Home Latest News ಅನ್ನಪೂರ್ಣ ಆಸ್ಪತ್ರೆಯ ಡಾ. ಸುಂದರೇಶ್ ನಿಧನ
Latest NewschikamagalurHomenamma chikmagalur

ಅನ್ನಪೂರ್ಣ ಆಸ್ಪತ್ರೆಯ ಡಾ. ಸುಂದರೇಶ್ ನಿಧನ

Share
Share

ಚಿಕ್ಕಮಗಳೂರು:  ಅನ್ನಪೂರ್ಣ ಆಸ್ಪತ್ರೆಯ ಸಂಸ್ಥಾಪಕರಾಗಿದ್ದ ಮತ್ತು ನಗರದ ಹೆಸರಾಂತ ಮಕ್ಕಳ ತಜ್ಞರಾಗಿದ್ದ ಡಾ. ಸುಂದರೇಶ್ (72 ವರ್ಷ) ನಿಧನರಾಗಿದ್ದಾರೆ. ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ರಾತ್ರಿ ಬೆಂಗಳೂರಿನ ಅಕ್ಷಾ ಅಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ.

ಚಿಕ್ಕಮಗಳೂರು ಅನ್ನಪೂರ್ಣ ಆಸ್ಪತ್ರೆಯಲ್ಲಿ ಇಂದು(ಶನಿವಾರ) ಸಂಜೆ 3 ಗಂಟೆವರೆಗೆ ಅವರ ಪಾರ್ಥೀಪ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ನಂತರ ಕದ್ರಿಮಿದ್ರಿಯ ಅನ್ನಪೂರ್ಣ ಫಾರ್ಮ್ ಹೌನ್ ನಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸ್ವಾಮೀಜಿಗಳ ನೇತೃತ್ವದಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ಡಾ. ಸುಂದರೇಶ್ ಅವರು ಅಲ್ಲೂರು ಸಮೀಪದ ಯಲಗುಡಿಗೆಯ ಮಾಜಿ ರಾಜ್ಯ ಸಭಾ ಸದಸ್ಯ ಬಸಪ್ಪ . ಶೆಟ್ಟಿ ಮತ್ತು ಶ್ರೀಮತಿ ಅನ್ನಪೂರ್ಣಮ್ಮನವರ ಕಿರಿಯ ಪುತ್ರರಾಗಿದ್ದರು. 1976 ರಲ್ಲಿಯೇ ಚಿಕ್ಕಮಗಳೂರು ನಗರದಲ್ಲಿ ಅನ್ನಪೂರ್ಣ ಆಸ್ಪತ್ರೆ ಪ್ರಾರಂಭಿಸಿ ಜನರಿಗೆ ಸೇವೆ ನೀಡುತ್ತಾ ಬಂದಿದ್ದರು. ಇವರು ಪ್ರಸಿದ್ಧ ಮಕ್ಕಳ ತಜ್ಞರಾಗಿದ್ದರು.

ಇವರ ಇಡೀ ಕುಟುಂಬವೇ ವೈದ್ಯಕೀಯ ವೃತ್ತಿಯಲ್ಲಿ ನಿರತರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಪತ್ನಿ ಡಾ. ನಂದ ಅವರು ಪ್ರಸೂತಿ ತಜ್ಞರಾಗಿದ್ದಾರೆ. ಮಗ ಡಾ. ನಿಖಿಲ್ ಹೃದ್ರೋಗ ತಜ್ಞರಾಗಿದ್ದಾರೆ. ನೊನೆ ಡಾ. ರೇವತಿ ಪ್ರಸೂಚಿ ತಜ್ಞರಾಗಿದ್ದಾರೆ. ಇವರೆಲ್ಲರೂ ಅನ್ನಪೂರ್ಣ ಆಸ್ಪತ್ರೆಯಲ್ಲಿಯೇ ಸೇವೆ ಸಲ್ಲಿಸುತ್ತಿದ್ದಾರೆ. ಇವರ ಮಗಳು ಡಾ. ಮಾಧುರಿ ಅಳಿಯ ಡಾ. ಸುಮಂತ್ ಬೆಂಗಳೂರಿನಲ್ಲಿ ತಮ್ಮದೇ ಆದ ಅಕ್ಷಾ ಆಸ್ಪತ್ರೆಯನ್ನು ನಡೆಸುತ್ತಿದ್ದಾರೆ.

ಡಾ. ಸುಂದರೇಶ್ ಅವರು ಸಹೋದರರಾದ ರೇಣುಕಾರ್ಯ, ಬಿ. ಬಸವರಾಜು, ಸಹೋದರಿಯರು, ಪತ್ನಿ, ಮಕ್ಕಳು, ಅಪಾರ ಬಂಧುಗಳನ್ನು ಅಗಲಿದ್ದಾರೆ. ಡಾ. ಸುಂದರೇಶ್ ಅವರ ಅಗಲಿಕೆಗೆ ಜಿಲ್ಲೆಯ ವಿವಿಧ ಸಂಘನಂಸ್ಥೆಗಳು, ಜನಪ್ರತಿನಿಧಿಗಳು ತೀವ್ರ ಸಂತಾಪ ವ್ಯಕ್ತಪಡಿಸಿವೆ.

