Home Latest News ಅನ್ನಪೂರ್ಣ ಆಸ್ಪತ್ರೆಯ ಡಾ. ಸುಂದರೇಶ್ ನಿಧನ
Latest NewschikamagalurHomenamma chikmagalur

ಅನ್ನಪೂರ್ಣ ಆಸ್ಪತ್ರೆಯ ಡಾ. ಸುಂದರೇಶ್ ನಿಧನ

Share
Share

ಚಿಕ್ಕಮಗಳೂರು:  ಅನ್ನಪೂರ್ಣ ಆಸ್ಪತ್ರೆಯ ಸಂಸ್ಥಾಪಕರಾಗಿದ್ದ ಮತ್ತು ನಗರದ ಹೆಸರಾಂತ ಮಕ್ಕಳ ತಜ್ಞರಾಗಿದ್ದ ಡಾ. ಸುಂದರೇಶ್ (72 ವರ್ಷ) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಬೆಂಗಳೂರಿನ ಅಕ್ಷಾ ಅಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ.

ಚಿಕ್ಕಮಗಳೂರು ಅನ್ನಪೂರ್ಣ ಆಸ್ಪತ್ರೆಯಲ್ಲಿ ಇಂದು(ಶನಿವಾರ) ಸಂಜೆ 3 ಗಂಟೆವರೆಗೆ ಅವರ ಪಾರ್ಥೀಪ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಕದ್ರಿಮಿದ್ರಿಯ ಅನ್ನಪೂರ್ಣ ಫಾರ್ಮ್ ಹೌನ್ ನಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸ್ವಾಮೀಜಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಡಾ. ಸುಂದರೇಶ್ ಅವರು ಅಲ್ಲೂರು ಸಮೀಪದ ಯಲಗುಡಿಗೆಯ ಮಾಜಿ ರಾಜ್ಯ ಸಭಾ ಸದಸ್ಯ ಬಸಪ್ಪ . ಶೆಟ್ಟಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮನವರ ಕಿರಿಯ ಪುತ್ರರಾಗಿದ್ದರು. 1976 ರಲ್ಲಿಯೇ ಚಿಕ್ಕಮಗಳೂರು ನಗರದಲ್ಲಿ ಅನ್ನಪೂರ್ಣ ಆಸ್ಪತ್ರೆ ಪ್ರಾರಂಭಿಸಿ ಜನರಿಗೆ ಸೇವೆ ನೀಡುತ್ತಾ ಬಂದಿದ್ದರು. ಇವರು ಪ್ರಸಿದ್ಧ ಮಕ್ಕಳ ತಜ್ಞರಾಗಿದ್ದರು.

ಇವರ ಇಡೀ ಕುಟುಂಬವೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪತ್ನಿ ಡಾ. ನಂದ ಅವರು ಪ್ರಸೂತಿ ತಜ್ಞರಾಗಿದ್ದಾರೆ. ಮಗ ಡಾ. ನಿಖಿಲ್ ಹೃದ್ರೋಗ ತಜ್ಞರಾಗಿದ್ದಾರೆ. ನೊನೆ ಡಾ. ರೇವತಿ ಪ್ರಸೂಚಿ ತಜ್ಞರಾಗಿದ್ದಾರೆ. ಇವರೆಲ್ಲರೂ ಅನ್ನಪೂರ್ಣ ಆಸ್ಪತ್ರೆಯಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ಡಾ. ಮಾಧುರಿ ಅಳಿಯ ಡಾ. ಸುಮಂತ್ ಬೆಂಗಳೂರಿನಲ್ಲಿ ತಮ್ಮದೇ ಆದ ಅಕ್ಷಾ ಆಸ್ಪತ್ರೆಯನ್ನು ನಡೆಸುತ್ತಿದ್ದಾರೆ.

ಡಾ. ಸುಂದರೇಶ್ ಅವರು ಸಹೋದರರಾದ ರೇಣುಕಾರ್ಯ, ಬಿ. ಬಸವರಾಜು, ಸಹೋದರಿಯರು, ಪತ್ನಿ, ಮಕ್ಕಳು, ಅಪಾರ ಬಂಧುಗಳನ್ನು ಅಗಲಿದ್ದಾರೆ. ಡಾ. ಸುಂದರೇಶ್ ಅವರ ಅಗಲಿಕೆಗೆ ಜಿಲ್ಲೆಯ ವಿವಿಧ ಸಂಘನಂಸ್ಥೆಗಳು, ಜನಪ್ರತಿನಿಧಿಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.

