Home ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ ವಿಭಾಗದ ಕೇಂದ್ರ ಉದ್ಘಾಟನೆ
HomechikamagalurLatest Newsnamma chikmagalur

ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ ವಿಭಾಗದ ಕೇಂದ್ರ ಉದ್ಘಾಟನೆ

Share
Share

ಚಿಕ್ಕಮಗಳೂರು: ವೈದ್ಯಕೀಯ ಲೋಕದಲ್ಲಿ ಚಿಕಿತ್ಸೆಗೆ ಅನುಕೂಲವಾಗಲು ಹೊಸ ವಿಭಾ ಗಗಳನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ರೋಗಿಗಳ ಸಮಗ್ರ ಚಿಕಿತ್ಸೆಗೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಶಾಸಕ ಹೆಚ್.ಡಿ.ತಮ್ಮಯ್ಯ ಹೇಳಿದರು.

ನಗರದ ಆಶ್ರಯ ಆಸ್ಪತ್ರೆಯಲ್ಲಿ ನರವಿಜ್ಞಾನ ವಿಭಾಗದ ಕೇಂದ್ರವನ್ನು ಸೋಮವಾರ ಉದ್ಘಾಟಿಸಿ ಮಾತ ನಾಡಿದ ಅವರು ಆಧುನಿಕತ ಜಗತ್ತಿನಲ್ಲಿ ರೋಗಿಗಳ ಆರೋಗ್ಯ ಸುಧಾರಿಸಲು ಹೊಸ ತಂತ್ರಜ್ಞಾನದಡಿ ಹೆಜ್ಜೆ ಇಡುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಜಿಲ್ಲೆಯಲ್ಲೇ ಮೊಟ್ಟಮೊದಲ ರೋಗಿಗಳ ಅನುಕೂಲಕ್ಕೆ ಸಕಲ ಸಲವತ್ತು ಹಾಗೂ ವ್ಯವಸ್ಥೆಯಿತ ರೂಪ ದಲ್ಲಿ ಆರೈಕೆ ನೀಡುತ್ತಿರುವ ಆಶ್ರಯ ಆಸ್ಪತ್ರೆ ಎಂದ ಅವರು ಇದೀಗ ನೂತನವಾಗಿ ನರರೋಗಿಗಳ ಚಿಕಿತ್ಸೆಗೆ ಅನುಕೂಲವಾಗಲು ನರವಿಜ್ಞಾನ ಕೇಂದ್ರ ಸ್ಥಾಪಿಸಿರುವುದು ಜನತೆಗೆ ಬಹಳಷ್ಟು ಒಳಿತಾಗಲಿದೆ ಎಂದರು.

ಜನಸಾಮಾನ್ಯರು ಆರೋಗ್ಯದ ವಿಷಯದಲ್ಲಿ ಅಸಡ್ಡೆ ವಹಿಸದೇ ಜವಾಬ್ದಾರಿಯಾಗಿ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯ. ಆದರೆ ಆಕಸ್ಮಿಕವಾಗಿ ಜರುಗುವ ಕೆಲವು ಅನಾರೋಗ್ಯ ಸಮಸ್ಯೆಗಳಿಗೆ ಸ್ಥಳೀಯವಾಗೇ ಚಿಕಿತ್ಸೆಗಳು ಲಭ್ಯವಾದರೆ ವ್ಯಕ್ತಿಯ ಜೀವ ಉಳಿಸಲು ಸಾಧ್ಯವಾಗಲಿದೆ ಎಂದು ಹೇಳಿದರು.

ಮನುಷ್ಯನ ಪ್ರಾಣ ಉಳಿಸುವ ವೈದ್ಯರನ್ನು ದೇವರಿಗೆ ಒಲಿಸುತ್ತೇವೆ. ವೈದ್ಯರು ಹಣ ಗಳಿಕೆ ಎನ್ನದೇ ಸೇವಾ ಮನೋಭಾವದಲ್ಲಿ ಕಾರ್ಯನಿರ್ವಹಿಸಬೇಕು. ಈ ಹಿಂದೆ ಕೋವಿಡ್ ಸಮಯದಲ್ಲಿ ಪ್ರಾಣದ ಹಂಗು ತೊರೆದು ಕೆಲಸ ನಿರ್ವಹಿಸಿರುವ ವೈದ್ಯರು, ದಾದಿಯರು ಸೇವೆ ಮರೆಯುವಂತಿಲ್ಲ ಎಂದು ಸ್ಮರಿಸಿದರು.

