Home Latest News ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆ
Latest NewschikamagalurHomenamma chikmagalur

ಚಿಕ್ಕಮಗಳೂರು ನಗರಸಭೆ ಅಧ್ಯಕ್ಷರಾಗಿ ಶೀಲಾ ದಿನೇಶ್ ಅವಿರೋಧವಾಗಿ ಆಯ್ಕೆ

Share
Share

ಚಿಕ್ಕಮಗಳೂರು: ಇಂದು ನಡೆದ ಚುನಾವಣೆಯಲ್ಲಿ ಜನತಾದಳ ದ ಶೀಲಾ ದಿನೇಶ್ ಒಬ್ಬರೇ ನಾಮ ಪತ್ರ ಸಲ್ಲಿಸಿದ್ದರಿಂದ ಅವಿರೋಧವಾಗಿ ಆಯ್ಕೆಯಾದರು.

ಕಾಂಗ್ರೆಸ್ ತಡರಾತ್ರಿವರೆಗೆ ಕಸರತ್ತು ನಡೆಸಿತಾದರೂ ಏನು ಮಾಡಲಾಗಲಿಲ್ಲಾ ಕೊನೆ ಪಕ್ಷ ಕಾಂಗ್ರೆಸ್ ನಿಂದ ನಾಮ ಪತ್ರ ಸಲ್ಲಿಸಲಿಲ್ಲಾ ಎಂದು ಹಲವು ಮುಖಂಡರು ಬಹಿರಂಗವಾಗಿ ಶಪಿಸುತ್ತಿದ್ದರು.

ಕಾಂಗ್ರೆಸ್ ನ ಅಕ್ಮಲ್ ಬಿಜೆಪಿಯ ನಾಲ್ವರು ಸದಸ್ಯರನ್ನು ಕರೆದುಕೊಂಡು ಬರುವ ಪ್ಲಾನ್ ಠುಸ್ ಆಗಿದ್ದು ಏಕೆ ?

ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ವರಸಿದ್ದಿ ವೇಣುಗೋಪಾಲ ಜೊತೆಗೆ ಹಿರೇಮಗಳೂರು ಕಲ್ಲದೊಡ್ಡಿ ದೊಡ್ಡ ಕುರುಬರ ಹಳ್ಳಿಯ ಸದಸ್ಯರು ಗಳು ಬಂದ ದಾರಿಗೆ ಸುಂಕವಿಲ್ಲ ಎಂದು ಹೊರಟರೆ ಇನ್ನೂ ಮೂರು ಜನ ಕಾದು ಕುಳಿತು ನಂತರ ವಾಪಸ್ ತೆರಳಿದರು ಎಂದು ತಿಳಿದು ಬಂದಿದೆ.

ಶಾಸಕ ತಮ್ಮಯ್ಯ ಮನಸ್ಸು ಮಾಡಿದ್ದರೆ ಅಧಿಕಾರ ಹಿಡಿಯಬಹುದಿತ್ತು ಆದರೆ ತಮ್ಮಯ್ಯ ಎಸ್.ಎಲ್.ಬೋಜೇಗೌಡರನ್ನು ಬಿಡುವಂತಿಲ್ಲ ಎಂಬ ಸಂದಿಗ್ಧ ಸ್ಥಿತಿಯಲ್ಲಿರುವುದರಿಂದ ಕೊನೆಗೆ ಕಾಂಗ್ರೆಸ್ ನಾಮ ಪತ್ರ ಸಲ್ಲಿಸಲಿಲ್ಲ ಎಂದು ಕಾಂಗ್ರೆಸ್ ನವರೆ ಮಾತನಾಡುತಿದ್ದಾರೆ.

ದಿನೇಶ್ ಕೂಡ ಎಲ್ಲರೊಂದಿಗೆ ವಿಶ್ವಾಸದಿಂದ ಇರುವುದರಿಂದ ಅವಿರೋಧ ಆಯ್ಕೆಯಾಯಿತು .

Sheela Dinesh was elected unopposed as Chikmagalur Municipal Council President

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...