Home namma chikmagalur ಎಸ್‌ಬಿಐ ಸಂಸ್ಥಾಪನ ದಿನ – 60 ಜನರಿಂದ ಸ್ವಯಂ ಪ್ರೇರಿತ ರಕ್ತದಾನ
namma chikmagalurchikamagalurHomeLatest News

ಎಸ್‌ಬಿಐ ಸಂಸ್ಥಾಪನ ದಿನ – 60 ಜನರಿಂದ ಸ್ವಯಂ ಪ್ರೇರಿತ ರಕ್ತದಾನ

Share
????????????????????????????????????
Share

ಚಿಕ್ಕಮಗಳೂರು: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಸಂಸ್ಥೆ ೭೦ನೇ ಸಂಸ್ಥಾಪನದ ದಿನ ದ ಅಂಗವಾಗಿ ರೆಡ್‌ಕ್ರಾಸ್ ಜಿಲ್ಲಾ ಶಾಖೆ ಸಹಯೋಗದಲ್ಲಿ ನಗರದ ಕೋಟೆ ಸಮೀಪದ ಎಸ್‌ಬಿಐ ಬ್ಯಾಂಕ್ ಕಚೇರಿ ಆವರಣದಲ್ಲಿ ಸಿಎಸ್‌ಆರ್ ನಿಧಿಯಿಂದ ಶುಕ್ರವಾರ ರಕ್ತದಾನ ಶಿಬಿರವನ್ನು ನಡೆಸಲಾಯಿತು.

ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಎಸ್‌ಬಿಐ ಬ್ಯಾಂಕ್ ಪ್ರಾದೇಶಿಕ ವ್ಯವಸ್ಥಾಪಕ ಟಿ.ಎಂ.ರವಿ ಪ್ರಸ್ತುತ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಭಾರತದಲ್ಲಿ ಅತಿದೊಡ್ಡ ಬ್ಯಾಂಕ್ ಆಗಿದೆ. ೨೦೦ ವರ್ಷಗಳ ಇತಿ ಹಾಸವಿದೆ. ಮೊದಲು ಬ್ಯಾಂಕ್ ಆಫ್ ಕಲ್ಕತ್ತಾ ಹೆಸರಿನಲ್ಲಿ ಆರಂಭವಾಗಿ ನಂತರ ಇಂಪಿರಿಯಲ್ ಬ್ಯಾಂಕ್ ಇಂಡಿಯಾ ಎಂದು ಕರೆಯಲಾಗುತ್ತಿತ್ತು ಎಂದರು.

೧೯೯೫ರ ಜುಲೈ ೧ ರಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಎಂದು ಮರುನಾಮಕರಣ ಮಾಡಲಾಯಿ ತು. ಅಲ್ಲದೇ ಸರ್ಕಾರಿ ಕಚೇರಿ, ಆಸ್ಪತ್ರೆ, ಕಾಲೇಜುಗಳಿಗೆ ಸಂಸ್ಥೆಯ ಸಿಎಸ್‌ಆರ್ ನಿಧಿಯಿಂದ ಸಾಮಾಜಿಕ ಕಾರ್‍ಯಗಳನ್ನು ಮಾಡುವ ಮೂಲಕ ಎಸ್‌ಬಿಐ ಜನಪರವಾಗಿ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.

ರೆಡ್‌ಕ್ರಾಸ್ ಜಿಲ್ಲಾಧ್ಯಕ್ಷ ಪ್ರದೀಪ್‌ಗೌಡ ಮಾತನಾಡಿ ಜೀವಗಳನ್ನು ಉಳಿಸಲು ಮತ್ತು ಆಸ್ಪತ್ರೆಗಳು ತುರ್ತು ಪರಿಸ್ಥಿತಿಗಳು, ಶಸ್ತ್ರಚಿಕಿತ್ಸೆಗಳು ಮತ್ತು ವೈದ್ಯಕೀಯ ಚಿಕಿತ್ಸೆಗಳನ್ನು ನಿರ್ವಹಿಸಲು ರಕ್ತದಾನವು ಅತ್ಯ ಗತ್ಯ. ರಕ್ತದಾನವು ಸರಳ ಮತ್ತು ನಿಸ್ವಾರ್ಥ ಕ್ರಿಯೆಯಾಗಿದ್ದು ಅಗತ್ಯವಿರುವವರಿಗೆ ಸ್ಪಂದಿಸುವ ಗುಣ ಬೆಳೆಸಿ ಕೊಳ್ಳಬೇಕು ಎಂದು ಕರೆ ನೀಡಿದರು.

