Home Latest News ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ರಗಳೆ – ರಗಳೆ ಇಲ್ಲದ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು !
Latest NewschikamagalurHomenamma chikmagalur

ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರ ರಗಳೆ – ರಗಳೆ ಇಲ್ಲದ ಚಿಕ್ಕಮಗಳೂರು ಜಿಲ್ಲೆಯ ಶಾಸಕರುಗಳು !

Share
Share

ಚಿಕ್ಕಮಗಳೂರು: ಸರ್ಕಾರ ಅನುದಾನ ನೀಡುತ್ತಿಲ್ಲ ಮತ್ತು ಲಂಚದ ಹಾವಳಿಯ ಬಗ್ಗೆ ತಕರಾರು ತೆಗೆದು ಕಾಂಗ್ರೆಸ್ ಮರ್ಯಾದೆ ಹಾದಿ ಬೀದಿಯಲ್ಲಿ ಹರಾಜು ಹಾಕುತ್ತಿದ್ದಾರೆ.

ಬಿ.ಆರ್.ಪಾಟೀಲ್ , ರಾಜು ಕಾಗೆ, ಬೇಳೂರು ಗೋಪಾಲ ಕೃಷ್ಣ ಬಹಿರಂಗವಾಗಿ ಮಾಧ್ಯಮಗಳ ಮೂಲಕ ಸರ್ಕಾರದ ವಿರುದ್ಧ ಗುಡುಗುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಂಗ್ರೆಸ್ ನ ಐದು ಶಾಸಕರಿದ್ದು ಯಾವ ರಗಳೆ ಇಲ್ಲ ಎನ್ನುವಂತೆ ಇದ್ದಾರೆ. ಪತ್ರಿಕೆಗಳಲ್ಲಿ ದಿನವೂ ಕೋಟಿ, ಕೋಟಿ ಅನುದಾನ ಬರುತ್ತಿದೆ ಎನ್ನುವಂತೆ ಪ್ರಚಾರದಲ್ಲಿ ಇದ್ದಾರೆ.

ಟಿ.ಡಿ.ರಾಜೇಗೌಡ,ಶ್ರೀನಿವಾಸ್ ತಮ್ಮಯ್ಯ,ಆನಂದ್,ನಯನ ಮೋಟಮ್ಮ ಸಂತೃಪ್ತಿಯಿಂದ ಓಡಾಡುತ್ತಿದ್ದಾರೆ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದಾರೆ.ತರೀಕೆರೆ ಕ್ಷೇತ್ರಕ್ಕೆ ಹೆಚ್ಚು ಅನುದಾನ ಬಂದಿದೆ ಅದು ಬಿಟ್ಟರೆ ಕಡೂರು ಕ್ಷೇತ್ರದಲ್ಲೂ ಸಮಾಧಾನವಿದೆ.ಆದರೆ ಚಿಕ್ಕಮಗಳೂರು ಮತ್ತು ಮೂಡಿಗೆರೆ ಹಾಗೂ ಶೃಂಗೇರಿ ಕ್ಷೇತ್ರದಲ್ಲಿ ಅಷ್ಟಾಗಿ ಅನುದಾನ ಬಂದಿಲ್ಲ ಎನ್ನುವವರು ಇವರ ಗೆಲುವಿಗೆ ಹಗಲಿರುಳು ದುಡಿದವರು ಹಿಡಿ ಶಾಪ ಹಾಕುತ್ತಲೇ ಗುಸು,ಗುಸು,ಬೂಸು,ಬೂಸು ಎನ್ನುತ್ತಿರುವುದು ಏಕೆ ? ಹಳ್ಳಿಗಳಲ್ಲಿ ಅಭಿವೃದ್ಧಿ ಕೆಲಸ ಆಗುತ್ತಿಲ್ಲ ಎಂದು ದೂರುತ್ತಿರುವುದು ಏಕೆ ?

ಕಾಟಚಾರಕ್ಕೆ ಜಿಲ್ಲೆಗೆ ಬಂದು ಹೋಗುವ ಜಿಲ್ಲಾ ಉಸ್ತುವಾರಿ ಮಂತ್ರಿ ಜಾರ್ಜ್ ಬಗ್ಗೆ  ಜಿಲ್ಲೆಯ ಶಾಸಕರುಗಳು ಇನ್ನೂ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಮತ್ತು ಸರ್ಕಾರದ ವಿರುದ್ದ ಧ್ವನಿ ಎತ್ತಲು ಸಾಧ್ಯವೇ ಇಲ್ಲ.

ಜನರಿಗೆ ಏನಾದರೂ ಏನು ನಮ್ಮ ಶಾಸಕರುಗಳಿಗೆ ಅನುಕೂಲ ಆಗುತ್ತಿದೆ ಬರುವುದೇಲ್ಲಾ ಬರುತ್ತಿದೆ ಎಂದು ಕಾಂಗ್ರೆಸ್ ಮುಖಂಡರು ಕೆಡಮಂಡಲರಾಗಿ ಉಗಿಯುತ್ತಿದ್ದಾರೆ.ಯಾರು ಏನು ಹೇಳಿದರು ನಮಗೆ ಸಂಬಂಧ ಇಲ್ಲ ಎಂದು ಕೆಲವರು ಲಿಕ್ಕರ್ ಶಾಪ್ ತೆರೆಯಲು ಪೈಪೋಟಿ ನಡೆಸಿದರೆ ಕ್ವಾರಿ ಪ್ರಾರಂಭ ಮಾಡಲು ಲಿಕ್ಕರ್ ಶಾಪ್ ಗಳಿಂದ ಮತ್ತು ಕಛೇರಿಗಳಿಂದ ಮಾಮುಲಿ ಪಡೆದರೆ ರಿಯಲ್‌ ಎಸ್ಟೇಟ್‌ ಧಂದೆ ನಡೆಸುವವರು ಹಾಗೂ ಅಧಿಕಾರ ಎಂದರೆ ಶೋಕಿ ಎನ್ನುವವರು ಸಮಾಧಾನವಾಗಿದ್ದಾರೆ ಎಂದು ಜನ ಮಾತನಾಡುತ್ತಿದ್ದಾರೆ.

MLAs of Chikkamagaluru district

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...