Home Latest News ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ
Latest NewschikamagalurHomenamma chikmagalur

ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ

Share
Share

ಚಿಕ್ಕಮಗಳೂರು:  ಕಾಫಿನಾಡಿನ ಜನರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಅವಿರತ ಪ್ರಯತ್ನದ ಫಲವಾಗಿ ಜಿಲ್ಲೆಯ ಜನರ ಬಹುದಿನದ ಕನಸು ಇದೀಗ ನನಸಾಗಿದೆ.

ರಾಜ್ಯ ರೈಲ್ವೆ ಖಾತೆ ಸಚಿವ ಸೋಮಣ್ಣರವರ ಸಹಕಾರದೊಂದಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ ಪ್ರೆಸ್ ರೈಲಿಗೆ ಅನುಮೋದನೆ ನೀಡಿದ್ದಾರೆ. ಸಧ್ಯ ಈ ರೈಲು ಪ್ರಾಯೋಗಿಕವಾಗಿ ವಾರಕ್ಕೊಂದು ಬಾರಿ ಸಂಚಾರ ನಡೆಸಲಿದ್ದು, ಪ್ರತಿ ಶುಕ್ರವಾರ ಸಂಜೆ ೫.೩೦ ಕ್ಕೆ ಚಿಕ್ಕಮಗಳೂರು ಬಿಟ್ಟು, ಶನಿವಾರ ಬೆಳಗ್ಗೆ ೭.೪೦ ಕ್ಕೆ ತಿರುಪತಿ ತಲುಪಲಿದೆ.

ತಿರುಪತಿಯಿಂದ ಚಿಕ್ಕಮಗಳೂರಿಗೆ ಪ್ರತಿ ಗುರುವಾರ ರಾತ್ರಿ ೯ ಕ್ಕೆ ರೈಲು ಹೊರಡಲಿದ್ದು, ಶುಕ್ರವಾರ ಬೆಳಗ್ಗೆ ೧೦.೩೦ ಕ್ಕೆ ಚಿಕ್ಕಮಗಳೂರು ತಲುಪಲಿದೆ.
ಚಿಕ್ಕಮಗಳೂರು ನಿಲ್ದಾಣದಿಂದ ಹೊರಡುವ ರೈಲು ಮಾರ್ಗ ಮಧ್ಯೆ ಸಖರಾಯಪಟ್ಟಣ, ಬಿಸಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ, ಬೆಂಗಳೂರು, ಕೆ.ಆರ್.ಪುರಂ. ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರ್‌ಪೇಟ್, ಕಟ್ಪಾಡಿ, ಚಿತ್ತೂರು ಹಾಗೂ ಪಾಕಲಾದಲ್ಲಿ ನಿಲುಗಡೆ ನೀಡಲಿದೆ.

ತಿರುಪತಿಗೆ ನೇರ ರೈಲು ಬಿಟ್ಟಿರುವುದರಿಂದ ಚಿಕ್ಕಮಗಳೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜನತೆಗೆ ಅನುಕೂಲವಾಗಲಿದೆ. ಮಲೆನಾಡಿನ ೫ ತಾಲ್ಲೂಕುಗಳ ಜನರು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಿಂದ ರೈಲು ಹತ್ತಲು ಅನುಕೂಲವಾದರೆ, ಬಯಲಿನ ೪ ತಾಲ್ಲೂಕುಗಳ ಜನರು ಕಡೂರು ಅಥವಾ ಬೀರೂರು ರೈಲ್ವೇ ನಿಲ್ದಾಣದಿಂದ ಪ್ರಯಾಣ ಬೆಳೆಸಲು ಅನುಕೂಲವಾಗಿದೆ.

ಪ್ರಯಾಣಿಕರ ಬೇಡಿಕೆಯ ಮೇರೆಗೆ ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ರೈಲು ಓಡಿಸುವ ಯೋಜನೆಯನ್ನು ಸಿದ್ಧಪಡಿಸಲಾಗಿದೆ.
ಈ ರೈಲಿನ ಪ್ರಯೋಜನವನ್ನು ಬಳಸಿಕೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರಿಗೆ ಹೊಸ ರೈಲು ಘೋಷಣೆ ಆಗಿರುವುದರಿಂದ ಸಂಸದರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Approval for new train service from Chikkamagaluru to Tirupati

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...