Home Latest News ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ನೌಕರರು ಪ್ರತಿಭಟನೆ
Latest NewschikamagalurHomenamma chikmagalur

ರಾಷ್ಟ್ರೀಕೃತ ಬ್ಯಾಂಕ್‌ಗಳ ಖಾಸಗೀಕರಣ ವಿರೋಧಿಸಿ ನೌಕರರು ಪ್ರತಿಭಟನೆ

Share
????????????????????????????????????
Share

ಚಿಕ್ಕಮಗಳೂರು: ರಾಷ್ಟ್ರೀಕೃತ ಬ್ಯಾಂಕುಗಳ ಖಾಸಗೀಕರಣ ಮಾಡುವ ಧೋರಣೆ ವಿರೋ ಧಿಸಿ ಮತ್ತು ಕಾರ್ಮಿಕರಿಗೆ ಕನಿಷ್ಟ ವೇತನ ಕಾಯ್ದೆ ಜಾರಿ ಮಾಡಬೇಕು ಎಂದು ಆಗ್ರಹಿಸಿ ಜಿಲ್ಲಾ ಬ್ಯಾಂಕ್ ನೌಕರರ ಸಂಘವು ಬುಧವಾರ ನಗರದ ಗುರುನಾಥ ಟಾಕೀಸ್ ಸಮೀಪದ ಕೆನರಾ ಬ್ಯಾಂಕ್ ಕಚೇರಿ ಮುಂ ಭಾಗದಲ್ಲಿ ಪ್ರತಿಭಟನೆ ನಡೆಸಿತು.

ಈ ಕುರಿತು ಮಾತನಾಡಿದ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಆರ್.ಬಸವರಾಜ್ ಕೇಂದ್ರ ಸರ್ಕಾರ ಜನ, ಕಾರ್ಮಿಕ, ರೈತ ವಿರೋಧಿ ಧೋರಣೆ, ಕಾರ್ಮಿಕರ ಕಾನೂನುಗಳಿಗೆ ತಿದ್ದುಪಡಿ ತರುವುದ ನ್ನು ಖಂಡಿಸಿ ಇಂದು ರಾಷ್ಟ್ರ ವ್ಯಾಪಿ ನೌಕರರು ಸಾರ್ವತಿಕ ಮುಷ್ಕರ ಹಮ್ಮಿಕೊಂಡು ಪ್ರತಿಭಟನೆ ನಡೆಸುತ್ತಿದೆ ಎಂದು ತಿಳಿಸಿದರು.

ನೌಕರರ ಮುಖ್ಯ ಬೇಡಿಕೆಗಳಾದ ಸಾರ್ವಜನಿಕ ಬ್ಯಾಂಕ್‌ಗಳನ್ನು ಬಲಪಡಿಸುವುದು, ಬ್ಯಾಂಕ್ ಮತ್ತು ವಿಮಾ ಕಂಪನಿಗಳ ಖಾಸಗೀಕರಣ ಮತ್ತು ಬಂಡವಾಳ ಹಿಂತೆಗೆತ, ರಾಷ್ಟ್ರೀಕೃತ ಬ್ಯಾಂಕ್ ಮತ್ತು ವಿಮಾ ಕಂ ಪನಿಗಳ ವಿಲೀನವನ್ನು ರದ್ದುಗೊಳಿಸಬೇಕು. ಹೆಚ್ಚಿನ ಉದ್ಯೋಗ ನೇಮಕಾತಿ ಮಾಡಬೇಕು ಎಂದು ಒತ್ತಾಯಿ ಸಿದರು.

ನೌಕರರ ಗುತ್ತಿಗೆ ಆಧಾರ ಹಾಗೂ ಹೊರಗುತ್ತಿಗೆ ನಿಲ್ಲಿಸಬೇಕು. ಎನ್.ಪಿ.ಸಿ. ವ್ಯವಸ್ಥೆಯನ್ನು ವಜಾಗೊ ಳಿಸಿ ಹಳೆಯ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸಬೇಕು. ಗ್ರಾಹಕರ ಸುಲಿಗೆಗೆ ಕಾರಣವಾಗಿರುವ ಸರ್ವೀ ಸ್ ಚಾರ್ಚ್ ವ್ಯವಸ್ಥೆಯನ್ನು ನಿಲ್ಲಿಸಬೇಕು. ಎಲ್‌ಐಸಿ ಕಂತುಗಳ ಮೇಲೆ ವಿಧಿಸುತ್ತಿರುವ ಜಿಎಸ್‌ಟಿ ಶುಲ್ಕವ ನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದರು.

