Home namma chikmagalur ತಳಮಟ್ಟದಿಂದ ಪಕ್ಷ ಸಂಘಟಿಸಲು ಜನತೆಯ ಸಮಸ್ಯೆ ಆಲಿಸಿ
namma chikmagalurchikamagalurHomeLatest News

ತಳಮಟ್ಟದಿಂದ ಪಕ್ಷ ಸಂಘಟಿಸಲು ಜನತೆಯ ಸಮಸ್ಯೆ ಆಲಿಸಿ

Share
Share

ಚಿಕ್ಕಮಗಳೂರು: – ತಳಮಟ್ಟದಿಂದ ಪಕ್ಷವನ್ನು ಸದೃಢಗೊಳಿಸಲು ಎಲ್ಲಾ ಬೂತ್‌ಗಳಲ್ಲಿ ಜನತೆಯ ಸಮಸ್ಯೆಗಳನ್ನು ಆಲಿಸಬೇಕು. ಗ್ರಾಮೀಣ ಯುವಕರಿಗೆ ಪಕ್ಷದ ಸಿದ್ಧಾಂತವನ್ನು ಪರಿಚಯಿಸಿ ಸದಸ್ಯ ರನ್ನಾಗಿಸಿದರೆ ಭವಿಷ್ಯದಲ್ಲಿ ಕಾರ್ಯಕರ್ತರು ಉತ್ತಮ ನಾಯಕರಾಗಲು ಸಾಧ್ಯ ಎಂದು ಯುವ ಕಾಂಗ್ರೆಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ನಿಗಮ್ ಭಂಡಾರಿ ಹೇಳಿದರು.

ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗುರುವಾರ ನಡೆದ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕಾರಿಣಿ ಮತ್ತು ಯುವಕಾಂಗ್ರೆಸ್ ನೂತನ ಪದಾಧಿಕಾರಿಗಳ ಅಭಿನಂದನಾ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ರಾಜಕೀಯ ಪಕ್ಷ ಹಾಗೂ ವೈಯಕ್ತಿಕ ಕುಟುಂಬ ಒಂದೇ ನಾಣ್ಯದ ಎರಡು ಮುಖಗಳು. ಕುಟುಂಬ ವನ್ನು ಸುರಕ್ಷಿತವಾಗಿ ಕಾಪಾಡುವಂತೆ, ಮಾತೃಸಮಾನ ಪಕ್ಷವನ್ನು ನಿಷ್ಟೆ, ಪ್ರಾಮಾಣಿಕತೆ ಹಾಗೂ ಚುರುಕಿನಿಂ ದ ಸಂಘಟಿಸುವ ಜೊತೆಗೆ ರಾಹುಲ್‌ಗಾಂಧಿಯವರ ಆಲೋಚನೆಗಳಿಗೆ ಯುವ ಕಾಂಗ್ರೆಸ್ ಪದಾಧಿಕಾರಿಗಳು ಒತ್ತು ನೀಡಬೇಕು ಎಂದರು.

ಪಟ್ಟಣ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿ ನೂತನ ತಂಡವು ಸಭೆಗಳನ್ನು ನಡೆಸಿ ಸ್ಥಳೀಯ ಸಮಸ್ಯೆ ಗಳನ್ನು ಪರಿಹರಿಸುವ ಗುಣ ಬೆಳೆಸಿಕೊಳ್ಳಬೇಕು. ಧ್ವನಿಯಿಲ್ಲದವರಿಗೆ ಧ್ವನಿ, ಸಾಮಾಜಿಕ ಜ್ಞಾನದ ಕೊರತೆ ಇ ರುವವರಿಗೆ ಆತ್ಮಸ್ಥೈರ್ಯ ತುಂಬುವ ಮನೋಭಾವ ರೂಢಿಸಿಕೊಂಡಲ್ಲಿ ಜನತೆಯಲ್ಲಿ ವಿಶ್ವಾಸತೆ ಮೂಡ ಲಿದೆ ಎಂದು ಹೇಳಿದರು.

ಭವಿಷ್ಯದ ಪ್ರಜೆಗಳು ದುರಾಡಳಿತ ಸರ್ಕಾರದಿಂದ ದಾರಿ ತಪ್ಪದಿರಲಿ ಎಂದು ರಾಹುಲ್‌ಗಾಂಧಿಯವ ರು ಯುವಕಾಂಗ್ರೆಸ್ ಸ್ಥಾಪಿಸಿ ಯುವಕ-ಯುವತಿಯರಲ್ಲಿ ಅರಿವು ಮೂಡಿಸಿದ್ದಾರೆ. ಆಯಾ ಗ್ರಾಮಗಳ ಯು ವಪೀಳಿಗೆಗೆಯನ್ನು ಪಕ್ಷದ ಸದಸ್ಯರನ್ನಾಗಿಸಿ ಮುಂದಿನ ಚುನಾವಣಾ ಅಖಾಡಕ್ಕೆ ಮೊದಲ ಹೆಜ್ಜೆ ಇರಿಸುವ ಜೊತೆ ರಾಜ್ಯದ ಪಂಚ ಗ್ಯಾರಂಟಿಗಳ ಯೋಜನೆಗಳ ಮಾಹಿತಿಗಳನ್ನು ತಲುಪಿಸಬೇಕು ಎಂದರು.

