Home namma chikmagalur ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ
namma chikmagalurchikamagalurHomeLatest News

ಮಾಡೆಲ್ ಶಾಲೆಯಲ್ಲಿ ನಾಯಕರ ಆಯ್ಕೆಗೆ ಚುನಾವಣೆ

Share
Share

ಚಿಕ್ಕಮಗಳೂರು: ನಗರದ ಹೊರವಲಯದಲ್ಲಿರುವ ಉಪ್ಪಳ್ಳಿಯ ಮಾಡೆಲ್ ಆಂಗ್ಲ ಪ್ರೌಢಶಾಲೆಯಲ್ಲಿ ಶಾಲಾ ಸಾಕ್ಷರತಾ ವತಿಯಿಂದ ಶಾಲಾ ಚುನಾವಣೆಯನ್ನು ಆಯೋಜಿಸಲಾಗಿತ್ತು.

ಮಕ್ಕಳಿಗೆ ಪ್ರಜಾಪ್ರಭುತ್ವದ ಮಹತ್ವ ಮತ್ತು ಮತದಾನದ ಅರಿವನ್ನು ಮೂಡಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರಿಂದ ವಿದ್ಯಾರ್ಥಿಗಳು ಮತದಾನದ ಮಹತ್ವ, ಮತದಾನದ ಪ್ರಕ್ರಿಯೆ ಮತ್ತು ಸದೃಢ ದೇಶ ನಿರ್ಮಾಣಕ್ಕಾಗಿ ಉತ್ತಮ ನಾಯಕರ ಆಯ್ಕೆ ಮಾಡುವುದನ್ನು ತಿಳಿದುಕೊಂಡರು

ಚುನಾವಣೆ ಪ್ರಕ್ರಿಯೆಯಲ್ಲಿ ಒಂಬತ್ತು ಮತ್ತು ಹತ್ತನೆಯ ತರಗತಿಯ ವಿದ್ಯಾರ್ಥಿಗಳು ಸ್ಕೂಲ್ ಲೀಡರ್, ಸ್ಪೋರ್ಟ್ಸ್ ಲೀಡರ್, ಲಿಟರರಿ ಆಕ್ಟಿವಿಟಿ ಲೀಡರ್ ಮತ್ತು ಡಿಸಿಪ್ಲಿನ್ ಲೀಡರ್ ಸ್ಥಾನಗಳಿಗೆ ಸ್ಪರ್ಧಿಸಲು ಅವಕಾಶ ಕಲ್ಪಿಸಲಾಗಿತ್ತು. ಮತದಾನ ಮಾಡಲು ನಾಲ್ಕನೇ ತರಗತಿಯಿಂದ ಹತ್ತನೆಯ ತರಗತಿ ವಿದ್ಯಾರ್ಥಿಗಳಿಗೆ ಅವಕಾಶವನ್ನು ಕಲ್ಪಿಸಿಕೊಡಲಾಗಿತ್ತು.

ಡೈರಿಯಲ್ಲಿ ಮಗುವಿನ ಫೋಟೋ. ಮಗುವಿನ ವಿವರ ಮತ್ತು ಪೋಷಕರ ಸಹಿ ಕಡ್ಡಾಯವಾಗಿ ಇರಬೇಕು.ಐಡಿ ಕಾರ್ಡ್ ಅಥವಾ ಡೈರಿ ಇರದವರಿಗೆ ಮತದಾನ ಮಾಡಲು ಅವಕಾಶ ಇರಲಿಲ್ಲ. ತರಗತಿವಾರು ವಿದ್ಯಾರ್ಥಿಗಳು ಅತ್ಯಂತ ಉತ್ಸಾಹದಿಂದ ಮತದಾನ ಮಾಡಿದರು ಶಿಕ್ಷಕರು ಕೂಡ ಮತದಾನ ಮಾಡಿದರು.

ಸಂಪೂರ್ಣ ಮತ ಎಣಿಕೆ ಪ್ರಕ್ರಿಯೆ ಮುಗಿದ ನಂತರ ಮಾಡೆಲ್ ಶಾಲಾ ನಾಯಕನಾಗಿ ಹತ್ತನೇ ತರಗತಿ ವಿದ್ಯಾರ್ಥಿ ಮುಂತಾಸಿರ್ ರಜಾ, ಕ್ರೀಡಾ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಸಾರಿಯ ಸುಲ್ತಾನ, ಲಿಟರೆರಿ ಆಕ್ಟಿವಿಟಿ ನಾಯಕಿಯಾಗಿ ಹತ್ತನೇ ತರಗತಿ ವಿದ್ಯಾರ್ಥಿನಿ ವಿದ್ಯಾ ಐ. ವಿ. ಮತ್ತು ಡಿಸಿಪ್ಲಿನ್ ನಾಯಕಿಯಾಗಿ ೯ನೇ ತರಗತಿ ವಿದ್ಯಾರ್ಥಿನಿ ಅಲೀನಾ ಖಾನ್ ಆಯ್ಕೆಯಾದರು.

ಶಾಲೆಯ ಶಿಕ್ಷಕರು, ಮುಖ್ಯ ಶಿಕ್ಷಕರು ಮತ್ತು ಶಾಲಾ ಮ್ಯಾನೇಜ್ಮೆಂಟ್ ವತಿಯಿಂದ ವಿಜೇತ ಸ್ಪರ್ಧಿಗಳಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ತಮಗೆ ಸಿಕ್ಕಿರುವ ಸ್ಥಾನಕ್ಕೆ ಮಹತ್ವ ಕೊಟ್ಟು ಆಡಳಿತ ಪಕ್ಷವಾಗಿ ದಕ್ಷತೆಯಿಂದ ಕಾರ್ಯ ನಿರ್ವಹಿಸಬೇಕೆಂದು ತಿಳಿಸಲಾಯಿತು.

