Home namma chikmagalur ಸೋಲಿನ ಹತಾಶೆಯಿಂದ ಸಿ.ಟಿ.ರವಿ ಪ್ರತಿಭಟನೆ
namma chikmagalurchikamagalurHomeLatest News

ಸೋಲಿನ ಹತಾಶೆಯಿಂದ ಸಿ.ಟಿ.ರವಿ ಪ್ರತಿಭಟನೆ

Share
Share

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಸೋಲಿನ ಹತಾಶೆಯಿಂದ ಹೊರಬರಲಾರದೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ. ಮಂಜೇಗೌಡ ಆರೋಪಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕೇಂದ್ರಸರ್ಕಾರದ ವೈಫಲ್ಯದ ವಿರುದ್ಧ ಸಧ್ಯದಲ್ಲೇ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ಹೇಳಿದರು.

೨೦೦೪ ರಿಂದ ೨೦೨೩ ರವರೆಗೆ ಬಿಜೆಪಿಯ ಸಿ.ಟಿ. ರವಿ ಶಾಸಕರಾಗಿ ಆಯ್ಕೆಯಾಗಿದ್ದು, ನಿವೇಶನ ರಹಿತರಿಗೆ ನಿವೇಶನ ಹಂಚುವ ಕೆಲಸ ಮಾಡಲಿಲ್ಲ, ನಗರ ಗ್ರಾಮಾಂತರ ಭಾಗದಲ್ಲಿ ೪೦-೫೦ ವರ್ಷಗಳಿಂದ ವಾಸವಿದ್ದ ಯಾರೊಬ್ಬರಿಗೂ ಹಕ್ಕುಪತ್ರ ಕೊಡಿಸುವ ಕೆಲಸವನ್ನು ಮಾಡಲಿಲ್ಲ ಎಂದು ಟೀಕಿಸಿದರು.

ಗ್ರಾಮೀಣ ಭಾಗದ ಜನರಿಗೆ ಏಕ ಸರ್ವೇ ನಂಬರ್‌ಗಳಲ್ಲಿ ಮಂಜೂರಾದ ಜಮೀನುಗಳಿಗೆ ೧-೫ ಮಾಡಿ ಪೋಡಿ ಮಾಡಲಿಲ್ಲ, ರಾಜ್ಯಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಕಂದಾಯ ಗ್ರಾಮ ಮತ್ತು ಉಪಗ್ರಾಮಗಳ ರಚನೆ ಮಾಡಿ, ಹಕ್ಕುಪತ್ರ ನೀಡುವ ಜನಪರ ಕೆಲಸಗಳನ್ನು ಶಾಸಕರು, ಕಂದಾಯ ಸಚಿವ ಕೃಷ್ಣಬೈರೇಗೌಡ ನಡೆಸುತ್ತಿದ್ದಾರೆಂದು ಹೇಳಿದರು.

ರೈತರ ಜಮೀನಿನ್ನು ಪೋಡಿ ಮಾಡಿಸಿ ಎಲ್ಲಾ ಕಂದಾಯ ಇಲಾಖೆ ದಾಖಲೆಗಳು ಆನ್‌ಲೈನ್‌ನಲ್ಲಿ ರೈತರಿಗೆ ಸುಲಭವಾಗಿ ಸಿಗುವಂತೆ ಮಾಡಲು ಕ್ರಮವಹಿಸಲಾಗುತ್ತಿದೆ. ೧೯ ವರ್ಷಗಳ ಅಧಿಕಾರದಲ್ಲಿದ್ದಾಗ ಸಿ.ಟಿ. ರವಿ ಜನರ ಮೂಲಭೂತ ಸಮಸ್ಯೆಗಳ ಅರಿವಿಲ್ಲದೆ ಈಗ ಪ್ರತಿಭಟನೆಯ ಹೆಸರಿನಲ್ಲಿ ಮೊಸಳೆ ಕಣ್ಣೀರು ಸುರಿಸುತ್ತಿರುವುದು ಇವರ ಆಷಾಢ ಭೂತಿತನಕ್ಕೆ ಪ್ರತ್ಯಕ್ಷ ಸಾಕ್ಷಿ ಎಂದರು.

ಇದೂವರೆಗೆ ರಾಜ್ಯ, ದೇಶ ಸುತ್ತುತ್ತಿದ್ದ ಇವರು, ಈಗ ಗ್ರಾಮಗಳ ಕಡೆಗೆ ಬರುವಂತಾಗಿದ್ದು, ಪ್ರತೀ ಕುಟುಂಬಕ್ಕೆ ಸರ್ಕಾರ ಪಂಚ ಗ್ಯಾರಂಟಿಗಳ ಮೂಲಕ ಸಾವಿರಾರು ರೂಪಾಯಿಗಳನ್ನು ನೀಡುತ್ತಿದೆ. ಇದರಿಂದ ಬಡವರ ಬದುಕು ಹಸನಾಗಿದ್ದು, ಮುಂಬರುವ ತಾ.ಪಂ, ಜಿ.ಪಂ ಚುನಾವಣೆಗಳನ್ನು ಎದುರಿಸುವ ಭಯದಿಂದ ಬಿಜೆಪಿಯವರು ಪ್ರತಿಭಟನೆ ನಡೆಸುತ್ತಿರುವುದು ಪ್ರಜ್ಞಾವಂತ ಮತದಾರರು ಅರಿತಿದ್ದಾರೆ ಎಂದು ಹೇಳಿದರು.

ಕೇಂದ್ರ ಸರ್ಕಾರ ಡಿಎಪಿ ರಸಗೊಬ್ಬರ, ಗೃಹಬಳಕೆ ಅಡುಗೆ ಅನಿಲ ಮತ್ತಿತರೆ ವಸ್ತುಗಳನ್ನು ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿದ ಅವರು, ಗ್ರಾ.ಪಂ ಯಲ್ಲಿ ಪ್ರತಿಭಟನೆ ಮಾಡಲು ಯಾವ ನೈತಿಕತೆ ಇದೆ ಎಂದು ಪ್ರಶ್ನಿಸಿದರು.

ರಾಜ್ಯಸರ್ಕಾರ ಯಾವುದೇ ಕಾರಣಕ್ಕೂ ಬಡವರ ಬಿಪಿಎಲ್ ಕಾರ್ಡ್ ರದ್ದು ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದ ಅವರು, ತೆರಿಗೆ ಪಾವತಿಸುವವರಿಗೆ, ಸರ್ಕಾರಿ ನೌಕರರಿಗೆ, ಶ್ರೀಮಂತರಿಗೆ ಬಿಪಿಎಲ್ ಪಡಿತರ ಸೌಲಭ್ಯ ಸಿಗಬಾರದು ಎಂಬ ಕಾರಣಕ್ಕೆ ಪರಿಶೀಲನೆಗೆ ಆದೇಶಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ನಗರಸಭೆ ಸದಸ್ಯ ಮುನೀರ್ ಅಹಮದ್, ಪ್ರವೀಣ್ ಬೆಟ್ಟಗೆರೆ, ಜಗದೀಶ್, ಪ್ರಕಾಶ್ ಉಪಸ್ಥಿತರಿದ್ದರು.

C.T. Ravi protests due to frustration over defeat

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...