ಪ್ರಸ್ತುತ ರಾಹುಲ್‌ಗಾಂಧಿಯವರು ಸದಸ್ಯತ್ವ, ಚುನಾವಣೆ, ತರಬೇತಿ ಹಾಗೂ ಕಾರ್ಯಕ್ರಮ ಎಂಬ ನಾ ಲ್ಕು ಅಂಶಗಳ ಅಡಿಪಾಯ ಮಾಡಿಕೊಂಡಿದ್ದಾರೆ. ಮುಂದಿನ ಜಿ.ಪಂ., ತಾ.ಪಂ ಹಾಗೂ ಗ್ರಾ.ಪಂ.ಗಳಲ್ಲಿ ಚು ನಾವಣೆಗೆ ಜನರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅಭ್ಯರ್ಥಿಗಳನ್ನು ಗುರುತಿಸಿ ಟಿಕೇಟ್ ನೀಡುವ ಮೂಲಕ ಕಾಂಗ್ರೆಸ್ ಎಲ್ಲೆಡೆ ರಾರಾಜಿಸಬೇಕು ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ ಮಾತನಾಡಿ ಸಮಾಜದಲ್ಲಿ ನಾಯಕರಾಗಲು ಮೊ ದಲು ಸಾಮಾನ್ಯರೊಂದಿಗೆ ಬೆರೆಯುವ ಗುಣ ಬೆಳೆಸಿಕೊಳ್ಳಬೇಕು. ಚುನಾವಣೆಗಳಲ್ಲಿ ಸೋಲು, ಗೆಲುವು ಸಾ ಮಾನ್ಯ. ಆದರೆ ಜನರ ವಿಶ್ವಾಸಕ್ಕೆ ಎಂದಿಗೂ ಚ್ಯುತಿ ಬಾರದೇ ಮನಸ್ಸಿನಲ್ಲಿ ಶಾಶ್ವತವಾಗಿ ನಂಬಿಕೆ ಉಳಿಸಿಕೊ ಳ್ಳುವ ಕಾರ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದರು.

ಪಕ್ಷ ಸಂಘಟನೆ ಎಂದರೆ ಕೇವಲ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್‌ಗಳನ್ನು ಹಂಚಿಕೊಂಡರೆ ಸಾ ಲದು, ಜನರನ್ನು ಭೇಟಿ ಮಾಡಿ ಕಾಂಗ್ರೆಸ್ ಸಿದ್ದಾಂತ, ಕೇಂದ್ರ ಸರ್ಕಾರದ ದುರಾಡಳಿತದ ವಿರುದ್ಧ ಚರ್ಚಿಸಿ ಮನವರಿಕೆ ಮಾಡಿದ್ದಲ್ಲಿ ಎಲ್ಲೆಡೆ ಕಾಂಗ್ರೆಸ್ ಸಂಘಟಿತವಾಗಿ ಬೆಳೆಯಬಹುದು. ವಿಶೇಷವಾಗಿ ಮಹಿಳೆಯರಿಗೆ ಶೇ.೫೦ ರಷ್ಟು ಮೀಸಲಾತಿ ನೀಡಿರುವ ಹೆಚ್ಚಿನ ಶ್ರಮ ವಹಿಸಬೇಕು ಎಂದು ಕಿವಿಮಾತು ಹೇಳಿದರು

ಯುವಕಾಂಗ್ರೆಸ್ ರಾಜ್ಯಾಧ್ಯಕ್ಷ ಮಂಜುನಾಥಗೌಡ ಮಾತನಾಡಿ ಮಾಜಿ ಪ್ರಧಾನಿ ಇಂದಿರಾಗಾಂಧಿಯವ ರ ಕ್ಷೇತ್ರವಾದ ಚಿಕ್ಕಮಗಳೂರು ವಿಶೇಷತನವನ್ನು ಹೊಂದಿದೆ. ಇಲ್ಲಿನ ನಿವಾಸಿಗಳು ಮಲೆನಾಡಿನ ಪರಿಸರದ ಂತೆ ಶುದ್ಧಮನಸ್ಸಿನ ನಿವಾಸಿಗಳಾದ ಕಾರಣ ರಾವಣನಂತ ಹಿಂದಿನ ಶಾಸಕರನ್ನು ಸೋಲಿಸಿ ಮನೆಗೆ ಕಳುಹಿ ಸಲು ಯುವಕಾಂಗ್ರೆಸ್, ಎನ್‌ಎಸ್‌ಯುಐ ಹಾಗೂ ಮಹಿಳೆಯರ ಶಕ್ತಿಯೇ ಕಾರಣ ಎಂದರು.