Dr. Sundaresh of Annapurna Hospital passes away

Share

Leave a comment

Leave a Reply

Your email address will not be published. Required fields are marked *

Don't Miss

ಮೂಡಿಗೆರೆ ತಾಲ್ಲೂಕಿನಾದ್ಯಂತ ಮಳೆಯಿಂದ ಜನಜೀವನ ಅಸ್ತವ್ಯಸ್ತ

ಮೂಡಿಗೆರೆ: ತಾಲ್ಲೂಕಿನಾದ್ಯಂತ ಭಾನುವಾರ ಇಡೀ ದಿನ‌ ಬಿಡುವಿಲ್ಲದೇ ಸುರಿದ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿತು. ತಾಲ್ಲೂಕಿನ ಗಂಗನಮಕ್ಕಿ ಗ್ರಾಮದಲ್ಲಿ ಮಂಜುನಾಥ್ ಹಾಗೂ ಗಿರೀಶ್ ಅವರಿಗೆ ಸೇರಿದ ಹಳೆಯ ಕಟ್ಟಡವೊಂದು ಕುಸಿದಿದ್ದು, ಅಪಾರ ಪ್ರಮಾಣದ...

40 ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ 9ನೇ ಮೈಲಿಕಲ್ಲು ಸಮೀಪದಲ್ಲಿ ಪೈಪ್‌ಲೈನ್ ಕಾಮಗಾರಿ ಜಾಗದಲ್ಲಿದ್ದ ₹ 40ಸಾವಿರ ಮೌಲ್ಯದ 400 ಮೀಟರ್ ಪೈಪ್‌  ಕಳವು ಮಾಡಿದ್ದ ಮೂವರು ಆರೋಪಿಗಳನ್ನು ಸಿಂಗಟಗೆರೆ ಪೊಲೀಸರು ಬಂಧಿಸಿ,...

Related Articles

ವೇದಾನದಿಯಿಂದ ಕೆರೆ ತುಂಬಿಸುವ ಯೋಜನೆ ಸ್ಥಗಿತಗೊಳಿಸಬೇಕು

ಚಿಕ್ಕಮಗಳೂರು:  ವೇದಾ ನದಿಯ ಅಗ್ರಹಾರ ಬಳಿ ಇರುವ ಚೆಕ್‌ಡ್ಯಾಂನಿಂದ ಹುಲಿಕೆರೆ, ಬೆರಟಿಕೆರೆ, ನಾಗೇನಹಳ್ಳಿಯ ಕೆರೆಗಳಿಗೆ ನೀರೊದಗಿಸುವುದನ್ನು...

ನಿಷೇಧಿತ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್-103 ಪ್ರವಾಸಿಗರು ಪೊಲೀಸರು ವಶಕ್ಕೆ

ಚಿಕ್ಕಮಗಳೂರು: ಪಶ್ಚಿಮ ಘಟ್ಟದ ನಿಷೇಧಿತ ಅರಣ್ಯ ಪ್ರದೇಶ ಬಿದಿರುತಳದಲ್ಲಿ ಅನುಮತಿ ಇಲ್ಲದೆ ಟ್ರಕ್ಕಿಂಗ್ ನಡೆಸುತ್ತಿದ್ದ ೧೦೩...

ಕೇಂದ್ರ ಗುಪ್ತಚರ ಇಲಾಖೆ ಪೇದೆ ಆತ್ಮಹತ್ಯೆ

ಚಿಕ್ಕಮಗಳೂರು: ಅನಾರೋಗ್ಯದ ಸಮಸ್ಯೆ ಹಿನ್ನೆಲೆ ಗುಪ್ತಚರ ಇಲಾಖೆಯ ಪೇದೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ...

ದೇಶ ಸುಭದ್ರಗೊಳಿಸಲು ಯುವಕರು ಯೋಧರಾಗಿ

ಚಿಕ್ಕಮಗಳೂರು:  ಭವ್ಯ ಭಾರತದ ಕನಸನ್ನು ಹೊತ್ತಿರುವ ಯುವಕರು ವಯಸ್ಸಿನಲ್ಲಿ ವ್ಯಸ ನಗಳ ಚಟಕ್ಕೆ ಬಲಿಯಾಗದೇ, ದೇಶವನ್ನು...