Home namma chikmagalur ಸರ್ಕಾರಿ ಉದ್ಯೋಗದಲ್ಲಿ ನಿವೃತ್ತಿ-ವರ್ಗಾವಣೆ ಸಹಜ ಪ್ರಕ್ರಿಯೆ
namma chikmagalurchikamagalurHomeLatest News

ಸರ್ಕಾರಿ ಉದ್ಯೋಗದಲ್ಲಿ ನಿವೃತ್ತಿ-ವರ್ಗಾವಣೆ ಸಹಜ ಪ್ರಕ್ರಿಯೆ

Share
Share

ಚಿಕ್ಕಮಗಳೂರು: ಸರ್ಕಾರಿ ಉದ್ಯೋಗದಲ್ಲಿ ನಿವೃತ್ತಿ ವರ್ಗಾವಣೆ ಸಹಜ ಪ್ರಕ್ರಿಯೆ ಎಂದು ನಗರಸಭೆ ಪ್ರಭಾರಿ ಅಧ್ಯಕ್ಷೆ ಅನುಮಧುಕರ್ ತಿಳಿಸಿದರು.

ಅವರು ನಗರಸಭೆ ಆವರಣದಲ್ಲಿ ಏರ್ಪಡಿಸಲಾಗಿದ್ದ ಮೈಸೂರು ಜಿಲ್ಲೆ ಬೋಗಾದಿ ಪಟ್ಟಣ ಪಂಚಾಯಿತಿಗೆ ವರ್ಗಾವಣೆಯಾಗಿರುವ ನಗರಸಭೆಯ ಕಂದಾಯ ನಿರೀಕ್ಷಕರಾದ ಶಿವಾನಂದ ಹಾಗೂ ದ್ವಿತೀಯ ದರ್ಜೆ ಸಹಾಯಕರಾಗಿ ನಿವೃತ್ತಿ ಹೊಂದಿದ ಇಬ್ರಾಹಿಂ ಇವರುಗಳಿಗೆ ಬೀಳ್ಕೊಡುಗೆ ಸಮಾರಂಭದಲ್ಲಿ ಗೌರವಿಸಿ ಮಾತನಾಡಿದರು.

ನಗರಸಭೆಯ ಈ ಇಬ್ಬರು ನೌಕರರು ಇಬ್ರಾಹಿಂ ನಿವೃತ್ತಿಯಾದರೆ ಕಂದಾಯ ನಿರೀಕ್ಷಕ ಶಿವಾನಂದ್ ಅವರು ಮೈಸೂರು ನಗರ ಪಟ್ಟಣ ಪಂಚಾಯಿತಿಗೆ ವರ್ಗಾವಣೆಯಾಗಿರುವುದು ತುಂಬಾ ಬೇಸರದ ಸಂಗತಿ ಎಂದರು.
ಪೌರಾಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ಸರ್ಕಾರಿ ನೌಕರರಿಗೆ ವರ್ಗಾವಣೆ, ನಿವೃತ್ತಿ ಬಯಸದೇ ಬಂದ ಭಾಗ್ಯ ಎಂದು ಹೇಳಿದರು.

ವರ್ಗಾವಣೆಯಾಗಿರುವ ಶಿವಾನಂದ ಅವರು ದೊಡ್ಡ ಜಿಲ್ಲೆಯ ಪಟ್ಟಣ ಪಂಚಾಯಿತಿಗೆ ಹೋಗುತ್ತಿರುವುದು ಸಂತಸ ತಂದಿದೆ. ಜೊತೆಗೆ ಒಳ್ಳೆಯ ಕೆಲಸದ ಮೂಲಕ ಜನಸಾಮಾನ್ಯರ ಮೆಚ್ಚುಗೆಗೆ ಪಾತ್ರರಾಗಲಿ ಎಂದು ಶುಭ ಹಾರೈಸಿದರು.
ಜನರ ಮೆಚ್ಚುಗೆಗೆ ಪಾತ್ರರಾಗಿ ಕೆಲಸ ಮಾಡುವ ನೌಕರರಿಗೆ ಸದಾ ಅವರ ಆಶೀರ್ವಾದ ಇರುತ್ತದೆ. ಮತ್ತೊಮ್ಮೆ ಅವಕಾಶ ಸಿಕ್ಕರೆ ಪುನಃ ಈ ನಗರಸಭೆಗೆ ಮರಳಿ ಬರುವಂತೆ ಸಲಹೆ ನೀಡಿದರು.

ಇಂದು ನಿವೃತ್ತಿಯಾಗುತ್ತಿರುವ ಇಬ್ರಾಹಿಂರವರು ನಗರಸಭೆಯೊಂದಿಗೆ ಉತ್ತಮ ಸೇವೆಯೊಂದಿಗೆ ಎಲ್ಲರ ಒಡನಾಡಿಯಾಗಿದ್ದರು ಎಂದು ಬಣ್ಣಿಸಿದರು.