ಜಿಲ್ಲಾ ಆರೋಗ್ಯಾಧಿಕಾರಿ ಡಾ|| ಅಶ್ವಥ್‌ಬಾಬು ಮಾತನಾಡಿ ಬಹುತೇಕ ಚಿಕಿತ್ಸೆಯ ಎಲ್ಲಾ ವಿಭಾಗಗಳ ನ್ನು ಸ್ಥಾಪಿಸುವ ಮೂಲಕ ಆಶ್ರಯ ಆಸ್ಪತ್ರೆ ಮಲ್ಟಿಸ್ಪೆಷಾಲಿಟಿಯಾಗಿ ಪರಿವರ್ತನೆಯಾಗಿದೆ. ಜೊತೆಗೆ ಸ್ವಚ್ಚತೆ, ವೈದ್ಯರು, ಸಿಬ್ಬಂದಿಗಳ ಸೇವೆ ಉತ್ತಮವಾಗಿದ್ದು ಮುಂದಿನ ದಿನಗಳಲ್ಲಿ ಇನ್ನಷ್ಟು ಪ್ರಗತಿ ಸಾಧಿಸಲಿ ಎಂದು ಆಶಿಸಿದರು.

ನರರೋಗ ತಜ್ಞ ಡಾ|| ಎಂ.ಎಸ್.ಸುಮುಖ್ ಮಾತನಾಡಿ ನರರೋಗ ಎಂಬುದು ಬಹುದಿನಗಳ ಕಾಡು ವ ಕಾಯಿಲೆಯಾದ ಕಾರಣ ದೂರದೂರಿಗಳಿಗೆ ಚಿಕಿತ್ಸೆ ತೆರಳಲು ಜಿಲ್ಲೆಯ ಜನತೆಗೆ ಕಷ್ಟಸಾಧ್ಯ. ತಾವು ಕೂ ಡಾ ಇದೇ ಜಿಲ್ಲೆಯವರಾದ ಕಾರಣ ನರರೋಗ ಸಮಸ್ಯೆಗಳಿಗೆ ಚಿಕಿತ್ಸೆ ನೀಡಿದರೆ ಸ್ಥಳೀಯರಿಗೆ ಅನುಕೂಲ ವಾಗಲಿದೆ ಎಂದು ತಿಳಿಸಿದರು

ಆಶ್ರಯ ಆಸ್ಪತ್ರೆ ಸಂಸ್ಥಾಪಕ ಡಾ|| ಡಿ.ಎಲ್.ವಿಜಯ್‌ಕುಮಾರ್ ಮಾತನಾಡಿ ಪ್ರಸ್ತುತ ಆಸ್ಪತ್ರೆ ೮೮ರ ಕಾಲ ಘಟ್ಟದಲ್ಲಿ ಕೇವಲ ೧೫ ಬೆಡ್‌ಗಳೊಂದಿಗೆ ಆರಂಭಿಸಿ ಇದೀಗ ೧೫೦ ಬೆಡ್‌ಗಳು ಸ್ಥಾಪಿಸಿ ಚಿಕಿತ್ಸೆ ಪೂರಕವಾಗಿದೆ. ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಾಗಿ ಪರಿವರ್ತನೆಯಾಗುವ ಮೂಲಕ ಜನತೆಯ ಅವಶ್ಯಕತೆಗೆ ಅನುಗುಣವಾ ಗಿ ಚಿಕಿತ್ಸೆ ನೀಡುತ್ತಿದೆ ಎಂದರು.