ಶಾಲಾ ಚುನಾವಣಾ ಪ್ರಕ್ರಿಯೆ ನಡೆದಿದ್ದು ಚುನಾವಣಾ ಪ್ರಕ್ರಿಯೆಯ ಉಸ್ತುವಾರಿಯನ್ನು ವಹಿಸಿಕೊಂಡಿದ್ದ ಮುಖ್ಯ ಶಿಕ್ಷಕ ಯೋಗೀಶ್, ಕ್ರಿಷ್ಟಿ ಪ್ರಭ ಮತ್ತು ದಿವ್ಯಶ್ರಿ ಇದ್ದರು.

Election to select leaders in model school

 

 

Share

Leave a comment

Leave a Reply

Your email address will not be published. Required fields are marked *

Don't Miss

ಮಕ್ಕಳಪ್ರತಿಭೆ ರಾಷ್ಟ್ರಮಟ್ಟದಲ್ಲಿ ಬೆಳಗಿಸಿದ ಕ್ರೀಡಾ ಶಿಕ್ಷಕ

ತರೀಕೆರೆ: ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ವಿಷಯಗಳ ಜೊತೆಗೆ ದೈಹಿಕ ಶಿಕ್ಷಣವು ಬಹು ಮುಖ್ಯ. ಮಕ್ಕಳ ಆಸಕ್ತಿ ಗಮನಿಸಿ ಪ್ರೋತ್ಸಾಹ ನೀಡುವುದರ ಜೊತೆಗೆ ತರಭೇತಿ ನೀಡಿದರೆ ತಾಲ್ಲೂಕು, ಜಿಲ್ಲೆ,ರಾಜ್ಯ, ರಾಷ್ಟ್ರ ಮಟ್ಟದಲ್ಲಿ ಕೀರ್ತಿ ಗಳಿಸಲು...

ಮೂರು ಗುಂಪುಗಳಲ್ಲಿ 40ಕ್ಕೂ ಅಧಿಕ ಕಾಡಾನೆಗಳು ದಾಳಿ

ಮೂಡಿಗೆರೆ: ತಾಲ್ಲೂಕಿನ ಗೋಣಿಬಿಡು ಹೋಬಳಿಯ ಜಿ.ಹೊಸಳ್ಳಿ, ಹೊಸಪುರ, ಕಸ್ಕೇಬೈಲ್ ಸೇರಿದಂತೆ ವಿವಿಧ ಗ್ರಾಮಗಳಲ್ಲಿ ಮೂರು ಗುಂಪುಗಳಲ್ಲಿ ಸುಮಾರು 40ಕ್ಕೂ ಅಧಿಕ ಕಾಡಾನೆಗಳು ದಾಳಿ ನಡೆಸಿದ್ದು ಭಯದ ವಾತಾವರಣ ಸೃಷ್ಟಿಯಾಗಿದೆ. ಒಂದು ತಿಂಗಳಿನಿಂದ...

Related Articles

ಫೋಟೋ-ವಿಡಿಯೋಗ್ರಫಿ ಕೆನಾನ್ ಕ್ಯಾಮಾರಗಳು ಶ್ರೇಷ್ಠ

ಚಿಕ್ಕಮಗಳೂರು:  ಪೋಟೋಗ್ರಫಿ ಮತ್ತು ವೀಡಿಯೋಗ್ರಫಿ ಕ್ಷೇತ್ರದಲ್ಲಿ ಹೊಸ ಆಯಾಮ ವನ್ನು ಸೃಷ್ಟಿಸುವ ಕೆನಾನ್ ಕ್ಯಾಮರಾಗಳು ಛಾಯಾಗ್ರಾಹಕರ...

ಕೊಳಮಗೆ ಬಳಿಯ ಭದ್ರಾ ನದಿಗೆ ಬಿದ್ದ ಪಿಕ್‌ಅಪ್: ಯುವಕ ಸಾವಿನ ಶಂಕೆ

ಕಳಸ: ಕಳಸ-ಕಳಕೋಡು ರಸ್ತೆಯ ಕೊಳಮಗೆ ಬಳಿ ಭದ್ರಾನದಿಗೆ ಗುರುವಾರ ಮಧ್ಯಾಹ್ನ ಪಿಕ್‌ಅಪ್ ವಾಹನ ಬಿದ್ದಿದ್ದು, ಯುವಕನೊಬ್ಬ...

ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ

ಕೊಪ್ಪ : ರೈತರಿಗೆ ರಸಗೊಬ್ಬರ ಕೊಡಲು ಕಾಂಗ್ರೆಸ್ ಸರ್ಕಾರಕ್ಕೆ ಸಾಧ್ಯವಾಗುತ್ತಿಲ್ಲ. ಒಂದು ಚೀಲ ಗೊಬ್ಬರ ಬೇಕು...

ಅರಣ್ಯ ಸಚಿವರಿಗೆ ಮಲ್ನಾಡು ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ

ಚಿಕ್ಕಮಗಳೂರು: ಅರಣ್ಯ ಸಚಿವರಿಗೆ ಮಲ್ನಾಡು ಭಾಗಕ್ಕೂ ಹಾಗೂ ಬಯಲು ಸೀಮೆಗೂ ಇರೋ ವ್ಯತ್ಯಾಸ ಗೊತ್ತಿಲ್ಲ. ನಿರಂತರವಾಗಿ...