ಚಿಕ್ಕಮಗಳೂರು: ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲೆ ಪ್ರವಾಸಿಗರು ಬಡಿದಾಡಿಕೊಂಡಿರುವ ಘಟನೆ ಮೂಡಿಗೆರೆ ಪಟ್ಟಣದ ಬಸ್ ನಿಲ್ದಾಣ ರಸ್ತೆಯಲ್ಲಿ ಭಾನುವಾರ ರಾತ್ರಿ ನಡೆದಿದೆ.
ಮೂವರು ಪ್ರವಾಸಿಗರು ಹೊಡೆದಾಡಿಕೊಳ್ಳುತ್ತಿರುವುದು ಕಂಡ ಇಲ್ಲಿನ ಜನರು ಗಲಾಟೆ ಬಿಡಿಸಲು ಎಷ್ಟೇ ಪ್ರಯತ್ನಪಟ್ಟರು ಪ್ರಯೋಜನವಾಗಿಲ್ಲ. ಕಂಠಪೂರ್ತಿ ಕುಡಿದು ನಶೆಯಲ್ಲಿ ಹೊಡೆದಾಡಿಕೊಂಡಿದ್ದಾರೆ. ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿ ದ್ದು, ಪೊಲೀಸರು ಗಲಾಟೆ ಮಾಡಿಕೊಂಡ ಪ್ರವಾಸಿಗರ ವಿರುದ್ಧ ಕ್ರಮ ಕೈಗೊಂಡಿದ್ದಾರೆ.
ಇತ್ತೀಚಿನ ದಿನಗಳಲ್ಲಿ ಚಿಕ್ಕಮಗಳೂರು ಜಿಲ್ಲೆಗೆ ಹೆಚ್ಚಿನ ಪ್ರವಾಸಿಗರು ಆಗಮಿಸುತ್ತಿದ್ದು, ಕೆಲವು ಪ್ರವಾಸಿಗರ ವರ್ತನೆಯಿಂದ ಇಲ್ಲಿನ ಸ್ಥಳೀಯರಿಗೆ ಕಿರಿಕಿರಿ ಉಂಟು ಮಾಡುತ್ತಿದೆ. ಇತ್ತೀಚೆಗೆ ಮಲೆನಾಡು ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಚಾರ್ಮಾ ಡಿ ಘಾಟಿ ಪ್ರದೇಶದಲ್ಲಿ ವಾಹನಗಳನ್ನು ನಿಲ್ಲಿಸಿಕೊಂಡು ಸೆಲ್ಫಿ ತೆಗೆಯುವುದು, ಕುಡಿದ ಅಮಲಿನಲ್ಲಿ ನಡುರಸ್ತೆಯಲ್ಲೇ ನೃತ್ಯ ಮಾಡುವುದು ನಡೆಯುತ್ತಿದೆ.
ಪ್ರವಾಸಿತಾಣಗಳಲ್ಲಿ ಮಧ್ಯ ಸೇವಿಸುವುದು, ವಾಹನಗಳಲ್ಲಿ ಚಲಿಸುವಾಗ ಜೋರಾಗಿ ಕಿರುಚಿಕೊಳ್ಳುವುದು ಹಾಗೂ ಮದ್ಯದ ಅಮಲಿನಲ್ಲಿ ಬಡಿದಾಡಿಕೊಳ್ಳುವ ಇಂತಹ ಘಟನೆಗಳು ಸ್ಥಳೀಯರಿಗೆ ಕಿರಿಕಿರಿ ಉಂಟು ಮಾಡುತ್ತಿದ್ದು, ಪುಂಡಾಟ ಮೆರೆಯುವ ಪ್ರವಾಸಿಗರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಇಲ್ಲಿನ ಜನರು ಆಗ್ರಹಿಸಿದ್ದಾರೆ.
Drunk tourists clash in Mudigere
Leave a comment