ರಕ್ತದಾನ ಮನುಷ್ಯನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕರಾತ್ಮಕ ಪರಿಣಾಮ ಬೀರು ತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ಸಿಗದೇ ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ರೋಗಿಗಳು, ಅಪಘಾತ ಗ ಗಾಯಾಳುಗಳು ಮೃತಪಡುತ್ತಿದ್ದು ಈ ಬಗ್ಗೆ ಗಮನಹರಿಸಿ ಭಯಪಡದೇ ರಕ್ತದಾನ ಶಿಬಿರದಲ್ಲಿ ಪಾಲ್ಗೊ ಳ್ಳಬೇಕು ಎಂದು ಕಿವಿಮಾತು ಹೇಳಿದರು.

ರಕ್ತನಿಧಿ ಕೇಂದ್ರದ ಮುಖ್ಯಸ್ಥ ಡಾ|| ಮುರಳಿಧರ್ ಮಾತನಾಡಿ ರಕ್ತದಾನದಿಂದ ಮೂರು ಜೀವಗಳನ್ನು ಉಳಿಸಬಹುದು. ಶಸ್ತ್ರಚಿಕಿತ್ಸೆ, ಕ್ಯಾನ್ಸರ್ ಚಿಕಿತ್ಸೆಗೆ ಒಳಗಾಗುವ ರೋಗಿಗಳು ಮತ್ತು ಅಪಘಾತಗಳಂತಹ ತು ರ್ತು ಸಂದರ್ಭಗಳಲ್ಲಿ ಸಂರಕ್ಷಿಸಬಹುದು. ಅಲ್ಲದೇ ಸ್ಥಳೀಯ ಆಸ್ಪತ್ರೆಗಳು ಮತ್ತು ಚಿಕಿತ್ಸಾಲಯಗಳಲ್ಲಿ ಸ್ಥಿರ ವಾದ ರಕ್ತದ ಪೂರೈಕೆಯನ್ನು ಕಾಪಾಡಿಕೊಳ್ಳಲು ಯುವಕರು ಸ್ವಯಂ ಮುಂದಾಗಬೇಕು ಎಂದರು.

ಇದೇ ವೇಳೆ ೬೦ ಜನರು ಸ್ವಯಂಪ್ರೇರಿತ ರಕ್ತದಾನ ಮಾಡಿದರು. ಶಿಬಿರದಲ್ಲಿ ಪಾಲ್ಗೊಂಡು ರಕ್ತದಾನಿ ಗಳಿಗೆ ೫೦೦ ರೂ. ಬೆಲೆಬಾಳುವ ಬಹುಮಾನದ ಕೂಪನ್ ಬ್ಯಾಂಕ್‌ನಿಂದ ವಿತರಿಸಲಾಯಿತು. ಈ ಸಂದರ್ಭ ದಲ್ಲಿ ಹೊಸಮನೆ ಎಸ್‌ಬಿಐ ಬ್ಯಾಂಕ್ ಶಾಖೆ ಮುಖ್ಯಸ್ಥ ಗುರುಪ್ರಸಾದ್ ಕಾಮತ್, ಪ್ರಾದೇಶಿಕ ವ್ಯವಹಾರ ವ್ಯವಸ್ಥಾಪಕ ಕೆ.ರಂಗ ಸ್ವಾಮಿ, ಮಾನವ ಸಂಪನ್ಮೂಲ ವಿಭಾಗದ ಮುಖ್ಯಸ್ಥೆ ಕು.ಪಲ್ಲವಿ ಜೋಷಿ, ರೆಡ್‌ಕ್ರಾಸ್ ನಿರ್ದೇಶಕ ವಿಲಿಯಂ ಪಿರೇರಾ, ಆ ಯೋಜಕ ಜಿ.ವಿ.ಗಿರೀಶ್, ಜೇಸಿಐ ಅಧ್ಯಕ್ಷ ಸಿ.ಬಿ. ಪ್ರದೀಪ್, ವೈದ್ಯ ಡಾ|| ಯಶವರ್ಧನ್ ಮತ್ತಿ ತರರು ಉಪ ಸ್ಥಿತರಿದ್ದರು.

