Home namma chikmagalur ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ
namma chikmagalurchikamagalurHomeLatest News

ಹೋರಾಟಗಾರ ಬಂಧನ ಖಂಡಿಸಿ ಸಂಯುಕ್ತ ಹೋರಾಟ ಸಮಿತಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹೋಬಳಿಯ ಫಲವತ್ತಾದ ಕೃಷಿ ಭೂಮಿಯನ್ನು ಕೆ.ಐ.ಎಡಿಬಿಗೆ ವಹಿಸುವ ನಿರ್ಧಾರ ವಿರೋಧಿಸಿ ಸಮಾವೇಶ ನಡೆಸಿದ ಹೋರಾಟಗಾರರನ್ನು ಬಂಧಿಸಿರುವ ಕ್ರಮ ಖಂಡಿಸಿ ಹಾಗೂ ಅನ್ಯ ಉದ್ದೇಶಕ್ಕೆ ಕೃಷಿ ಭೂಮಿ ಬಳಕೆ ಕೈಬಿಡಬೇಕು ಎಂದು ಒತ್ತಾಯಿಸಿ, ಸಂಯುಕ್ತ ಹೋರಾಟ ಸಮಿತಿಯಿಂದ ನಗರದ ಅಜಾದ್ ಪಾರ್ಕ್ ವೃತ್ತದಲ್ಲಿ ಗುರುವಾರ ಪ್ರತಿಭಟನೆ ನಡೆಸಲಾಯಿತು.

ಚನ್ನರಾಯಪಟ್ಟಣ ಹೋಬಳಿಯ ವಿವಿಧ ಹಳ್ಳಿಗಳ 1777 ಎಕರೆ ಜಮೀನನ್ನು ಕೃಷಿಯೇತರ ಉದ್ದೇಶಕ್ಕಾಗಿ ಸರ್ಕಾರ ಕೆಐಎಡಿಬಿಗೆ ವರ್ಗಾಯಿಸುವ ನಿರ್ಧಾರ ಕೈಗೊಂಡಿದೆ. ಇದನ್ನು ವಿರೋಧಿಸಿ ಆ ಭಾಗದ ರೈತರು ಕಳೆದ ಮೂರು ವರ್ಷದಿಂದ ನಿರಂತರ ಧರಣಿ ಮಾಡುತ್ತಿದ್ದಾರೆ. ರೈತರ ವಿರೋಧವನ್ನು ಲೆಕ್ಕಿಸದೆ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈಗಾಗಲೇ ರಸ್ತೆ ನಗರೀಕರಣ ಕೈಗಾರಿಕೆ ನೀರಾವರಿ ವಸತಿ ಹೀಗೆ ಹಲವು ಯೋಜನೆಗಳಿಗೆ ಶೇ. 30ರಷ್ಟು ರೈತರ ಫಲವತ್ತಾದ ಭೂಮಿ ಬಳಕೆಯಾಗುತ್ತಿದೆ. ಇದು ಹೀಗೆ ಮುಂದುವರಿದಲ್ಲಿ ಕೃಷಿಭೂಮಿ ಕಿರಿದಾಗಿ ದೇಶಕ್ಕೆ ಆಹಾರದ ಅಭಾವ ಸೃಷ್ಟಿಯಾಗುವ ಸಾಧ್ಯತೆ ಇದೆ. ಹೀಗಾಗಿ ಕೃಷಿ ಯೋಗ್ಯ ಭೂಮಿಯನ್ನು ಯಾವುದೇ ಕಾರಣಕ್ಕೂ ಅನ್ಯ ಉದ್ದೇಶಕ್ಕೆ ಬಳಕೆ ಮಾಡಬಾರದು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಡಿ.ಮಹೇಶ್, ತಾಲೂಕು ಅಧ್ಯಕ್ಷ ಸುನೀಲ್ ಕುಮಾರ್ ಮತ್ತಿತರರಿದ್ದರು.

Listen to the people’s problems to organize the party from the grassroots level

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...