Home namma chikmagalur ರಾಜ್ಯಸರ್ಕಾರದ ವೈಫಲ್ಯತೆ ಖಂಡಿಸಿ ಜೆಡಿಎಸ್ ಪ್ರತಿಭಟನೆ
namma chikmagalurchikamagalurHomeLatest News

ರಾಜ್ಯಸರ್ಕಾರದ ವೈಫಲ್ಯತೆ ಖಂಡಿಸಿ ಜೆಡಿಎಸ್ ಪ್ರತಿಭಟನೆ

Share
Share

ಚಿಕ್ಕಮಗಳೂರು: ರಾಜ್ಯಸರ್ಕಾರದ ಆಡಳಿತ ವೈಫಲ್ಯತೆ ಹಾಗೂ ಹಲವು ಇಲಾಖೆಗಳಲ್ಲಿ ಭಾರೀ ಭ್ರಷ್ಟಚಾರ ಎಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರುಗಳು ಪಕ್ಷದ ಕಚೇರಿ ಮುಂಭಾಗದಲ್ಲಿ ಪಂಜಿನ ಮೆರವಣಿಗೆ ನಡೆಸಿ ಪ್ರತಿಭಟನೆ ನಡೆಸಿದರು.

ಈ ಕುರಿತು ಮಾತನಾಡಿದ ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಬೋಜೇಗೌಡ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಆಡಳಿತಕ್ಕೆ ಬಂದ ದಿನದಿಂದಲೂ ಭ್ರಷ್ಟಚಾರ ಮುಗಿಲುಮುಟ್ಟಿದೆ. ಭ್ರಷ್ಟಚಾರದಲ್ಲಿ ಸಂಪೂರ್ಣವಾ ಗಿ ಮುಳುಗಿರುವ ರಾಜ್ಯಸರ್ಕಾರ ಕೂಡಲೇ ಅಧಿಕಾರವನ್ನು ತ್ಯಜಿಸಬೇಕಿದೆ ಎಂದು ಒತ್ತಾಯಿಸಿದರು.

ಕಾಂಗ್ರೆಸ್ ಸ್ವಪಕ್ಷ ಶಾಸಕರಿಂದಲೇ ಸರ್ಕಾರದ ಭ್ರಷ್ಟಚಾರವನ್ನು ಬಯಲಿಗೇಳೆಯುವ ಕ್ರಮವಾಗಿದೆ. ಸ ರ್ಕಾರದ ವಾಲ್ಮೀಕಿ ಹಗರಣ ಕೋಟ್ಯಾಂತರ ಹಣವನ್ನು ದುರುಪಯೋಗ ಮಾಡಿಕೊಂಡಿರುವ ವಿರುದ್ಧ ವಿ ಧಾನ ಪರಿಷತ್ ಸಭೆಯೊಳಗೆ ಹೋರಾಟ ರೂಪಿಸಿದ ಪರಿಣಾಮ ಸಂಬಂಧಿಸಿದ ಸಚಿವರು ರಾಜೀನಾಮೆ ನೀಡಿದ್ದಾರೆ ಎಂದರು.

ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಮಾತನಾಡಿ ರಾಜ್ಯನಾಯಕರ ಆದೇಶದನ್ವಯ ಜಿಲ್ಲೆಯಾದ್ಯಂತ ಭ್ರಷ್ಟ ರಾಜ್ಯಸರ್ಕಾರದ ವಿರುದ್ಧ ಅಭಿಯಾನ ಹಮ್ಮಿಕೊಂಡು ಎಳೆ ಎಳೆಯಾಗಿ ಬಿಚ್ಚಿಸುವ ಕೆಲಸ ಜೆಡಿಎಸ್ ಕಾರ್ಯಕರ್ತರು ಮಾಡಲಿದ್ದಾರೆ. ಜೊತೆಗೆ ಯುವನಾಯಕ ನಿಖಿಲ್‌ಕುಮಾರಸ್ವಾಮಿ ಜನಾಂದೋಲನ ಹಾ ಗೂ ಸದಸ್ಯತ್ವ ಅಭಿಯಾನ ನಡೆಸಿ ಪಕ್ಷವನ್ನು ಸಂಘಟಿಸುವ ಕೆಲಸ ಮಾಡಿ ಕಾರ್ಯಕರ್ತರಲ್ಲಿ ಹುರುಪು ತು ಂಬುತ್ತಿದ್ದಾರೆ ಎಂದರು.

ನಗರಸಭಾ ಸದಸ್ಯ ಎ.ಸಿ.ಕುಮಾರಗೌಡ ಮಾತನಾಡಿ ವಾಲ್ಮೀಕಿ, ಮುಡ, ಪಡಿತರ ಚೀಟಿ ಹಗರಣ ಮ ತ್ತು ವಸತಿ ಯೋಜನೆಯ ಭ್ರಷ್ಟಚಾರ ಸೇರಿದಂತೆ ಸಾಲು ಸಾಲು ಹಗರಣಗಳು ರಾಜ್ಯಸರ್ಕಾರದಲ್ಲಿ ಕೇಳಿ ಬರುತ್ತಿದೆ. ಆರ್ಥಿಕ ಸಬಲರಾದವರಿಗೆ ಮಾತ್ರ ವಸತಿ ಎಂಬ ನಿಯಮ ರೂಫಿಸಿ ಬಡವರನ್ನು ಕೆಳತಳ್ಳುತ್ತಿದೆ ಎಂದು ದೂರಿದರು.

ಈ ಸಂದರ್ಭದಲ್ಲಿ ನಗರಸಭಾ ಸದಸ್ಯರಾದ ಗೋಪಿ, ಶೀಲಾ ದಿನೇಶ್, ಮಾಜಿ ಸದಸ್ಯ ದಿನೇಶ್, ಜೆಡಿ ಎಸ್ ಜಿಲ್ಲಾ ಉಪಾದ್ಯಕ್ಷ ಲಕ್ಷ್ಮಣ್‌ಗೌಡ, ತಾ.ಪಂ. ಮಾಜಿ ಸದಸ್ಯ ಆನಂದ್‌ನಾಯ್ಕ್, ಮುಖಂಡರುಗಳಾದ ಡಿ.ಜೆ.ಸುರೇಶ್, ದೇವರಾಜ್‌ಅರಸ್, ನಂದೀಶ್, ಮೂರ್ತಿ, ಚೇತನ್, ಸಿದ್ದಿಕ್, ಜಾಕರೀಯಾ ಜಾಕೀರ್, ಈಶ್ವರೇಗೌಡ, ರವಿ, ಸತೀಶ್, ಜಯಂತಿ, ರತ್ನ ಮತ್ತಿತರರಿದ್ದರು.

JDS protests condemning the failure of the state government

 

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...