Home namma chikmagalur ನಗರಸಭೆಯಲ್ಲಿ ಮೂರೂ ಪಕ್ಷಗಳ ವಿಕೃತ ಮೈತ್ರಿ
namma chikmagalurchikamagalurHomeLatest News

ನಗರಸಭೆಯಲ್ಲಿ ಮೂರೂ ಪಕ್ಷಗಳ ವಿಕೃತ ಮೈತ್ರಿ

Share
Share

ಚಿಕ್ಕಮಗಳೂರು: ನಗರದಲ್ಲಿ ಜು.೫ ರಂದು ನಡೆದ ನಗರಸಭೆಯ ಅಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್‌ನ ವಿಕೃತ ಮೈತ್ರಿಯನ್ನು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿದೆ.

ಇಂದು ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಒಕ್ಕೂಟದ ಮುಖಂಡ ದಂಟರಮಕ್ಕಿ ಶ್ರೀನಿವಾಸ್, ಸಂವಿಧಾನ ಜಾರಿಯಾದಾಗಿನಿಂದ ಈವರೆಗೆ ಅಲ್ಪಸಂಖ್ಯಾತರು, ದಲಿತರು ಮತ್ತು ಹಿಂದುಳಿದ ಬಡವರು, ಜಾತ್ಯಾತೀತ ಜನಪರ ಸಿದ್ಧಾಂತ ಇರುವ ಪಕ್ಷಗಳನ್ನು ಬೆಂಬಲಿಸುತ್ತ ಬಂದಿದೆ ಎಂದು ಹೇಳಿದರು.

ಕರ್ನಾಟಕದ ಎಲ್ಲಾ ಚುನಾವಣೆಗಳಲ್ಲಿ ದಲಿತ ಸಂಘಟನೆಗಳ ಐಕ್ಯತಾ ಚಾಲನಾ ಸಮಿತಿ ತೀರ್ಮಾನದಂತೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲಾಗಿದ್ದು, ಜನರಿಗೋಸ್ಕರ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷ ತನ್ನ ಸಿದ್ಧಾಂತದಂತೆ ನಡೆದುಕೊಳ್ಳುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದರು.

ನಗರಸಭಾಧ್ಯಕ್ಷರ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಸರಳವಾಗಿ ಅಧಿಕಾರ ಹಿಡಿಯುವ ಎಲ್ಲಾ ಸಾಧ್ಯತೆಗಳಿದ್ದರೂ ಕಾಂಗ್ರೆಸ್ ಮುಖಂಡರು ಬಿಜೆಪಿ-ಜೆಡಿಎಸ್ ಅಭ್ಯರ್ಥಿಗೆ ಅವಿರೋಧ ಆಯ್ಕೆಗೆ ಸಹಕರಿಸಿರುವುದು ಮತದಾರರಿಗೆ ಮಾಡಿದ ಅನ್ಯಾಯ ಎಂದು ದೂರಿದರು.
ಹಾಲಿ ಆಯ್ಕೆಯಾಗಿರುವ ಅಲ್ಪಸಂಖ್ಯಾತ ಸದಸ್ಯರಿಗೆ ಸ್ಪಷ್ಟ ಸಿದ್ಧಾಂತದಿಂದ ಇದರ ನೈತಿಕ ಹೊಣೆ ಹೊತ್ತು ನಗರಸಭೆ ಸದಸ್ಯತ್ವಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಮುಂದಿನ ಚುನಾವಣೆಗಳಲ್ಲಿ ಈ ಮೂರು ಪಕ್ಷಗಳನ್ನು ಬಿಟ್ಟು ಜನರಿಗಾಗಿ ಸೇವೆ ಮಾಡುವ ವ್ಯಕ್ತಿಯನ್ನು ಆಯ್ಕೆ ಮಾಡುವ ಜೊತೆಗೆ ಪರ್ಯಾಯ ರಾಜಕಾರಣ ಮಾಡುವ ಅಗತ್ಯ ಇದೆ ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ದಸಂಸ ಜಿಲ್ಲಾ ಸಂಚಾಲಕ ಮರ್ಲೆ ಅಣ್ಣಯ್ಯ ಸಂವಿಧಾನ ಸಂರಕ್ಷಣಾ ವೇದಿಕೆಯ ಕೃಷ್ಣಮೂರ್ತಿ, ಛಲವಾದಿ ಸಂಘದ ರಘು, ಮುಖಂಡರಾದ ಪುಟ್ಟಸ್ವಾಮಿ, ಶೇಖರ್ ಉಪಸ್ಥಿತರಿದ್ದರು.

