Home namma chikmagalur ಪೆಟ್ರೋಲ್ ಕದ್ದ ಪ್ರಕರಣ – ಇಬ್ಬರ ಬಂಧನ
namma chikmagalurchikamagalurLatest News

ಪೆಟ್ರೋಲ್ ಕದ್ದ ಪ್ರಕರಣ – ಇಬ್ಬರ ಬಂಧನ

Share
Share

ಚಿಕ್ಕಮಗಳೂರು: ಪೆಟ್ರೋನೆಟ್ ಕಂಪನಿಯ ಪೈಪ್ ಲೈನ್ ನಿಂದ ಪೆಟ್ರೋಲ್ ಕದ್ದ ಪ್ರಕರಣ ಸಂಬಂಧ ಇಬ್ಬರನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನ ವಶಕ್ಕೆ ಪಡೆಯಲಾಗಿದೆ.

ಮಂಗಳೂರಿಂದ ಬೆಂಗಳೂರಿಗೆ ಹಾದು ಹೋಗಿದ್ದ ಪೆಟ್ರೋಲಿಯಂ ಪೈಪ್ ಲೈನ್ ನಿಂದ ಗೋಣಿಬೀಡು ಠಾಣಾ ವ್ಯಾಪ್ತಿಯ ಹಿರೇಶಿಗರ ಗ್ರಾಮದ ಬಳಿ ಅಂದಾಜು ೨ ಲಕ್ಷ ಮೌಲ್ಯದ ೨೦೦೦ ಲೀಟರ್ ನಷ್ಟು ಇಂಧನ ಕಳ್ಳತನವಾಗಿರುವ ಬಗ್ಗೆ ಪೆಟ್ರೋನೆಟ್ ಎಮ್‌ಎಚ್‌ಬಿ ಲಿಮಿಟೆಡ್ ಮ್ಯಾನೇಜರ್ ರವೀಂದ್ರ ದೂರ ನೀಡಿದ್ದರು.

ಆರೋಪಿಗಳನ್ನು ಶೀಘ್ರ ಪತ್ತೆಮಾಡಿ ಬಂಧಿಸಲು ಗೋಣಿಬೀಡು ಪೊಲೀಸ್ ಠಾಣೆ, ಪ್ರತಾಪ್ ಪಿಎಸ್‌ಐ (ತನಿಖೆ) ನೇತೃತ್ವದಲ್ಲಿ ಎರಡು ಪ್ರತ್ಯೇಕ ತಂಡಗಳನ್ನು ರಚಿಸಲಾಗಿತ್ತು. ಹಿರೇಶಿಗಿರ ಗ್ರಾಮದ ವಿಜಯಕುಮಾರ್ ಹಾಗೂ ಹರ್ಷ ನನ್ನು ಬಂಧಿಸಿ ಕೃತ್ಯಕ್ಕೆ ಬಳಸಿದ ವಾಹನಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಕಾರು, ಜೀಪು, ಟಿಪ್ಪರ್ ಸೇರಿದಂತೆ ಎಂಟು ವಾಹನಗಳನ್ನು ವಶಕ್ಕೆ ಪಡೆದಿದ್ದು , ದಿನೇಶ್ ಶೆಟ್ಟಿ, ಕಿರಣ್ ಮತ್ತು ಸಹಚರರು ತಲೆಮರೆಸಿಕೊಂಡಿದ್ದಾರೆ.

ಕೃತ್ಯ ನಡೆದ ೨೪ ಗಂಟೆಗಳ ಒಳಗಾಗಿ ಆರೋಪಿಗಳನ್ನು ಪತ್ತೆ ಹಚ್ಚಿದ ಅಧಿಕಾರಿ ಸಿಬ್ಬಂದಿ ಕಾರ್ಯವೈಖರಿಯನ್ನು ಪೊಲೀಸ್ ಅಧೀಕ್ಷಕ ವಿಕ್ರಂ ಅಮಟೆ ಶ್ಲಾಘಿಸಿದ್ದಾರೆ

Petrol theft case – two arrested

 

 

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...