Home namma chikmagalur ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ
namma chikmagalurchikamagalurHomeLatest News

ಅರಣ್ಯ ಇಲಾಖೆ ವಿರುದ್ಧ ಗೋಬ್ಯಾಕ್ ಚಳವಳಿ

Share
Share

ಚಿಕ್ಕಮಗಳೂರು: ಸೆಕ್ಷನ್ ೪(೧) ಮೀಸಲು ಅರಣ್ಯ ಘೋಷಣೆಯಾಗಿರುವ ಬ್ಲಾಕ್‌ಗಳಿಗೆ ಸೆಟಲ್‌ಮೆಂಟ್ ಮಾಡಲು ನಿಯೋಜಿಸಿರುವ ಅರಣ್ಯ ವ್ಯವಸ್ಥಾಪಕರು ರೈತರ ಪರವಾಗಿರದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದು, ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ನಾಗರೀಕ ಮತ್ತು ರೈತ ಹೋರಾಟ ಸಮಿತಿ ಅಧ್ಯಕ್ಷ ಎಸ್. ವಿಜಯ್‌ಕುಮಾರ್ ಎಚ್ಚರಿಸಿದರು.

ಅವರು ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಸೆಕ್ಷನ್ ೪(೧) ಮೀಸಲು ಅರಣ್ಯ ಸಮಸ್ಯೆ ಬಗ್ಗೆ ಬೆಂಗಳೂರಿನಲ್ಲಿ ಉನ್ನತ ಅಧಿಕಾರಿಗಳ ಮಟ್ಟದಲ್ಲಿ ಜಿಲ್ಲೆಯ ಚುನಾಯಿತ ಪ್ರತಿನಿಧಿಗಳು, ಜಿಲ್ಲಾಧಿಕಾರಿ, ಅರಣ್ಯಾಧಿಕಾರಿಗಳು, ಎಫ್‌ಎಸ್‌ಒ ಸೇರಿದಂತೆ ಅರಣ್ಯ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ ಎಂದರು.

ರೈತರು ಮನೆ ಕಟ್ಟಿಕೊಂಡು ಸಾಗುವಳಿ ಮಾಡುತ್ತಿರುವ ಭೂಮಿಯನ್ನು ಎ ಎಂದು ವರ್ಗೀಕರಿಸಿ, ರೈತರು ಸಾಗುವಳಿ ಮಾಡದೆ ಖಾಲಿ ಇರುವ ಭೂಮಿಯನ್ನ ಬಿ ಎಂದು ವರ್ಗೀಕರಿಸಿ ರೈತರಿಲ್ಲದ ಬಿ ವರ್ಗೀಕರಣದ ಭೂಮಿಯನ್ನು ಅರಣ್ಯ ಇಲಾಖೆಗೆ ನೀಡಲಿ, ಎ ವರ್ಗೀಕರಣದ ಭೂಮಿಯನ್ನು ಸರಕಾರ ತೀರ್ಮಾನ ತೆಗೆದು ಕೊಳ್ಳುವವರೆಗೂ ಅದನ್ನು ಹಾಗೇ ಉಳಿಸಬೇಕು ಎಂದು ಸಭೆಯಲ್ಲಿ ತೀರ್ಮಾನವಾಗಿದೆ ಎಂದು ತಿಳಿಸಿದರು.

ಆದರೆ, ಇಲಿನ ಎಫ್‌ಎಸ್‌ಒ ಅವರು ಈ ತೀರ್ಮಾನವನ್ನು ಧಿಕ್ಕರಿಸಿ ಯಥಾವತ್ತಾಗಿ ರೈತರ ಜಮೀನಿಗೆ ಭೇಟಿ ನೀಡದೆ ಸ್ಕೆಚ್ ತಯಾರಿ ಮಾಡದೆ ನ್ಯಾಯಾಲಯದ ನಿಯಮಾವಳಿಗಳನ್ನು ಪಾಲಿಸದೆ ಏಕಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದಾರೆ. ಇವರ ಧೋರಣೆ ಇದೇ ರೀತಿ ಮುಂದುವರಿದರೆ ಅವರ ವಿರುದ್ಧ ಗೋಬ್ಯಾಕ್ ಚಳವಳಿ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.

ನಮೂನೆ ೫೦-೫೩ ರಲ್ಲಿ ಮಂಜೂರಾಗಿದ್ದ ಭೂಮಿಯನ್ನು ಅಕ್ರಮ ಎಂದು ಪರಿಗಣಿಸಿ ರದ್ದುಪಡಿಸಿದ್ದು, ಕೂಡಲೇ ಇದನ್ನು ಪುನರ್‌ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು. ನಿಯಮಾವಳಿಗೆ ತಿದ್ದುಪಡಿ ಮಾಡಿ ನಮೂನೆ ೫೭ ರಲ್ಲಿ ಪ್ಲಾಂಟೇಶನ್ ಬೆಳೆಗಳಿಗೂ ಹಕ್ಕುಪತ್ರ ನೀಡುವಂತೆ ಕಂದಾಯ ಸಚಿವರಲ್ಲಿ ಒತ್ತಾಯ ಮಾಡಬೇಕು ಎಂದು ಜನಪ್ರತಿನಿಧಿಗಳನ್ನು ಒತ್ತಾಯಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಸಮಿತಿ ಸಂಚಾಲಕ ಕೆ.ಕೆ. ರಘು, ಮುಖಂಡರುಗಳಾದ ವಾಸುಪೂಜಾರಿ, ಪೂರ್ಣೇಶ್, ಈಶ್ವರ್, ರವಿಕುಮಾರ್, ಚಂದ್ರೇಗೌಡ, ಕುಮಾರಸ್ವಾಮಿ ಉಪಸ್ಥಿತರಿದ್ದರು.

Go back movement against the forest department

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...