Dr. Sundaresh of Annapurna Hospital passes away

Share

Leave a comment

Leave a Reply

Your email address will not be published. Required fields are marked *

Don't Miss

ಕಡೂರು ತಾಲೂಕು ಸರ್ಕಾರದ ಬರಪಟ್ಟಿಗೆ ವೈ.ಎಸ್.ವಿ. ದತ್ತಾ ಆಗ್ರಹ

ಕಡೂರು: ಇಡೀ ಜಿಲ್ಲೆಯಲ್ಲಿ ಅತ್ಯಂತ ಬರಗಾಲಕ್ಕೆ ತುತ್ತಾಗಿರುವ ತಾಲೂಕು ಎಂದರೆ ಕಡೂರು ತಾಲೂಕು, ಈ ಸಾಲಿನಲ್ಲಿ ಪ್ರಾರಂಭದಿಂದಲೂ  ಮಳೆ ಬಂದಿಲ್ಲ, ಮುಂಗಾರು ಬಿತ್ತನೆ ಆಗಿಲ್ಲ, ಆಗಸ್ಟ್ ತಿಂಗಳು ಕಳೆಯುತ್ತಾ ಬಂದರು ರಾಗಿ...

ಟಿಪ್ಪು ಕಟೌಟ್‌ಗೆ ಪಾಕಿಸ್ತಾನ ಪರ ಹಾಡು ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು: ನಗರದ ಟಿಪ್ಪುನಗರದಲ್ಲಿ ಈದ್ ಮಿಲಾದ್ ಹಿನ್ನೆಲೆಯಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಅವರ ಬೃಹತ್ ಕಟೌಟ್‌ಗೆ ಪಾಕಿಸ್ತಾನ ಪರವಾದ ಹಾಡನ್ನು ಅಳವಡಿಸಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿರುವುದನ್ನು ಖಂಡಿಸಿ, ರಾಷ್ಟ್ರ ಸುರಕ್ಷಾ ಸಮಿತಿ...

Related Articles

ಕಸಾಪ ಅಧ್ಯಕ್ಷಗಿರಿಗೆ ಜಾಣಗೆರೆ ವೆಂಕಟರಾಮಯ್ಯ ಸೂಕ್ತ

ಚಿಕ್ಕಮಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಡಿಸೆಂಬರ್‌ನಲ್ಲಿ ಚುನಾವಣೆ ನಡೆಯಲಿದ್ದು, ಈಗಾಗಲೇ ಸರ್ಕಾರ ಚುನಾವಣಾಧಿಕಾರಿಯನ್ನು...

ಚಿಕ್ಕೊಳಲೆ ಸುತ್ತ ಕುರುಡು ಕಾಡುಕೋಣದ ಉಪಟಳ

ಚಿಕ್ಕಮಗಳೂರು: ನಗರದ ಸಮೀಪದ ಚಿಕ್ಕೊಳಲೆ ಸುತ್ತಮುತ್ತ ಹಲವು ದಿನಗಳಿಂದ ಕಣ್ಣು ಕಾಣದ ಕಾಡುಕೋಣವೊಂದು ಸುತ್ತಾಡುತ್ತಿದ್ದು, ಗ್ರಾಮಸ್ಥರಲ್ಲಿ...

ರಾಜಕಾರಣದಲ್ಲೂ ಮಹಿಳೆಯರು ಸ್ಥಾನಮಾನಕ್ಕಾಗಿ ಒಗ್ಗಟ್ಟಾಗಿ ಧ್ವನಿ ಎತ್ತಬೇಕು

ಚಿಕ್ಕಮಗಳೂರು:  ಸಿದ್ದರಾಮಯ್ಯ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಬಳಿಕ ಡಿಕೆ ಶಿವಕುಮಾರ ನೇತೃತ್ವದ ರಚನೆಯಾದ ನೂತನ ಸಚಿವ...

ಗುಟ್ಕಾ ನಿಷೇಧ ವಿರೋಧಿಸಿ ಬಿಜೆಪಿ ಜಿಲ್ಲಾ ರೈತ ಮೋರ್ಚಾ ಪ್ರತಿಭಟನೆ

ಚಿಕ್ಕಮಗಳೂರು: ಗುಟ್ಕಾ ನಿಷೇಧದ ಕುರಿತು ರಾಜ್ಯ ಸರ್ಕಾರ ನೀಡಿರುವ ಹೇಳಿಕೆಯಿಂದ ಅಡಕೆ ಬೆಲೆ ಕುಸಿದು ರೈತರು...