ನೌಕರರಿಗೆ ಬ್ಯಾಂಕ್‌ಗಳಲ್ಲಿ ಸಾಕಷ್ಟು ನೇಮಕಾತಿ ಮಾಡಲು, ಹಳೆಯ ಪಿಂಚಣಿ ವ್ಯವಸ್ಥೆಯನ್ನು ಮರು ಜಾರಿಗೊಳಿಸಲು ಕ್ರಮ ಕೈಗೊಳ್ಳಬೇಕು. ಪಿಂಚಣಿ ಸೌಲಭ್ಯ ಕಲ್ಪಿಸಿಕೊಡಲು ಅಖಿಲ ಭಾರತ ಬ್ಯಾಂಕ್ ನೌಕರರ ಸಂಘ, ಅಧಿಕಾರಿಗಳ ಸಂಘ, ಗ್ರಾಮೀಣ ಬ್ಯಾಂಕ್ ಉದ್ಯೋಗಿಗಳ, ಜೀವವಿಮಾ ನೌಕರರು, ಸಾಮಾನ್ಯ ವಿಮಾ ನೌಕರರು ಹಾಗೂ ಕಾರ್ಮಿಕರ ಸಂಘಟನೆಗಳೊಂದಿಗೆ ದೇಶಾದ್ಯಂತ ೨೦ ಕೋಟಿ ಕಾರ್ಮಿಕರು ರಾಷ್ಟ್ರದಲ್ಲಿ ಮುಷ್ಕರ ಹಮ್ಮಿಕೊಂಡಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕೆ.ನಾಗರಾಜ್, ಸಂಘಟನಾ ಕಾರ್ಯದರ್ಶಿ ಉಜ್ವಲ್ ಪಡುಬಿದ್ರಿ, ನೌಕರರಾದ ದಾನೇಂದ್ರ, ಪ್ರದೀಪ್‌ಕುಮಾರ್, ನಿವೃತ್ತ ನೌಕರ ಹೆಚ್.ಟಿ.ಹಾಲಪ್ಪ ಸೇರಿದಂತೆ ಮತ್ತಿತರರಿ ದ್ದರು.

Employees protest against privatization of nationalized banks

 

Share

Leave a comment

Leave a Reply

Your email address will not be published. Required fields are marked *

Don't Miss

ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲ

ಬೀರೂರು: ‘ದೇಶದ ಅಭಿವೃದ್ಧಿ ವಿಷಯದಲ್ಲಿ ರಾಜಕಾರಣ ಇಲ್ಲದೆ ಮುಂದಿನ ಪೀಳಿಗೆಗೆ ಕೊಡುಗೆಯಾಗುವಂಥ ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ’ ಎಂದು ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಸಚಿವ ವಿ.ಸೋಮಣ್ಣ ತಿಳಿಸಿದರು. ಪಟ್ಟಣದ ಮಾರ್ಕೆಟ್ ರಸ್ತೆಯಲ್ಲಿ ಭಾನುವಾರ...

ಅಜ್ಜಂಪುರದ ರೈಲ್ವೆ ಲೆವೆಲ್ ಕ್ರಾಸಿಂಗ್ ರಸ್ತೆ ಮೇಲ್ಸೇತುವೆ ಕಾಮಗಾರಿಗೆ ಚಾಲನೆ

ಚಿಕ್ಕಮಗಳೂರು:  ದೇಶದ ಅಭಿವೃದ್ಧಿಯ ಸಂಕೇತವೇ ರೈಲ್ವೆಯಾಗಿದ್ದು, ರೈಲ್ವೆ ಇಲಾಖೆಯನ್ನು ಎಷ್ಟು ಮಟ್ಟಿಗೆ ಅಭಿವೃದ್ಧಿಪಡಿಸುತ್ತೇವೆಯೋ ಅಷ್ಟು ದೇಶಕ್ಕೆ ಒಳ್ಳೆಯದಾಗುತ್ತದೆ ಎಂಬುದು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವಾಗಿದೆ ಎಂದು ಕೇಂದ್ರ ರೈಲ್ವೆ ರಾಜ್ಯ...

Related Articles

ಜಿಲ್ಲೆಯಲ್ಲಿ ಗೂಟದ ಕಾರಿಗಾಗಿ “ಕೈ ಪಡೆ” ಯ ಕಸರತ್ತು !

ಚಿಕ್ಕಮಗಳೂರು: ಮುಖ್ಯ ಮಂತ್ರಿಯಾಗಿದ್ದ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದರಿಂದ ಉಳಿದ ಎರಡು ವರ್ಷಗಳ ಅವಧಿಗೆ ಡಿ.ಕೆ.ಮುಖ್ಯಮಂತ್ರಿಯಾಗಿ ದೇವಸ್ಥಾನ,...

ಧಾರಾಕಾರ ಮಳೆಗೆ ಕಾಫಿಸಿಟಿ ಫುಲ್ ಕೂಲ್

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ವರುಣನ ಅಬ್ಬರ ಜೋರಾಗಿದ್ದು ತಾಲೂಕಿನಾದ್ಯಂತ ಧಾರಾಕಾರ ಮಳೆ ಸುರಿಯುತ್ತಿದ್ದು ಕಾಫಿ ಸಿಟಿ ಈಗ...

ಸರ್ಕಾರದ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶ

ಕಳಸ: ಸರ್ಕಾರದ ಬೇಜವಾಬ್ದಾರಿತನ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದ ವಿರುದ್ಧ ಮಲೆನಾಡಿಗರು ಆಕ್ರೋಶದ ತೊಡೆ ತಟ್ಟಿದ್ದಾರೆ. ಸ್ವಾತಂತ್ರ್ಯ...

ಭಾರಿ ಮಳೆಯ ಆರ್ಭಟಕ್ಕೆ ಮೆಸ್ಕಾಂಗೆ 3.21 ಕೋಟಿ ಹಾನಿ

ಚಿಕ್ಕಮಗಳೂರು: ಮುಂಗಾರುಪೂರ್ವ ಮಳೆ ಮತ್ತು ಭಾರಿ ಗಾಳಿಯ ಆರ್ಭಟಕ್ಕೆ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಮೆಸ್ಕಾಂ ವ್ಯಾಪ್ತಿಯಲ್ಲಿ ಭಾರಿ...