SBI Foundation Day – 60 people volunteer to donate blood

Share

Leave a comment

Leave a Reply

Your email address will not be published. Required fields are marked *

Don't Miss

ಸಾರ್ವಜನಿಕರ ಸುರಕ್ಷತೆಗಾಗಿ “ಮನೆ-ಮನೆಗೆ ಪೊಲೀಸ್”

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ 368 ಬೀಟ್‌ಗಳಲ್ಲಿ ಏಕಕಾಲದಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು  ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ವಿಕ್ರಮ ಅಮಟೆ ತಿಳಿಸಿದರು. ನಗರದ ಸ್ಪೆನ್ಸರ್ ರಸ್ತೆಯಲ್ಲಿ ಮ‌ನೆ ಮನೆಗೆ ಪೊಲೀಸ್...

ಗಿರಿಭಾಗಕ್ಕೆ ಪ್ರವೇಶ ಶುಲ್ಕ-ಪಾಸ್ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಚಿಕ್ಕಮಗಳೂರು: ಮುಳ್ಳಯ್ಯನಗಿರಿ ಮತ್ತು ಐ.ಡಿ.ಪೀಠ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ನಿ ವಾಸಿಗಳಿಗೆ ಪ್ರವೇಶ ಶುಲ್ಕ ಮತ್ತು ಪಾಸ್ ವಿತರಿಸುವ ನಿರ್ಧಾರ ಖಂಡಿಸಿ ಅತ್ತಿಗುಂಡಿ, ಮಹಲ್, ಬಿಸಗ್ನಿ ಮಠ, ಕೆಸವಿನಮನೆ, ಪಂಡರವಳ್ಳಿ, ಉಕುಡ, ಚಂದ್ರಗಿರಿ,...

Related Articles

ಹಲ್ಲೆ ನಡೆಸಿರುವ ಕುದುರೆಮುಖ ಪೇದೆ-ಠಾಣಾಧಿಕಾರಿಯ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಚಿಕ್ಕಮಗಳೂರು: ವಿನಾಕಾರಣ ಜಾತಿ ನಿಂದಲೇ ನಡೆಸಿ ಹಲ್ಲೆ ನಡೆಸಿರುವ ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್...

ಆ.4 ರಂದು ಸಿರವಾಸೆಯಲ್ಲಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಸಿರವಾಸೆ ಗ್ರಾಮದ ಸುಗಡವಾನಿ ಮತ್ತಿತರೆ ಊರುಗಳಲ್ಲಿನ ಜನವಸತಿ ಪ್ರದೇಶ, ಕೃಷಿ ಭೂಮಿಯ ವಿವಿಧ...

ಆ.3ಕ್ಕೆ ಲಕ್ಷ್ಮಣ್ ತುಕಾರಾಂ ಗೋಲೆ ನಾಟಕ ಪ್ರದರ್ಶನ

ಚಿಕ್ಕಮಗಳೂರು: ಶಿವಮೊಗ್ಗದ ಸಹ್ಯಾದ್ರಿ ರಂಗಭೂಮಿ ಅರ್ಪಿಸುವ ಸಮಾಜಕ್ಕೆ ಒಳ್ಳೆಯ ಸಂದೇಶ ಸಾರುವ ‘ಲಕ್ಷ್ಮಣ್ ತುಕಾರಾಂ ಗೋಲೆ’...

ನಯನ ಮೋಟಮ್ಮ ಕೋಮುವಾದಿಗಳ ಜೊತೆ ವೇದಿಕೆ ಹಂಚಿಕೊಂಡಿರುವುದು ಕಾಂಗ್ರೇಸ್ ಪಕ್ಷಕ್ಕೆ ಮುಜುಗರ

ಚಿಕ್ಕಮಗಳೂರು: ಜಾತ್ಯಾತೀತ ಸಿದ್ಧಾಂತ ಪ್ರತಿಪಾದಿಸುವ ಕಾಂಗ್ರೇಸ್ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿರುವ ನಯನ ಮೋಟಮ್ಮ ಅವರು ಪಕ್ಷದ...