ಆಸ್ಪತ್ರೆಯ ಡಾ|| ಅನಿಕೇತ್ ಮಾತನಾಡಿ ಆಸ್ಪತ್ರೆಯಲ್ಲಿ ರೋಗಿಗಳ ಚಿಕಿತ್ಸೆಗಳ ಅನುಕೂಲಕ್ಕೆ ಒಟ್ಟು ೧೬ ವಿಭಾಗಗಳು ಚಾಲ್ತಿಯಲ್ಲಿದ್ದು, ಇದೀಗ ಸೂಪರ್ ಸ್ಪೆಷಾಲಿಟಿಯಡಿ ೯ನೇ ವಿಭಾಗವಾಗಿ ನರವಿಜ್ಞಾನ ಕೇಂದ್ರ ಸ್ಥಾಪಿಸುವ ಮುಖೇನಾ ಆಸ್ಪತ್ರೆ ಹಂತ ಹಂತವಾಗಿ ಮೇಲ್ದಜೇಗೇರುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯೆ ಎ.ವಿ.ಗಾಯತ್ರಿ ಶಾಂತೇಗೌಡ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ಮೊಹಮ್ಮದ್ ನಯಾಜ್, ಆಸ್ಪತ್ರೆಯ ಸಂಸ್ಥಾ ಪಕರಾದ ಡಾ|| ಶುಭ ವಿಜಯ್, ಆಡಳಿತ ವ್ಯವಸ್ಥಾಪಕ ಜಿ.ಪುರುಷೋತ್ತಮ್, ವಿವಿಧ ವಿಭಾಗದ ವೈದ್ಯಾಧಿಕಾರಿಗಳು, ಸಿಬ್ಬಂದಿ ವರ್ಗದವರು ಇದ್ದರು.

Neurology Department Center inaugurated at Ashraya Hospital

Share

Leave a comment

Leave a Reply

Your email address will not be published. Required fields are marked *

Don't Miss

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ ಪರಿಷತ್ ಸ್ಥಾನಕ್ಕೆ ಆಯ್ಕೆಯಾಗಿದ್ದರ ಬಗ್ಗೆ ಎದುರಾಳಿ ಪಕ್ಷದ ಗಾಯಿತ್ರಿ ಶಾಂತೇಗೌಡ ಹೈಕೋರ್ಟಿನಲ್ಲಿ ತಕರಾರು ಸಲ್ಲಿಸಿದ್ದು...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ ರೂ.ಗಳ ಹಗರಣ ನಡೆಸಿರುವ ಪ್ರಕರಣವನ್ನು ಸಿಬಿಐ ಅಥವಾ ಇಡಿ ತನಿಖೆಗೆ ಒಪ್ಪಿಸಬೇಕೆಂದು ಜಿಲ್ಲಾ ಬಿಜೆಪಿ...

Related Articles

ವಿದ್ಯಾರ್ಥಿ ಹೋರಾಟವನ್ನು ಬೆಂಬಲಿಸಿ ಸಮಾನ ಮನಸ್ಕರ ಪ್ರತಿಭಟನೆ

ಚಿಕ್ಕಮಗಳೂರು : ನೀಟ್ ಪದೆಶ್ನೆ ಪತ್ರಿಕೆ ಸೋರಿಕೆ ತಡೆಯುವಲ್ಲಿ ವಿಫಲವಾಗಿರುವ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ...

ಸಿಐಡಿ ಪೊಲೀಸ್ ರಿಂದ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿ ವಶ

ಚಿಕ್ಕಮಗಳೂರು : ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳ...

ಸಖರಾಯಪಟ್ಟಣದಲ್ಲಿ ಹಣದ ವಿಷಯಕ್ಕೆ ಸ್ನೇಹಿತನೇ ಕೊಲೆ

ಕಡೂರು: ಅಪಘಾತದಲ್ಲಿ ಯುವಕ ಸಾವನ್ನಪ್ಪಿದ್ದ ಎಂದು ಭಾವಿಸಿದ್ದ ಪ್ರಕರಣ ತಿರುವು ಪಡೆದುಕೊಂಡಿದ್ದು, ಹಣದ ವಿಷಯಕ್ಕೆ ಸ್ನೇಹಿತನೇ...

ಸಹಾನುಭೂತಿ ಇಲ್ಲದ ಧರ್ಮೇಂದ್ರ ಪ್ರದಾನ್ ರಾಜೀನಾಮೆ ನೀಡಲಿ

ಚಿಕ್ಕಮಗಳೂರು: ವಿದ್ಯಾರ್ಥಿಗಳು ಹಾಗೂ ಯುವ ಜನತೆಯ ಬಗ್ಗೆ ಸಹಾನುಭೂತಿ ಇಲ್ಲದ ದೇಶದ ಶಿಕ್ಷಣ ಸಚಿವ ಧರ್ಮೇಂದ್ರ...