Home namma chikmagalur ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು
namma chikmagalurchikamagalurHomeLatest News

ಜಾನುವಾರು ಕಳ್ಳರಿಂದ 4 ಹಸುಗಳನ್ನು ವಶಕ್ಕೆ ಪಡೆದ ಪೋಲಿಸರರು

Share
Share

ಕಳಸ: ಜಾನುವಾರು ಕಳ್ಳರನ್ನು ಶುಕ್ರವಾರ ನಸುಕಿನಲ್ಲಿ ಬೆನ್ನಟ್ಟಿದ ಕಳಸ ಪೊಲೀಸರು ವಾಹನ, 4 ಹಸುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಬಲಿಗೆ- ಹೊರನಾಡು ಕಡೆಯಿಂದ ಬಂದ ವಾಹನದ ಬಗ್ಗೆ ಮಾಹಿತಿ ಸಿಕ್ಕಿದ್ದರಿಂದ ಕಳಸ ಪೊಲೀಸರು ಪಿಎಸ್‌ಐ ಚಂದ್ರಶೇಖರ್ ನೇತೃತ್ವದಲ್ಲಿ ಕಾರ್ಯಾಚರಣೆ ಆರಂಭಿಸಿದ್ದರು. ವಾಹನ ದಾರಿಮನೆ- ಹಳುವಳ್ಳಿ ರಸ್ತೆಯಲ್ಲಿ ಸಾಗಿದ್ದನ್ನು ಖಚಿತಪಡಿಸಿಕೊಂಡ ಪೊಲೀಸರು ಅದೇ ಮಾರ್ಗದಲ್ಲಿ ಬೆಳಗಿನ ಜಾವ 1.30ರ ಸುಮಾರಿಗೆ ಹೊರಟಿದ್ದರು.

ಸ್ವಲ್ಪ ದೂರ ಸಾಗಿದಾಗ ದನ ಕಳ್ಳರು ವಾಹನಕ್ಕೆ ಜಾನುವಾರು ತುಂಬಿಸುತ್ತಿದ್ದು ಕಂಡು ಬಂದಿದೆ. ಪೊಲೀಸ್ ವಾಹನ ಕಳ್ಳರ ವಾಹನಕ್ಕಿಂತ ಮುಂದೆ ಹೋಗಿ ಅವರ ವಾಹನ ಅಡ್ಡಗಟ್ಟಿತು. ಅಷ್ಟರಲ್ಲಿ ಕಳ್ಳರು ವಾಹನವನ್ನು ಹಿಂದಕ್ಕೆ ತಿರುಗಿಸಿ ಪರಾರಿಯಾಗಲು ಯತ್ನಿಸಿದರು. ಪೊಲೀಸರು ಬೆನ್ನಟ್ಟಿದಾಗ ವಾಹನವನ್ನು ಅಲ್ಲೇ ಬಿಟ್ಟು ರಸ್ತೆ ಪಕ್ಕದ ಕಾಫಿ ತೋಟದ ಒಳಗೆ ಕಳ್ಳರು ಓಡಿ ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದನಕಳ್ಳರ ವಾಹನದಲ್ಲಿ 4 ಹಸುಗಳು, 3 ಫೋನ್ ಮತ್ತು ಒಂದು ಕಬ್ಬಿಣದ ರಾಡ್ ಪತ್ತೆ ಆಗಿದೆ. ವಾಹನದ ನಂಬರ್ ಪ್ಲೇಟ್ ನಕಲಿ ಎಂದು ತಿಳಿದುಬಂದಿದೆ. ಲಭ್ಯವಿರುವ ಮಾಹಿತಿ ಅನುಸರಿಸಿ ಕಳ್ಳರನ್ನು ಸದ್ಯದಲ್ಲೇ ಬಂಧಿಸಲಾಗುವುದು ಎಂದು ಕಳಸ ಠಾಣಾಧಿಕಾರಿ ಚಂದ್ರಶೇಖರ್ ತಿಳಿಸಿದ್ದಾರೆ.

Police seize 4 cows from cattle thief

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...