A perverse alliance of three parties in the municipal council

Share

Leave a comment

Leave a Reply

Your email address will not be published. Required fields are marked *

Don't Miss

ಗುಡುಗು-ಸಿಡಿಲಿನ ಭಾರಿ ಮಳೆಗೆ ಇಡೀ ನಗರ ತಲ್ಲಣ

ಚಿಕ್ಕಮಗಳೂರು: ಶುಕ್ರವಾರ ಮಧ್ಯರಾತ್ರಿ ಗುಡುಗು-ಸಿಡಿಲಿನ ಅಬ್ಬರದೊಂದಿಗೆ ಸುರಿದ ಭಾರಿ ಮಳೆಗೆ ಇಡೀ ನಗರ ತಲ್ಲಣಗೊಂಡಿದೆ. ಮರಗಳು ವಿದ್ಯುತ್ ಕಂಬಗಳ ಸಹಿತ ರಸ್ತೆಗೆ ಉರಳಿದವು. ಹಲವು ಕಟ್ಟಡಗಳ ಚಾವಣಿ ಹಾರಿ ಹೋಗಿವೆ. ಮಧ್ಯರಾತ್ರಿ...

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ನೇಮಕ ನಿಯಮ ಬಾಹಿರ

ಚಿಕ್ಕಮಗಳೂರು: ಇತ್ತೀಚೆಗೆ ಡಿ. ರಾಮೇಗೌಡರವರನ್ನು ಕರ್ನಾಟಕ ರಾಜ್ಯ ರೈತ ಸಂಘದ ಚಿಕ್ಕಮಗಳೂರು ತಾಲ್ಲೂಕು ಘಟಕದ ಅಧ್ಯಕ್ಷನಾಗಿ ನೇಮಕ ಮಾಡಿರುವುದು ನಿಯಮ ಬಾಹಿರವಾಗಿದ್ದು, ಈ ಆಯ್ಕೆ ಅಮಾನ್ಯ ಎಂದು ಜಿಲ್ಲಾಧ್ಯಕ್ಷ ಮಹೇಶ್ ಹೇಳಿದರು....

Related Articles

‘ನಮ್ಮೂರಿಗೆ ರಸ್ತೆ ಅಭಿವೃದ್ಧಿ ಬೇಡ’ ಎಂದು ಗ್ರಾಮಸ್ಥರು….?

ಚಿಕ್ಕಮಗಳೂರು: ಸಾಮಾನ್ಯವಾಗಿ ಗ್ರಾಮಗಳಿಗೆ ರಸ್ತೆ ಬೇಕು, ಕುಡಿಯುವ ನೀರು ಬೇಕು, ವಿದ್ಯುತ್ ಬೇಕು ಎಂದು ಜನ...

ಜಿಲ್ಲೆಯಲ್ಲಿ ಅಧಿಕಗೊಂಡ ನಾಪತ್ತೆ ಪ್ರಕರಣಗಳು

ಚಿಕ್ಕಮಗಳೂರು: ಬೀರೂರು ಮತ್ತು ಲಿಂಗದಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ಪ್ರತ್ಯೇಕ ನಾಪತ್ತೆ ಪ್ರಕರಣಗಳು ದಾಖಲಾಗಿದ್ದು,...

ಮಲೆನಾಡಿನಲ್ಲಿ ಮತ್ತೆ ಅಪಾಯಕಾರಿ ಕಾಲುಸಂಕಗಳನ್ನೇ ಆಶ್ರಯ ಪಡೆದ ಗ್ರಾಮಸ್ಥರು

ಚಿಕ್ಕಮಗಳೂರು: ಕಾಫಿನಾಡಿನ ಮಲೆನಾಡು ಭಾಗದಲ್ಲಿ ನಕ್ಸಲ್ ಚಟುವಟಿಕೆಗಳು ಸ್ತಬ್ಧವಾಗುತ್ತಿದ್ದಂತೆ ಸರ್ಕಾರ ಅಲ್ಲಿನ ಕುಗ್ರಾಮಗಳನ್ನು ಸಂಪೂರ್ಣವಾಗಿ ಕೈಬಿಟ್ಟಿದೆ...

ಜೆಜೆಎಂನಲ್ಲಿ ನಕಲಿ ಛಾಪಾ ಕಾಗದ ಬಳಸಿ ಸರ್ಕಾರಕ್ಕೆ ವಂಚನೆ

ಶೃಂಗೇರಿ:  ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಜೆಜೆಎಂ (ಜಲ ಜೀವನ್ ಮಿಷನ್) ಹಾಗೂ ಟಾಸ್ಕ್ ಫೋರ್ಸ್...