ಭಾಜಪ ಮುಖಂಡರು ಧರ್ಮ, ಜಾತಿ ಹೆಸರಿನಲ್ಲಿ ಜನತೆಯಲ್ಲಿ ಮಂಕುಬೂದಿ ಎರಚುತ್ತಿದೆ. ಹಣ, ಆಸ್ತಿ ಕಳೆದರೂ ತಿರುಗಿ ಪಡೆಯಬಹುದು. ಆದರೆ ದೇಶದ ಯುವಪೀಳಿಗೆ ದಾರಿತಪ್ಪಿದರೆ ರಾಷ್ಟ್ರದ ಭವಿಷ್ಯ ದಲ್ಲಿ ಭಯಾನಕ ಸ್ಥಿತಿ ಎದುರಾಗಲಿದೆ. ಈ ನಿಟ್ಟಿನಲ್ಲಿ ಬಿಜೆಪಿ, ಯುವಕರನ್ನು ಧರ್ಮದ ಹೆಸರಿನಲ್ಲಿ ಪಾತಾಳ ಕ್ಕೆ ತಳ್ಳುತ್ತಿದೆ ಎಂದು ಆರೋಪಿಸಿದರು.

ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ|| ಅಂಶುಮಂತ್ ಮಾತನಾಡಿ ಯುವಕಾಂಗ್ರೆಸ್ ಸಾರಥ್ಯ ವಹಿಸಿರುವ ಅಧ್ಯಕ್ಷ ರ ಮೇಲೆ ಹೆಚ್ಚಿನ ಜವಾಬ್ದಾರಿಯಿದೆ. ಕ್ಷೇತ್ರದಲ್ಲಿ ನಿರಂತರವಾಗಿ ಸಾಗಲು ಇಚ್ಚಾಶಕ್ತಿಯ ಅವಶ್ಯಕತೆಯಿದೆ. ಜ ನರೊಂದಿಗೆ ಕಷ್ಟ-ಸುಖಗಳಲ್ಲಿ ಭಾಗಿಯಾಗಬೇಕು. ಗಟ್ಟಿಯಾದ ವಿಚಾರವನ್ನು ಪ್ರಸ್ತಾಪಿಸಬೇಕು. ಪಕ್ಷ ಹಾ ಗೂ ರಾಜ್ಯಸರ್ಕಾರ ಅಭಿವೃದ್ದಿ ಕಾರ್ಯಗಳನ್ನು ಮನೆ ಮನೆಗೆ ತಲುಪಿಸಬೇಕು ಎಂದರು.

ಈ ಸಂದರ್ಭದಲ್ಲಿ ಯುವಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ದೀಪಿಕಾ ರೆಡ್ಡಿ, ರಾಜ್ಯ ಪ್ರಧಾನ ಕಾರ್ಯದಶಿ ಗಳಾದ ಸಿ.ಎನ್.ಆದಿಲ್, ಅಜಿತ್, ಶಿವಪ್ರಸಾದ್, ಬಾಹುಬಲಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ|| ಡಿ. ಎಲ್.ವಿಜಯ್‌ಕುಮಾರ್, ಮಾಜಿ ವಿಧಾನ ಪರಿಷತ್ ಸದಸ್ಯೆ ಗಾಯತ್ರಿ ಶಾಂತೇಗೌಡ, ಸಿಡಿಎ ಅಧ್ಯಕ್ಷ ಮೊಹ ಮ್ಮದ್ ನಯಾಜ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ, ಯುವಕಾಂಗ್ರೆಸ್ ಜಿಲ್ಲಾಧ್ಯಕ್ಷ ಶ್ರೀಜಿತ್, ಮುಖಂಡರುಗಳಾದ ತನೋಜ್‌ನಾ ಯ್ಡು, ಶಾದಬ್, ಸಿ.ಎನ್.ಅಕ್ಮಲ್, ಶಿವಕುಮಾರ್ ಮತ್ತಿತರರು ಉಪಸ್ಥಿ ತರಿದ್ದರು.

Listen to the people’s problems to organize the party from the grassroots level

 

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...