Home namma chikmagalur ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ
namma chikmagalurchikamagalurHomeLatest News

ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ

Share
Share

ಚಿಕ್ಕಮಗಳೂರು: ಶಿಕ್ಷಣ, ಆರೋಗ್ಯ, ಜನರ ಬದುಕು ಇವುಗಳಿಗೆ ಆದ್ಯತೆಯನ್ನು ಕೊಡುವ ಸರ್ಕಾರ ಮತ್ತು ಜನಪ್ರತಿನಿಧಿ ನೆರವೇರಿಸಿದಾಗ ಮಾತ್ರ ಅಂತವರು ಜನಮಾನಸದಲ್ಲಿ ಉಳಿಯುತ್ತಾರೆಂದು ಶಾಸಕ ಹೆಚ್.ಡಿ.ತಮ್ಮಯ್ಯ ಅಭಿಪ್ರಾಯಿಸಿದರು.

ಅವರು ಇಂದು ಶಿರವಾಸೆ ವಿವೇಕಾನಂದ ವಿದ್ಯಾಸಂಸ್ಥೆಯ ಸುವರ್ಣ ಮಹೋತ್ಸವ, ಸಂಸ್ಥಾಪಕರ ದಿನಾಚರಣೆ ಶಿವೈಕ್ಯ ಎಸ್.ಬಿ. ಮುಳ್ಳೇಗೌಡರ ಜಯಂತಿ ಕಾರ್ಯಕ್ರಮದಲ್ಲಿ ಶಾಲೆಯ ನೂತನ ಬಸ್ಸನ್ನು ಉದ್ಘಾಟಿಸಿ ಮಾತನಾಡಿ ಇತಿಹಾಸ ಇರುವ ಸುವರ್ಣ ಮಹೋತ್ಸವ ಆಚರಿಸಿಕೊಳ್ಳುತ್ತಿರುವ ವಿವೇಕಾನಂದ ವಿದ್ಯಾಸಂಸ್ಥೆ ಇಂದು ಮಾದರಿಯಾಗಿದೆ. ವಿವಿಧ ಸಂಘ-ಸಂಸ್ಥೆಗಳಲ್ಲಿ ತೊಡಗಿಸಿಕೊಂಡಿದ್ದ ತಾವು ಕನ್ನಡಪರ ಹೋರಾಟಗಳಲ್ಲಿಯೂ ಭಾಗವಹಿಸಿದ್ದ ಪರಿಣಾಮ ಸಾರ್ವಜನಿಕ ಬದುಕಿನಲ್ಲಿ ಯಶಸ್ವಿಯಾಗಲು ಸಹಕಾರಿಯಾಗಿದೆ ಎಂದರು.

ಶಿರವಾಸೆ ಮುಳ್ಳೇಗೌಡರು ಶಿರವಾಸೆಯನ್ನು ಮಾದರಿ ಗ್ರಾಮವನ್ನಾಗಿ ಮಾಡಿ, ಜನರ ಬದುಕಿಗೆ ಅಗತ್ಯವಾಗಿ ಬೇಕಾಗಿದ್ದ ಆಸ್ಪತ್ರೆ, ಸೊಸೈಟಿ, ಗ್ರಾಮ ಪಂಚಾಯಿತಿ, ಶಾಲೆಯನ್ನು ತೆರೆದು ಶಿಕ್ಷಣಕ್ಕೆ ಆದ್ಯತೆ ನೀಡಿದ ಪರಿಣಾಮ ಅವರ ಜಯಂತಿಯನ್ನು ಆಚರಿಸುತ್ತಿರುವುದು ಅರ್ಥಪೂರ್ಣ ಎಂದು ಬಣ್ಣಿಸಿದರು.
ವೀರಶೈವ ಮಠಗಳು ಉಚಿತ ಶಿಕ್ಷಣ, ಉಚಿತ ಅನ್ನದಾಸೋಹ ನಡೆಸುವ ಮೂಲಕ ಸಮಾಜದಲ್ಲಿ ಮುಂಚೂಣಿಯಲ್ಲಿವೆ. ಈ ನಿಟ್ಟಿನಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್ ಅವರು ೬೦ ಲಕ್ಷ ರೂ ವೆಚ್ಚದಲ್ಲಿ ಶಾಲೆಗೆ ವಾಹನ ಕೊಡುಗೆ ನೀಡಿದ್ದಾರೆ ಎಂದರು.

ಎಲ್ಲಾ ವರ್ಗದ ನೌಕರರು, ವ್ಯಾಪಾರಸ್ಥರು ಪ್ರತಿಭಟನೆ ಮೂಲಕ ತಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಂಡರೆ ರೈತರು ಕೃಷಿ ಕಾರ್ಯವನ್ನು ಸ್ಥಗಿತಗೊಳಿಸಿ ಪ್ರತಿಭಟನೆ ನಡೆಸಿದರೆ ಪ್ರಪಂಚ ಹಸಿವಿನಿಂದ ಸಾಯಬೇಕಾಗುತ್ತದೆ. ಇದನ್ನು ಮನಗಂಡು ಅನ್ನದಾತ ಬಂಧುಗಳಿಗೆ ಸರ್ಕಾರಗಳು ಶಕ್ತಿ ತುಂಬುವ ಕೆಲಸ ಮಾಡಬೇಕೆಂದು ಸಲಹೆ ನೀಡಿದರು.

