Home ಸುಪ್ರಸಿದ್ಧ ಪ್ರವಾಸಿ ತಾಣವಾದ ಎತ್ತಿನಭುಜದಲ್ಲಿ ಚಾರಣಕ್ಕೆ ನಿಷೇಧ
HomechikamagalurLatest Newsnamma chikmagalur

ಸುಪ್ರಸಿದ್ಧ ಪ್ರವಾಸಿ ತಾಣವಾದ ಎತ್ತಿನಭುಜದಲ್ಲಿ ಚಾರಣಕ್ಕೆ ನಿಷೇಧ

Share
Share

ಮೂಡಿಗೆರೆ: ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ಮುಂದುವರೆದಿರುವ ಹಿನ್ನೆಲೆಯಲ್ಲಿ ಮೂಡಿಗೆರೆ ತಾಲೂಕಿನ ಸುಪ್ರಸಿದ್ಧ ಪ್ರವಾಸಿ ತಾಣವಾದ ಎತ್ತಿನಭುಜದಲ್ಲಿ ಚಾರಣವನ್ನು ಅರಣ್ಯ ಇಲಾಖೆ ತಾತ್ಕಾಲಿಕವಾಗಿ ನಿಷೇಧಿಸಿದೆ.

ಪ್ರವಾಸಿಗರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ. 7 ಕಿ.ಮೀ. ಚಾರಣದ ಮೂಲಕ ಎತ್ತಿನಭುಜದ ಸೌಂದರ್ಯ ಸವಿಯುತ್ತಿದ್ದ ಪ್ರವಾಸಿಗರಿಗೆ ಈಗ ಒಂದು ತಿಂಗಳ ಕಾಲ ಬ್ರೇಕ್ ನೀಡಲಾಗಿದೆ.

ಈ ಪ್ರದೇಶದಲ್ಲಿ ಧಾರಕಾರ ಮಳೆಯಾಗುತ್ತಿರುವುದರಿಂದ ರಸ್ತೆಗಳು ಜಾರುತ್ತಿದ್ದು ಕೆಲ ಮರಗಳು ಬೀಳುವ ಸ್ಥಿತಿಯಲ್ಲಿವೆ ಅಲ್ಲದೇ ಇಲ್ಲಿ ಕಾಡು ಪ್ರಾಣಿಗಳು ಹೆಚ್ಚಾಗಿರುವುದರಿಂದ ಅನಾಹುತ ಸಂಭವಿಸುವ ಸಾಧ್ಯತೆ ಹೆಚ್ಚು ಆದರಿಂದ ಇಂದಿನಿಂದ ಒಂದು ತಿಂಗಳ ಕಾಲ ಚಾರಣ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ.

ಜೊತೆಗೆ ಎತ್ತಿನಭುಜ ಪ್ರದೇಶದಲ್ಲಿ ಪ್ರವಾಸಿಗರನ್ನು ತಡೆಯಲು ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಲು ಸೂಚನೆ ನೀಡಲಾಗಿದೆ. ಪ್ರವಾಸಿಗರ ಸುರಕ್ಷತೆಗೆ ಪ್ರಾಮುಖ್ಯತೆ ನೀಡಿರುವ ಅರಣ್ಯ ಇಲಾಖೆಯ ಈ ಕ್ರಮಕ್ಕೆ ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದು, ಈ ಭಾಗದಲ್ಲಿ ಚಾರಣವನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಆಗ್ರಹಿಸುತ್ತಿದ್ದರು.

Trekking banned in Yettinabhuja a popular tourist destination

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...