ ಬಿದ್ದು ತಲೆ ಬಂಡೆಗೆ ಹೊಡೆದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ದುರಂತ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದೆ. ಎನ್.ಆರ್.ಪುರ ತಾಲೂಕಿನ ಗುಡ್ಡೆಕೊಪ್ಪ ಗ್ರಾಮದ...

ಮನ್ ಕಿ ಬಾತ್‌ನಲ್ಲಿ ಚಿಕ್ಕಮಗಳೂರು ರೈತರ ಕೃಷಿ ವೈವಿಧ್ಯತೆಗೆ ಪ್ರಧಾನಿ ಮೋದಿ ಮೆಚ್ಚುಗೆ

ಚಿಕ್ಕಮಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ತಮ್ಮ 137ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚಿಕ್ಕಮಗಳೂರಿನ ರೈತರ ಕೃಷಿ ವೈವಿಧ್ಯತೆ ಹಾಗೂ ನಾವೀನ್ಯತೆಯನ್ನು ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಚಿಕ್ಕಮಗಳೂರಿನ ಕಾಫಿ ಬೆಳೆಗಾರರು ಸಾಂಪ್ರದಾಯಿಕ ಕಾಫಿ...

Related Articles

ನೂತನ ಪಶ್ಚಿಮ ವಲಯ ಡಿಐಜಿ ಆರ್. ಚೇತನ್ ಭೇಟಿ

ಚಿಕ್ಕಮಗಳೂರು: ನೂತನ ಪಶ್ಚಿಮ ವಲಯದ ಪೊಲೀಸ್ ಉಪ ಮಹಾ ನಿರೀಕ್ಷಕರಾಗಿ (ಡಿಐಜಿ) ಅಧಿಕಾರ ವಹಿಸಿಕೊಂಡಿರುವ ಆರ್....

ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತ

ಚಿಕ್ಕಮಗಳೂರು: ಹಾಫ್ ಹೆಲ್ಮೆಟ್ ಹಾಕುವವರೇ ಎಚ್ಚರ.. ಎಚ್ಚರ.. ಟಿಪ್ಪರ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ...

ಕರ್ವಾಲೊ ಚಿತ್ರಕಲಾ ಸ್ಪರ್ಧೆಯಲ್ಲಿ ಹರ್ಷ ಕಾವೇರಿಪುರ ಪ್ರಥಮ

ಕೊಟ್ಟಿಗೆಹಾರ: ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಿಂದ ತೇಜಸ್ವಿ ಅವರ ೮೮ನೇ ಹುಟ್ಟುಹಬ್ಬದ ಪ್ರಯುಕ್ತ ಆಯೋಜಿಸಿದ್ದ ಕರ್ವಾಲೊ ಕೃತಿ...

₹1,281.80 ಕೋಟಿ ರೂ. ವೆಚ್ಚದ ನೀರಾವರಿ ಯೋಜನೆ ತ್ವರಿತವಾಗಿ ಪೂರ್ಣಗೊಳಿಸಿ

ಚಿಕ್ಕಮಗಳೂರು: ಜಿಲ್ಲೆಯ ಬಯಲುಸೀಮೆ ಭಾಗದ ರೈತರ ಬಹುದಿನಗಳ ನಿರೀಕ್ಷೆಯಾಗಿರುವ ₹1,281.80 ಕೋಟಿ ಅಂದಾಜು ವೆಚ್ಚದ ಮಹತ್ವಾಕಾಂಕ್ಷಿ...