ನಿಸ್ವಾರ್ಥದಿಂದ ಒಳ್ಳೆಯ ಕೆಲಸ ಮಾಡುವ ನೌಕರರಿಗೆ ಕೆಡುಕನ್ನು ಬಯಸಿ ಬಲಿಪಶು ಮಾಡಬೇಡಿ, ಎಲ್ಲಾ ನೌಕರರು ಒಗ್ಗಟ್ಟಿನಿಂದ ಸರ್ಕಾರಿ ಸೇವೆ ಸಲ್ಲಿಸುವ ಮೂಲಕ ಒಳ್ಳೆಯ ಸಮಾಜ ನಿರ್ಮಾಣಕ್ಕೆ ನಾಂದಿಯಾಗೋಣ ಎಂದರು.

ವರ್ಗಾವಣೆಗೊಂಡಿರುವ ಕಂದಾಯ ನಿರೀಕ್ಷಕ ಶಿವಾನಂದ ಅವರು ಗೌರವವನ್ನು ಸ್ವೀಕರಿಸಿ ಮಾತನಾಡಿ, ನನಗೆ ವರ್ಗಾವಣೆಯಾಗಿರುವುದು ಸಂತೋಷ ಒಂದೆಡೆಯಾದರೆ ದುಖಃವೂ ಆಗುತ್ತಿದೆ. ಹಲವು ವರ್ಷಗಳಿಂದ ನಗರಸಭೆಯಲ್ಲಿ ಸೇವೆ ಸಲ್ಲಿಸಿರುವುದು ತೃಪ್ತಿ ಮತ್ತು ಖುಷಿ ತಂದಿದೆ ಎಂದು ಹೇಳಿದರು.

೨೦೧೭ ರಲ್ಲಿ ನಗರಸಭೆಗೆ ಬಂದಾಗ ಸ್ನೇಹಿತರು ಸಹಕರಿಸಿ ಮಾರ್ಗದರ್ಶನ ನೀಡಿ ಸರ್ಕಾರಿ ಸೇವೆಯನ್ನು ಸಮರ್ಪಕವಾಗಿ ಮಾಡಲು ಜೀವ ತುಂಬಿದರು ಎಂದು ಸ್ಮರಿಸಿದರು. ನಗರಸಭೆ ನೌಕರನಾಗಿ ಒಬ್ಬರಿಂದ ಸಾರ್ವಜನಿಕರ ಕೆಲಸ ಮಾಡಲು ಸಾಧ್ಯವಿಲ್ಲ, ಎಲ್ಲಾ ಸಿಬ್ಬಂದಿ ಒಗ್ಗಟ್ಟಿನಿಂದ ಕೂಡಿದಾಗ ಮಾತ್ರ ಸೇವೆಯಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದರು.

ಮುಂಗೋಪಿಯಾದ ನಾನು ಕೆಲಸದ ವಿಷಯದಲ್ಲಿ ಗದರಿಸಿದ್ದೇನೆ. ಯಾರಿಗಾದರೂ ನೋವಾಗಿದ್ದರೆ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿನಂತಿಸಿದ ಅವರು, ನಗರದ ಜನತೆಗೆ ಅಭಾರಿಯಾಗಿದ್ದೇನೆ, ಸೇವಾವಧಿಯಲ್ಲಿ ಸಹಕಾರ ನೀಡಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸುವುದಾಗಿ ತಿಳಿಸಿದರು.

ಶಾಸಕ ಹೆಚ್.ಡಿ. ತಮ್ಮಯ್ಯ ಮೊದಲಿನಿಂದಲೂ ನನಗೆ ಉತ್ತಮವಾಗಿ ಕೆಲಸ ಮಾಡುತ್ತಿದ್ದೀರೆಂದು ಬೆನ್ನು ತಟ್ಟುತ್ತಿದ್ದರು. ಇವರ ಜೊತೆಗೆ ನಗರಸಭೆ ಸದಸ್ಯರು ನನ್ನ ಮೇಲೆ ವಿಶ್ವಾಸವಿಟ್ಟುಕೊಂಡಿದ್ದರು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಲಕ್ಷ್ಮಣ್, ಗುರುಮಲ್ಲಪ್ಪ, ರೂಪ ಕುಮಾರ್ ಮತ್ತು ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು. ಮೊದಲಿಗೆ ಸಿಇಓ ಚಂದ್ರಶೇಖರ್ ಸ್ವಾಗತಿಸಿ, ಆರೋಗ್ಯ ನಿರೀಕ್ಷಕ ವೆಂಕಟೇಶ್ ಕೊನೆಯಲ್ಲಿ ವಂದಿಸಿದರು.

Retirement-transfer is a natural process in government employment

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...