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಶಿಕ್ಷಣ ಹುಲಿಯ ಹಾಲಿದ್ದಂತೆ ಎಂದು ಹೇಳಿದ್ದಾರೆ. ಶ್ರಮಪಟ್ಟು ವಿದ್ಯಾರ್ಥಿಗಳು ಶಿಕ್ಷಣವನ್ನು ಕಲಿತಾಗ ಮಾತ್ರ ಜೀವನದಲ್ಲಿ ಹುಲಿಮರಿಗಳಾಗಿ ಘರ್ಜಿಸುತ್ತೀರಿ ಎಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು. ತಾಲ್ಲೂಕಿನಲ್ಲಿ ನಿವೇಶನ ರಹಿತರಿಗೆ ಕಳೆದ ೨೦ ವರ್ಷಗಳಿಂದ ಮನೆ, ನಿವೇಶನ ನೀಡಲಾಗಿಲ್ಲ ಎಂದು ವಿಷಾಧಿಸಿದ ಅವರು, ಅದಕ್ಕಾಗಿ ಪ್ರತೀ ಪಂಚಾಯಿತಿಯಲ್ಲಿ ೫ ಎಕರೆ ಜಾಗವನ್ನು ಗುರ್ತಿಸಿ ಬಡವರಿಗೆ ಇನ್ನೊಂದು ವರ್ಷದಲ್ಲಿ ಸರ್ಕಾರದ ವತಿಯಿಂದ ಮನೆ, ನಿವೇಶನ ನೀಡುವುದಾಗಿ ಭರವಸೆ ನೀಡಿದರು.

ಸಂಸ್ಥೆಯ ಅಧ್ಯಕ್ಷ ಬಿ.ಎಂ. ಭೋಜೇಗೌಡ ಮಾತನಾಡಿ, ದಾನಿಗಳು ಸಹಾಯ ಹಸ್ತ ನೀಡಿದರೆ ಶಿಕ್ಷಣ ಸಂಸ್ಥೆ ಯಶಸ್ವಿಯಾಗಿ ನಡೆಯುತ್ತದೆ ಎಂಬುದಕ್ಕೆ ವಿವೇಕಾನಂದ ವಿದ್ಯಾಸಂಸ್ಥೆ ಉದಾಹರಣೆಯಾಗಿದೆ. ಇಲ್ಲಿ ಕಲಿತ ವಿದ್ಯಾರ್ಥಿಗಳು ಉನ್ನತ ಹುದ್ದೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ವ್ಯಾಸಂಗ ಮಾಡಿದ ಶಾಲೆಗೆ ಧನಸಹಾಯ ಮಾಡಿದರೆ ಸಂಸ್ಥೆ ಇನ್ನಷ್ಟು ಉತ್ತಮವಾಗಿ ಬೆಳೆಯುತ್ತದೆ ಎಂದು ಹೇಳಿದರು.

ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿ ೫೦ ವರ್ಷಗಳ ಹಿಂದೆ ಎಸ್.ಬಿ ಮುಳ್ಳೇಗೌಡ ರವರ ನೇತೃತ್ವದಲ್ಲಿ ದಾನಿಗಳ ಸಹಾಯದಿಂದ ವಿದ್ಯಾಸಂಸ್ಥೆ ಸ್ಥಾಪನೆ ಮಾಡಲಾಯಿತು, ಸಾವಿರಾರು ವಿದ್ಯಾರ್ಥಿಗಳು ನಮ್ಮ ಸಂಸ್ಥೆಯಲ್ಲಿ ವಿದ್ಯಾಭ್ಯಾಸವನ್ನು ಪಡೆದಿದ್ದಾರೆ ಎಂದರು.

ವಿದ್ಯಾಸಂಸ್ಥೆಯ ಗೌರವ ಕಾರ್ಯದರ್ಶಿ ದೆವಣ್ಣಗೌಡ ಮಾತನಾಡಿದರು. ಕಾರ್ಯದರ್ಶಿ ಶ್ರೀಕಾಂತ್ ಸ್ವಾಗತಿಸಿದರು. ವೇದಿಕೆಯಲ್ಲಿ ಬೆಂಗಳೂರಿನ ಮಹಾಚಂದ್ರ ಪ್ರತಿಷ್ಠಾನ ಅಧ್ಯಕ್ಷರಾದ ಬಿ.ಎಂ. ರವಿಶಂಕರ್, ಸೋಮಶೇಖರ್, ಕೆ.ಆರ್. ಅಣ್ಣೇಗೌಡ, ಶ್ರೀಕಾಂತ್ ಶೆಟ್ಟಿ, ಹೆಚ್.ಪಿ. ಮಂಜೇಗೌಡ, ವೆಂಕಟಶೆಟ್ಟಿ, ಲೀಲಾ ಬಾಬುಪೂಜಾರಿ, ಶಾರದಾ ಎಸ್ ಶೆಟ್ಟಿ, ರಘುನಾಥ್, ಮಲ್ಲೇಶ್, ನರೇಂದ್ರ, ಪ್ರಭುಲಿಂಗಶಾಸ್ತ್ರಿ, ಬಿ.ಎನ್ ವಿಶ್ವನಾಥ್, ವಾಸುಪೂಜಾರಿ, ರಾಜು, ರಮೇಶ್, ಯೋಗೀಶ್, ಆದರ್ಶ್, ಪ್ರಸನ್ನ ಮತ್ತಿತರರು ಉಪಸ್ಥಿತರಿದ್ದರು. ವಿಶ್ವನಾಥ್ ಸ್ವಾಗತಿಸಿ, ಪ್ರಸನ್ನ ನಿರೂಪಿಸಿ, ಸುಭಾಶ್ ವಂದಿಸಿದರು.

Golden Jubilee of Shiravase Vivekananda College

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...