Home Latest News ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ
Latest NewschikamagalurHomenamma chikmagalur

ಮರ್ಕಲ್ ತೋಟದಲ್ಲಿ ಜಾನುವಾರು ಹತ್ಯೆ ಆರೋಪಿಗಳ ಬಂಧನ

Share
Share

ಮೂಡಿಗೆರೆ: ತಾಲ್ಲೂಕಿನ ಬಾಳೂರು ಹೋಬಳಿಯ ಮರ್ಕಲ್ ಎಸ್ಟೇಟ್ ಕಾಫಿ ತೋಟದೊಳಗೆ ಗುರುವಾರ ಮಧ್ಯಾಹ್ನ ಜಾನುವಾರು ಹತ್ಯೆಯಾಗಿ ಮಾಂಸ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ಮಾಹಿತಿಯ ಪ್ರಕಾರ, ಜುಲೈ ೯ರಂದು ಮಧ್ಯಾಹ್ನ ೩:೩೦ ರಿಂದ ಸಂಜೆ ೭:೩೦ ರ ಒಳಗೆ ಯಾರೋ ಅಪರಿಚಿತ ವ್ಯಕ್ತಿಗಳು ತೋಟದೊಳಗೆ ಒಂದು ಜಾನುವಾರುವನ್ನು (ಹಸು) ಹತ್ಯೆ ಮಾಡಿ ಮಾಂಸ ಮಾಡಿರುವುದು ಕಂಡು ಬಂದಿದೆ. ಜಾನುವಾರುವಿನ ತಲೆ, ಕಾಲುಗಳು, ಚರ್ಮ, ಮಾಂಸ, ಲಿವರ್, ಇತರೆ ಅಂಗಾಂಗಗಳು ಸ್ಥಳದಲ್ಲೇ ಪತ್ತೆಯಾಗಿವೆ.

ಸ್ಥಳ ಪರಿಶೀಲನೆಗೆ ಆಗಮಿಸಿದ ಬಾಳೂರು ಪೊಲೀಸ್ ಠಾಣೆಯ ಪಿಎಸ್‌ಐ ದಿಲೀಪ್ ಕುಮಾರ್ ಅವರ ಮಾಹಿತಿ ಪ್ರಕಾರ, ತೋಟದ ರೈಟರ್ ಅಭಿಲಾಷ್ ಅವರ ಹೇಳಿಕೆಯಂತೆ, ಅಸ್ಸಾಂ ಮೂಲದ ಸುಮಾರು ೧೫ ಮಂದಿ ಕೂಲಿ ಕಾರ್ಮಿಕರು ತಮ್ಮ ಕುಟುಂಬಗಳೊಂದಿಗೆ ತೋಟದ ಲೈನ್‌ನಲ್ಲಿ ವಾಸವಿದ್ದು, ಘಟನೆಯ ಸಮಯದಲ್ಲಿ ಕೆಲವರು ತೋಟದೊಳಗೆ ಓಡಾಡುತ್ತಿರುವುದು ಕಂಡುಬಂದಿದೆ. ಮಾಂಸ ತಯಾರಿಸಲು ಮರದ ತುಂಡು ಹಾಗೂ ಅಂಗಾಂಗಗಳನ್ನು ಹೂಳಲು ಬಳಸಿದ ಗುದ್ದಲಿ ಸ್ಥಳದಲ್ಲಿ ಪತ್ತೆಯಾಗಿದೆ.

ಅಜೀರ್ ಅಕ್ಮಲ್, ಅಕ್ಕಾಸ್ ಅಲಿ, ನಜ್ರುಲ್ ಹಕ್, ಇಜಾಬುಲ್ ಹಕ್, ಮೆಹರ್ ಅಲಿ, ಮಂಜುಲ್ ಹಕ್ ಬಂಧಿತ ಆರೋಪಿಗಳು ಜಾನುವಾರುವಿನ ಅಂಗಾಂಗಗಳನ್ನು ಪಶುವೈದ್ಯರ ಸಹಾಯದಿಂದ ಪರೀಕ್ಷಿಸಿ, ನಂತರ ಉಪ ವಿಭಾಗೀಯ ದಂಡಾಧಿಕಾರಿಗಳ ಅನುಮತಿಯನ್ನು ಪಡೆದು ನಾಶಪಡಿಸಲಾಯಿತು. ಈ ಸಂಬಂಧ ಬಾಳೂರು ಪೊಲೀಸ್ ಠಾಣೆಯಲ್ಲಿ ೩೦೩(೨) ಬಿ.ಎನ್.ಎಸ್ ಮತ್ತು ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಕಾಯ್ದೆ ೨೦೨೦ರ ಕಲಂ ೧೨(೧) ಅನ್ವಯ ಪ್ರಕರಣ ದಾಖಲಾಗಿದೆ.

Accused of killing cattle in Merkel farm arrested

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...